ಬ್ರೇಕಿಂಗ್ ನ್ಯೂಸ್
15-10-24 06:13 pm Bangalore Correspondent ಕರ್ನಾಟಕ
ಬೆಂಗಳೂರು, ಅ 15: ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಬಿಜೆಪಿ ಶಾಸಕ ಮುನಿರತ್ನ ನಾಯ್ಡುಗೆ ಜಾಮೀನು ಸಿಕ್ಕಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅವರಿಗೆ ಜಾಮೀನನ್ನು ನೀಡಿದೆ. ಮುನಿರತ್ನ ವಿರುದ್ಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಮಹಿಳೆಯೊಬ್ಬರು ಮುನಿರತ್ನ ವಿರುದ್ಧ ಅತ್ಯಾಚಾರ ಮತ್ತು ಹನಿಟ್ರ್ಯಾಪ್ ಆರೋಪ ಮಾಡಿದ್ದರು.
ಆರ್ ಆರ್ ನಗರ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರು ಜಾತಿ ನಿಂದನೆ ಹಾಗೂ ಬೆದರಿಕೆ ಹಾಕಿದ್ದ ಆಡಿಯೋ ಒಂದು ವೈರಲ್ ಆಗಿತ್ತು. ಈ ಆಡಿಯೋದ ಹಿನ್ನೆಲೆಯಲ್ಲಿ ಅವರನ್ನು ಪೊಲೀಸರು ಕೋಲಾರ ಮತ್ತು ಆಂಧ್ರಪ್ರದೇಶ ಗಡಿ ಭಾಗದಲ್ಲಿ ವಶಕ್ಕೆ ಪಡೆದುಕೊಂಡು ಬಳಿಕ ಬಂಧನ ಮಾಡಿದ್ದರು.
ಈ ಪ್ರಕರಣದಲ್ಲಿ ಜೈಲು ವಾಸ ಅನುಭವಿಸಿ ಜಾಮೀನು ಸಿಕ್ಕರೂ ಮುನಿರತ್ನಗೆ ಬಿಡುಗಡೆ ಭಾಗ್ಯ ಸಿಕ್ಕಿರಲಿಲ್ಲ. ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣದಲ್ಲಿ ಜಾಮೀನು ಸಿಕ್ಕ ಬೆನ್ನಲ್ಲೇ ಅತ್ಯಾಚಾರ ಪ್ರಕರಣದಲ್ಲಿ ಮುನಿರತ್ನ ಅವರನ್ನು ಪೊಲೀಸರು ಬಂಧನಕ್ಕೆ ಒಳಪಡಿಸಿದ್ದರು. ಆರ್ ಆರ್ ನಗರದ ಮಹಿಳೆಯೊಬ್ಬರು ಮುನಿರತ್ನ ವಿರುದ್ದ ಗಂಭೀರ ಆರೋಪ ಮಾಡಿದ್ದರು.
ಮುನಿರತ್ನ ಅವರು ನನ್ನ ವಿರುದ್ಧ ಸರಣಿಯಾಗಿ ಅತ್ಯಾಚಾರ ಎಸಗಿದ್ದಾರೆ. ಅಲ್ಲದೆ, ತಮ್ಮ ವಿರೋಧಿಗಳನ್ನು ಹಣಿಯಲು ಹನಿಟ್ರ್ಯಾಪ್ಗಾಗಿ ನನ್ನನ್ನು ಬಳಕೆ ಮಾಡಿಕೊಂಡಿದ್ದಾರೆ ಎಂದು ಮಹಿಳೆ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಮುನಿರತ್ನ ಅವರನ್ನು ಬಂಧನ ಮಾಡಲಾಗಿತ್ತು. ಅಲ್ಲದೆ, ಮುನಿರತ್ನ ಪ್ರಕರಣದಲ್ಲಿ ತನಿಖೆಗೆ ಎಸ್ಐಟಿ ರಚನೆ ಮಾಡಲಾಗಿತ್ತು.
ಮುನಿರತ್ನ ಅವರ ವಿರುದ್ಧ ಆರೋಪ ಕೇಳಿ ಬಂದ ಬೆನ್ನಲ್ಲೇ ಬಿಜೆಪಿ ಅವರಿಗೆ ನೋಟಿಸ್ ಜಾರಿ ಮಾಡಿತ್ತು. ಆದರೆ ಇದಕ್ಕೆ ಪಕ್ಷದಲ್ಲೇ ಭಿನ್ನಾಭಿಪ್ರಾಯ ವ್ಯಕ್ತವಾಗಿತ್ತು. ಮುನಿರತ್ನ ವಿರುದ್ಧ ರಾಜಕೀಯ ಪ್ರೇರಿತವಾಗಿ ದೂರು ದಾಖಲು ಮಾಡಲಾಗಿದೆ ಎಂದು ಆರೋಪ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಇದು ಪರ ಹಾಗೂ ವಿರೋಧ ಚರ್ಚೆಗೆ ಗ್ರಾಸವಾಗಿತ್ತು.
A special court in Bengaluru granted an anticipatory bail on Monday evening to BJP MLA Muniratna and three other accused in a rape case, reported PTI. Along with Muniratna, Lohit, Kiran, and Manjunath were three others who were granted bail by Judge Santhosh Gajanan Bhat.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm