ಬ್ರೇಕಿಂಗ್ ನ್ಯೂಸ್
14-10-24 08:51 pm Bangalore Correspondent ಕರ್ನಾಟಕ
ಬೆಂಗಳೂರು, ಅ.14: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ A-2 ಆರೋಪಿ ಹಾಗೂ ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿರುವ ಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿ ತೀರ್ಪು ನೀಡಿದೆ.
ಪ್ರಕರಣದಲ್ಲಿ ಪೋಲಿಸರಿಂದ ಚಾರ್ಜ್ಶೀಟ್ ಸಲ್ಲಿಕೆಯಾದ ಬೆನ್ನಲ್ಲೇ ದರ್ಶನ್ ಜಾಮೀನು ಕೋರಿ ಕೋರ್ಟಿಗೆ ಅರ್ಜಿ ಸಲ್ಲಿಸಲಾಗಿತ್ತು. ದರ್ಶನ್ ಪರ ಹಿರಿಯ ವಕೀಲರಾದ ಸಿ.ವಿ.ನಾಗೇಶ್ ವಾದ ಮಂಡಿಸಿದ್ದರೆ, ತನಿಖಾಧಿಕಾರಿಗಳ ಪರವಾಗಿ ಎಸ್ಪಿಪಿ ಪ್ರಸನ್ನಕುಮಾರ್ ಪ್ರತಿವಾದಿಸಿದ್ದರು. ಬೆಂಗಳೂರಿನ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲದ ನ್ಯಾ.ಜೈಶಂಕರ್ ಅವರು ದರ್ಶನ್ ಜಾಮೀನು ಅರ್ಜಿ ತೀರ್ಪನ್ನು ಕಾಯ್ದಿರಿಸಿ ಅ.10ರಂದು ಆದೇಶ ಹೊರಡಿಸಿದ್ದರು.
ಪ್ರಕರಣದಲ್ಲಿ ತಮ್ಮ ಕಕ್ಷಿದಾರ ದರ್ಶನ್ ಪರ ಪೊಲೀಸರು ಸಾಕ್ಷಿಗಳನ್ನು ಸೃಷ್ಟಿಸಿದ್ದಾರೆ. ಮಾಧ್ಯಮಗಳ ವರದಿಗಳಿಂದ ತನಿಖಾಧಿಕಾರಿಗಳು ಪ್ರಭಾವಕ್ಕೆ ಒಳಗಾಗಿ ತನಿಖೆ ಮಾಡಿದಂತಿದೆ. ಮಹಜರು ಪ್ರಕ್ರಿಯೆ, ಸ್ವಇಚ್ಚಾ ಹೇಳಿಕೆ, ತಡವಾಗಿ ಸಾಕ್ಷಿಗಳ ಹೇಳಿಕೆ ಪಡೆಯುವುದು, ಸಾಕ್ಷಿಗಳ ಸಂಗ್ರಹದಲ್ಲಿ ವಿಳಂಬ, FSL ವರದಿಗಳಲ್ಲಿನ ಲೋಪ, ತನಿಖೆಯ ಪ್ರತಿ ಹಂತಗಳಲ್ಲೂ IOs (ತನಿಖಾಧಿಕಾರಿಗಳು) ಎಡವಿದ್ದಾರೆ ಎಂದು ವಾದ ಸಲ್ಲಿಕೆಯಾಗಿತ್ತು.
ದರ್ಶನ್ ಅವರನ್ನು ಪ್ರಕರಣದಲ್ಲಿ ಸಿಲುಕಿಸುವ ಷಡ್ಯಂತ್ರ ನಡೆದಿದೆ. ರೇಣುಕಾಸ್ವಾಮಿ ಪವಿತ್ರಾ ಗೌಡಗೆ ಚಾಟಿಂಗ್ ಮಾಡಿದ ವಿಚಾರ ದರ್ಶನ್ಗೆ ಗೊತ್ತಿರಲಿಲ್ಲ. ಅವರ ಚಾಟಿಂಗ್ ವೇಳೆ ದರ್ಶನ್ ಕಾಶ್ಮೀರದ ಪ್ರವಾಸದಲ್ಲಿದ್ದರು. ಅಪಹರಣ ಮತ್ತು ಕೊಲೆಯಲ್ಲಿ ದರ್ಶನ್ ಪಾತ್ರವಿಲ್ಲ. ಇದೊಂದು ಕೆಟ್ಟ ತನಿಖಾ ವರದಿ ಎಂದು ಸಿ.ವಿ.ನಾಗೇಶ್ ಅವರು ಕೋರ್ಟ್ ಮುಂದೆ ಪೊಲೀಸರು ಲೋಪ ದೋಷಗಳ ಎಂದು ವಾದಿಸಿದ್ದರು.
ಇದಕ್ಕೆ ಪ್ರಬಲವಾಗಿ ವಿರೋಧಿಸಿದ್ದ ಎಸ್ಪಿಪಿ ಪ್ರಸನ್ನಕುಮಾರ್, ಪೊಲೀಸರು ಕೊಲೆಗೆ ಸಂಬಂಧಿಸಿ ಎಲ್ಲಾ ಟೆಕ್ನಿಕಲ್ ಸಾಕ್ಷಿಗಳನ್ನೂ ಕಲೆ ಹಾಕಿಯೇ ತನಿಖೆ ಮಾಡಿದ್ದಾರೆ. ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ, ಬೆಂಗಳೂರಿನ ಪಟ್ಟಣಗೆರೆ ಶೆಡ್ಗೆ ಕರೆ ತಂದು ಥಳಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಇದೊಂದು ಪೂರ್ವ ನಿಯೋಜಿತ ಕೃತ್ಯ. ಇದರಲ್ಲಿ ದರ್ಶನ್ ಮತ್ತವರ ಆಪ್ತೆ ಪವಿತ್ರಾಗೌಡ, ಇನ್ನಿತರ ಆರೋಪಿಗಳು ಭಾಗಿದಾರಿಗಳು ಎಂದು ವಾದಿಸಿದ್ದರು.
A lower court in Bengaluru on Monday rejected the bail applications of actor Darshan Thoogudeepa and his close friend Pavithra Gowda in the Renukaswamy murder case.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am