Bangalore Rain, School college holiday: ಬೆಂಗಳೂರಿನಲ್ಲಿ ನಿಲ್ಲದ ಮಳೆ ; ಐಟಿ ಬಿಟಿ, ಕಾರ್ಪೋರೇಟ್ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಸೂಚನೆ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ !

15-10-24 10:19 pm       Bangalore Correspondent   ಕರ್ನಾಟಕ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಡುವಿಲ್ಲದಂತೆ ಮಳೆ ಅಬ್ಬರಿಸುತ್ತಿದೆ. ಈಗಾಗಲೇ ನಗರದ ಅನೇಕ ಕಡೆಗಳಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ. ಸಂಚಾರ ಅಸ್ತವ್ಯಸ್ತವಾಗಿದೆ.

ಬೆಂಗಳೂರು, ಅ 15: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಡುವಿಲ್ಲದಂತೆ ಮಳೆ ಅಬ್ಬರಿಸುತ್ತಿದೆ. ಈಗಾಗಲೇ ನಗರದ ಅನೇಕ ಕಡೆಗಳಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ. ಸಂಚಾರ ಅಸ್ತವ್ಯಸ್ತವಾಗಿದೆ. ಈ ಕಾರಣದಿಂದ ರಾಜ್ಯ ಸರ್ಕಾರ ಬೆಂಗಳೂರಿನ ಐಟಿ ಬಿಟಿ ಕಂಪನಿಗಳು, ಖಾಸಗಿ ಸೇರಿದಂತೆ ಕಾರ್ಪೋರೇಟ್ ಕಂಪನಿಗಳ ಉದ್ಯೋಗಿಗಳಿಗೆ 'ಮನೆಯಿಂದಲೇ ಕೆಲಸ ಮಾಡುವಂತೆ' (WFH) ಮಾಡುವಂತೆ ಸೂಚನೆ ನೀಡಿದೆ.

ಕಳೆದ ಎರಡು ಮೂರು ದಿನಗಳಿಂದ ರಾಜಧಾನಿ ಬೆಂಗಳೂರಿನಲ್ಲಿ ಬಿಟ್ಟು ಬಿಡದೇ ಹಿಂಗಾರು ಮಳೆ ಸುರಿಯುತ್ತಲೇ ಇದೆ. ಎಲ್ಲೆಡೆ ಮಬ್ಬು ವಾತಾವರಣ, ಚಳಿ ಗಾಳಿ ಬೀಸುತ್ತಿದೆ. ಗುಡುಗು ಮಿಂಚು ಸಮೇತ ವ್ಯಾಪಕ ಮಳೆ ಆಗುತ್ತಿದೆ. ಈ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಹೀಗಾಗಿ ಬುಧವಾರ ಬೆಂಗಳೂರಿಗೆ ಹವಾಮಾನ ಇಲಾಖೆ 'ಯೆಲ್ಲೋ ಅಲರ್ಟ್' ಎಚ್ಚರಿಕೆ ಕೊಟ್ಟಿದೆ.

ಈ ಮುನ್ಸೂಚನೆ ಗಮನಿಸಿದರೆ, ಬುಧವಾರ ಕಳೆದ ಎರಡು ಮೂರು ದಿನಗಳಿಗಿಂತಲೂ ಹೆಚ್ಚು ಮಳೆ ಬರುವ ಲಕ್ಷಣ ಗೋಚರಿಸುತ್ತಿದೆ. ಈಗಾಗಲೇ ನಗರ ರಸ್ತೆಗಳು, ಅಂಡರ್‌ಪಾಸ್‌ಗಲೂ ಜಲಾವೃತಗೊಂಡಿವೆ. ಸಂಚಾರಕ್ಕೆ ಅಡ್ಡಿ ಉಂಟಾಗಿದೆ. ಒಳಚರಂಡಿಗಳು ಉಕ್ಕಿ ಹರಿದಿವೆ. ರಸ್ತೆಯಲ್ಲಿ ವಾಹನಗಳು ಸಂಚರಿಸಲು ಆಗದ ಸ್ಥಿತಿ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಐಟಿ ಬಿಟಿ, ಖಾಸಗಿ ಮತ್ತು ಕಾರ್ಪೋರೇಟ್ ಕಂಪನಿ ನೌಕರರು ಸಂಚರಿಸುವುದು ಸುರಕ್ಷಿತವಲ್ಲ ಎಂದು ಅರಿತ ಸರ್ಕಾರ ಮನೆಯಿಂದಲೇ ಕೆಲಸ ಮಾಡುವಂತೆ ಸೂಚನೆ ನೀಡಿದೆ.

ಶಾಲಾ ಕಾಲೇಜುಗಳಿಗೆ ರಜೆ ; 

ಭಾರೀ ಮಳೆ ಹಿನ್ನೆಲೆಯಲ್ಲಿ ಬೆಂಗಳೂರಿನ ಶಾಲಾ ಕಾಲೇಜುಗಳ ಕುರಿತು ಮಹತ್ವದ ಆದೇಶ ಹೊರಡಿಸಲಾಗಿದ್ದು, ಬೆಂಗಳೂರಿನ ಶಾಲೆಗಳಿಗೆ ರಜೆ ಘೋಷಿಸುವ ಕುರಿತು ಡಿಸಿ ಜಗದೀಶ್ ಅವರು ಮಾಹಿತಿ ನೀಡಿದ್ದಾರೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಕರ್ನಾಟಕದ ಒಳನಾಡಿನಲ್ಲಿ ಮಳೆ ಆರಂಭವಾಗಿದೆ. ಬೆಂಗಳೂರಿನಲ್ಲಿ 2 ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ವರುಣನ ಆರ್ಭಟ ಇನ್ನೂ ಮೂರು ದಿನ ರಾಜ್ಯದಲ್ಲಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಹಿನ್ನೆಲೆಯಲ್ಲಿ ನಾಳೆ ಅಂದರೆ ಅಕ್ಟೋಬರ್ 16ರಂದು ಬೆಂಗಳೂರಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಜಗದೀಶ್ ಸೂಚಿಸಿದ್ದಾರೆ.

In light of heavy rainfall predictions, schools in the Bengaluru Urban district will be closed on Wednesday, October 16, according to official announcements. The Meteorological Department has issued an orange alert for the region, anticipating continuous rain over the next two days. "As a precautionary measure in the interest of students, all taluk Anganwadi centres, private and aided primary and high schools in Bengaluru City will be closed on Wednesday," stated a government order.