ಬ್ರೇಕಿಂಗ್ ನ್ಯೂಸ್
11-12-20 02:37 pm Headline Karnataka News Network ಕರ್ನಾಟಕ
ಮಂಗಳೂರು, ಡಿ.11: ಬಹು ನಿರೀಕ್ಷಿತ ಮಂಗಳೂರು - ಮೈಸೂರು ವಿಮಾನ ಯಾನ ಸೇವೆಗೆ ಕೊನೆಗೂ ಚಾಲನೆ ಸಿಕ್ಕಿದೆ. ಇಂದು ಬೆಳಗ್ಗೆ 11.30ಕ್ಕೆ ಮೈಸೂರಿನಲ್ಲಿ ಹೊರಟ ಅಲಯನ್ಸ್ ಏರ್ ವಿಮಾನ 12.30ಕ್ಕೆ ಮಂಗಳೂರಿಗೆ ತಲುಪಿದೆ. ಮೊದಲ ಪ್ರಯಾಣದಲ್ಲಿ 25 ಮಂದಿ ಮೈಸೂರಿನಿಂದ ಮಂಗಳೂರಿಗೆ ಆಗಮಿಸಿದ್ದಾರೆ.
ಮಂಗಳೂರು ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ನಿಲ್ದಾಣ ಪ್ರಾಧಿಕಾರದ ವತಿಯಿಂದ ಸ್ವಾಗತಿಸಲಾಯ್ತು. ವಿಮಾನಕ್ಕೆ ನೀರು ಚಿಮುಕಿಸಿ ಸ್ವಾಗತ ನೀಡಲಾಯ್ತು. ವಿಮಾನ ನಿಲ್ದಾಣದ ನಿರ್ದೇಶಕ ವಿವಿ ರಾವ್ ಸೇರಿದಂತೆ ಅದಾನಿ ಕಂಪನಿಯ ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.
ಉಭಯ ನಗರಗಳ ನಡುವೆ ಇದೇ ಮೊದಲ ಬಾರಿಗೆ ವಿಮಾನ ಸಂಚಾರ ಆರಂಭಗೊಂಡಿದೆ. ಅಲಯನ್ಸ್ ವಿಮಾನವೇ ಮಂಗಳೂರಿಗೆ ಬಂದು ಮರಳಿ 12.55ಕ್ಕೆ ಮೈಸೂರಿಗೆ ತೆರಳುತ್ತದೆ. ಬುಧವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರಗಳಂದು ಈ ವಿಮಾನ ಸಂಚಾರ ನಡೆಸಲಿದೆ. ಪ್ರತಿ ದಿನವೂ ವಿಮಾನ ಸಂಚಾರದ ಸಮಯ ಇದೇ ಆಗಿರುತ್ತದೆ. ಮಂಗಳೂರಿನಿಂದ ಮೈಸೂರಿಗೆ ನಿರ್ಗಮಿಸಿದ ವಿಮಾನದಲ್ಲಿ 31 ಮಂದಿ ಪ್ರಯಾಣಿಕರು ಇದ್ದರು. ದಿನವಹಿ ಪ್ರಯಾಣಿಕರ ಸಂಖ್ಯೆ ನೋಡಿಕೊಂಡು ಸಂಚಾರ ಹೆಚ್ಚಿಸುವ ಇರಾದೆ ಅಧಿಕಾರಗಳದ್ದಿದೆ.

ಮೈಸೂರು ಸಾಂಸ್ಕೃತಿಕ ನಗರಿಯಾಗಿದ್ದು, ವೀಕೆಂಡ್ ಗಳಲ್ಲಿ ಮಂಗಳೂರಿನ ಜನ ಅತ್ತ ಪ್ರಯಾಣಿಸುತ್ತಾರೆ. ಅಲ್ಲದೆ, ಮಂಗಳೂರಿಗೆ ಆಗಮಿಸುವ ಪ್ರವಾಸಿಗರು ಮೈಸೂರಿನಿಂದ ತುರ್ತಾಗಿ ಬರಲು ಈ ವಿಮಾನಗಳನ್ನು ಅನುಸರಿಸಲಿದ್ದಾರೆ. ಮೈಸೂರಿನಲ್ಲಿ ಮೊದಲ ವಿಮಾನಕ್ಕೆ ಅಲ್ಲಿನ ಸಂಸದ ಪ್ರತಾಪಸಿಂಹ ಚಾಲನೆ ನೀಡಿದರು. ಮಂಗಳೂರು- ಮೈಸೂರು ವಿಮಾನ ಸಂಚಾರಕ್ಕಾಗಿ ಹೆಚ್ಚು ಒತ್ತಡ ಹೇರಿ ಕೆಲಸ ಮಾಡಿದವರು ಪ್ರತಾಪಸಿಂಹ. ಪ್ರತಾಪಸಿಂಹ ಒತ್ತಾಸೆಯಿಂದಾಗಿ ಖಾಸಗಿ ವಿಮಾನ ಕಂಪನಿ ಈಗ ಉಭಯ ನಗರಗಳ ನಡುವೆ ಸಂಚಾರ ಆರಂಭಿಸಿದೆ.
The most awaited flight services Mysore to Mangalore has now begun.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm