ಬ್ರೇಕಿಂಗ್ ನ್ಯೂಸ್
14-10-24 08:51 pm Bangalore Correspondent ಕರ್ನಾಟಕ
ಬೆಂಗಳೂರು, ಅ.14: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ A-2 ಆರೋಪಿ ಹಾಗೂ ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿರುವ ಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿ ತೀರ್ಪು ನೀಡಿದೆ.
ಪ್ರಕರಣದಲ್ಲಿ ಪೋಲಿಸರಿಂದ ಚಾರ್ಜ್ಶೀಟ್ ಸಲ್ಲಿಕೆಯಾದ ಬೆನ್ನಲ್ಲೇ ದರ್ಶನ್ ಜಾಮೀನು ಕೋರಿ ಕೋರ್ಟಿಗೆ ಅರ್ಜಿ ಸಲ್ಲಿಸಲಾಗಿತ್ತು. ದರ್ಶನ್ ಪರ ಹಿರಿಯ ವಕೀಲರಾದ ಸಿ.ವಿ.ನಾಗೇಶ್ ವಾದ ಮಂಡಿಸಿದ್ದರೆ, ತನಿಖಾಧಿಕಾರಿಗಳ ಪರವಾಗಿ ಎಸ್ಪಿಪಿ ಪ್ರಸನ್ನಕುಮಾರ್ ಪ್ರತಿವಾದಿಸಿದ್ದರು. ಬೆಂಗಳೂರಿನ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲದ ನ್ಯಾ.ಜೈಶಂಕರ್ ಅವರು ದರ್ಶನ್ ಜಾಮೀನು ಅರ್ಜಿ ತೀರ್ಪನ್ನು ಕಾಯ್ದಿರಿಸಿ ಅ.10ರಂದು ಆದೇಶ ಹೊರಡಿಸಿದ್ದರು.
ಪ್ರಕರಣದಲ್ಲಿ ತಮ್ಮ ಕಕ್ಷಿದಾರ ದರ್ಶನ್ ಪರ ಪೊಲೀಸರು ಸಾಕ್ಷಿಗಳನ್ನು ಸೃಷ್ಟಿಸಿದ್ದಾರೆ. ಮಾಧ್ಯಮಗಳ ವರದಿಗಳಿಂದ ತನಿಖಾಧಿಕಾರಿಗಳು ಪ್ರಭಾವಕ್ಕೆ ಒಳಗಾಗಿ ತನಿಖೆ ಮಾಡಿದಂತಿದೆ. ಮಹಜರು ಪ್ರಕ್ರಿಯೆ, ಸ್ವಇಚ್ಚಾ ಹೇಳಿಕೆ, ತಡವಾಗಿ ಸಾಕ್ಷಿಗಳ ಹೇಳಿಕೆ ಪಡೆಯುವುದು, ಸಾಕ್ಷಿಗಳ ಸಂಗ್ರಹದಲ್ಲಿ ವಿಳಂಬ, FSL ವರದಿಗಳಲ್ಲಿನ ಲೋಪ, ತನಿಖೆಯ ಪ್ರತಿ ಹಂತಗಳಲ್ಲೂ IOs (ತನಿಖಾಧಿಕಾರಿಗಳು) ಎಡವಿದ್ದಾರೆ ಎಂದು ವಾದ ಸಲ್ಲಿಕೆಯಾಗಿತ್ತು.
ದರ್ಶನ್ ಅವರನ್ನು ಪ್ರಕರಣದಲ್ಲಿ ಸಿಲುಕಿಸುವ ಷಡ್ಯಂತ್ರ ನಡೆದಿದೆ. ರೇಣುಕಾಸ್ವಾಮಿ ಪವಿತ್ರಾ ಗೌಡಗೆ ಚಾಟಿಂಗ್ ಮಾಡಿದ ವಿಚಾರ ದರ್ಶನ್ಗೆ ಗೊತ್ತಿರಲಿಲ್ಲ. ಅವರ ಚಾಟಿಂಗ್ ವೇಳೆ ದರ್ಶನ್ ಕಾಶ್ಮೀರದ ಪ್ರವಾಸದಲ್ಲಿದ್ದರು. ಅಪಹರಣ ಮತ್ತು ಕೊಲೆಯಲ್ಲಿ ದರ್ಶನ್ ಪಾತ್ರವಿಲ್ಲ. ಇದೊಂದು ಕೆಟ್ಟ ತನಿಖಾ ವರದಿ ಎಂದು ಸಿ.ವಿ.ನಾಗೇಶ್ ಅವರು ಕೋರ್ಟ್ ಮುಂದೆ ಪೊಲೀಸರು ಲೋಪ ದೋಷಗಳ ಎಂದು ವಾದಿಸಿದ್ದರು.
ಇದಕ್ಕೆ ಪ್ರಬಲವಾಗಿ ವಿರೋಧಿಸಿದ್ದ ಎಸ್ಪಿಪಿ ಪ್ರಸನ್ನಕುಮಾರ್, ಪೊಲೀಸರು ಕೊಲೆಗೆ ಸಂಬಂಧಿಸಿ ಎಲ್ಲಾ ಟೆಕ್ನಿಕಲ್ ಸಾಕ್ಷಿಗಳನ್ನೂ ಕಲೆ ಹಾಕಿಯೇ ತನಿಖೆ ಮಾಡಿದ್ದಾರೆ. ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ, ಬೆಂಗಳೂರಿನ ಪಟ್ಟಣಗೆರೆ ಶೆಡ್ಗೆ ಕರೆ ತಂದು ಥಳಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಇದೊಂದು ಪೂರ್ವ ನಿಯೋಜಿತ ಕೃತ್ಯ. ಇದರಲ್ಲಿ ದರ್ಶನ್ ಮತ್ತವರ ಆಪ್ತೆ ಪವಿತ್ರಾಗೌಡ, ಇನ್ನಿತರ ಆರೋಪಿಗಳು ಭಾಗಿದಾರಿಗಳು ಎಂದು ವಾದಿಸಿದ್ದರು.
A lower court in Bengaluru on Monday rejected the bail applications of actor Darshan Thoogudeepa and his close friend Pavithra Gowda in the Renukaswamy murder case.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm