ಬ್ರೇಕಿಂಗ್ ನ್ಯೂಸ್
15-10-24 10:19 pm Bangalore Correspondent ಕರ್ನಾಟಕ
ಬೆಂಗಳೂರು, ಅ 15: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಡುವಿಲ್ಲದಂತೆ ಮಳೆ ಅಬ್ಬರಿಸುತ್ತಿದೆ. ಈಗಾಗಲೇ ನಗರದ ಅನೇಕ ಕಡೆಗಳಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ. ಸಂಚಾರ ಅಸ್ತವ್ಯಸ್ತವಾಗಿದೆ. ಈ ಕಾರಣದಿಂದ ರಾಜ್ಯ ಸರ್ಕಾರ ಬೆಂಗಳೂರಿನ ಐಟಿ ಬಿಟಿ ಕಂಪನಿಗಳು, ಖಾಸಗಿ ಸೇರಿದಂತೆ ಕಾರ್ಪೋರೇಟ್ ಕಂಪನಿಗಳ ಉದ್ಯೋಗಿಗಳಿಗೆ 'ಮನೆಯಿಂದಲೇ ಕೆಲಸ ಮಾಡುವಂತೆ' (WFH) ಮಾಡುವಂತೆ ಸೂಚನೆ ನೀಡಿದೆ.
ಕಳೆದ ಎರಡು ಮೂರು ದಿನಗಳಿಂದ ರಾಜಧಾನಿ ಬೆಂಗಳೂರಿನಲ್ಲಿ ಬಿಟ್ಟು ಬಿಡದೇ ಹಿಂಗಾರು ಮಳೆ ಸುರಿಯುತ್ತಲೇ ಇದೆ. ಎಲ್ಲೆಡೆ ಮಬ್ಬು ವಾತಾವರಣ, ಚಳಿ ಗಾಳಿ ಬೀಸುತ್ತಿದೆ. ಗುಡುಗು ಮಿಂಚು ಸಮೇತ ವ್ಯಾಪಕ ಮಳೆ ಆಗುತ್ತಿದೆ. ಈ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಹೀಗಾಗಿ ಬುಧವಾರ ಬೆಂಗಳೂರಿಗೆ ಹವಾಮಾನ ಇಲಾಖೆ 'ಯೆಲ್ಲೋ ಅಲರ್ಟ್' ಎಚ್ಚರಿಕೆ ಕೊಟ್ಟಿದೆ.


ಈ ಮುನ್ಸೂಚನೆ ಗಮನಿಸಿದರೆ, ಬುಧವಾರ ಕಳೆದ ಎರಡು ಮೂರು ದಿನಗಳಿಗಿಂತಲೂ ಹೆಚ್ಚು ಮಳೆ ಬರುವ ಲಕ್ಷಣ ಗೋಚರಿಸುತ್ತಿದೆ. ಈಗಾಗಲೇ ನಗರ ರಸ್ತೆಗಳು, ಅಂಡರ್ಪಾಸ್ಗಲೂ ಜಲಾವೃತಗೊಂಡಿವೆ. ಸಂಚಾರಕ್ಕೆ ಅಡ್ಡಿ ಉಂಟಾಗಿದೆ. ಒಳಚರಂಡಿಗಳು ಉಕ್ಕಿ ಹರಿದಿವೆ. ರಸ್ತೆಯಲ್ಲಿ ವಾಹನಗಳು ಸಂಚರಿಸಲು ಆಗದ ಸ್ಥಿತಿ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಐಟಿ ಬಿಟಿ, ಖಾಸಗಿ ಮತ್ತು ಕಾರ್ಪೋರೇಟ್ ಕಂಪನಿ ನೌಕರರು ಸಂಚರಿಸುವುದು ಸುರಕ್ಷಿತವಲ್ಲ ಎಂದು ಅರಿತ ಸರ್ಕಾರ ಮನೆಯಿಂದಲೇ ಕೆಲಸ ಮಾಡುವಂತೆ ಸೂಚನೆ ನೀಡಿದೆ.




ಶಾಲಾ ಕಾಲೇಜುಗಳಿಗೆ ರಜೆ ;
ಭಾರೀ ಮಳೆ ಹಿನ್ನೆಲೆಯಲ್ಲಿ ಬೆಂಗಳೂರಿನ ಶಾಲಾ ಕಾಲೇಜುಗಳ ಕುರಿತು ಮಹತ್ವದ ಆದೇಶ ಹೊರಡಿಸಲಾಗಿದ್ದು, ಬೆಂಗಳೂರಿನ ಶಾಲೆಗಳಿಗೆ ರಜೆ ಘೋಷಿಸುವ ಕುರಿತು ಡಿಸಿ ಜಗದೀಶ್ ಅವರು ಮಾಹಿತಿ ನೀಡಿದ್ದಾರೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಕರ್ನಾಟಕದ ಒಳನಾಡಿನಲ್ಲಿ ಮಳೆ ಆರಂಭವಾಗಿದೆ. ಬೆಂಗಳೂರಿನಲ್ಲಿ 2 ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ವರುಣನ ಆರ್ಭಟ ಇನ್ನೂ ಮೂರು ದಿನ ರಾಜ್ಯದಲ್ಲಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ನಾಳೆ ಅಂದರೆ ಅಕ್ಟೋಬರ್ 16ರಂದು ಬೆಂಗಳೂರಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಜಗದೀಶ್ ಸೂಚಿಸಿದ್ದಾರೆ.
Dear Citizens
— Ashok Mruthyunjaya (@Ashokmruthyu) October 15, 2024
I know you are angry today. You have been made to struggle on road filled up with water and traffic for hours together.
You were angry 2 years back as well, when rain lashed Bangalore.
Remember, entire outskirts of Bangalore - Specially Mahadevapura got flooded… pic.twitter.com/pglYr9jeQK
In light of heavy rainfall predictions, schools in the Bengaluru Urban district will be closed on Wednesday, October 16, according to official announcements. The Meteorological Department has issued an orange alert for the region, anticipating continuous rain over the next two days. "As a precautionary measure in the interest of students, all taluk Anganwadi centres, private and aided primary and high schools in Bengaluru City will be closed on Wednesday," stated a government order.
15-12-25 02:23 pm
Bangalore Correspondent
ಹೊಟೇಲಿನಲ್ಲಿ ಡ್ರಿಂಕ್ಸ್ ಪಾರ್ಟಿ ಮಾಡುತ್ತಿದ್ದಾಗ ಪೊ...
15-12-25 02:20 pm
MLA Shamanur Shivashankarappa Death: ದೇಶದ ಅತಿ...
14-12-25 11:37 pm
Deputy Chief Minister, D.K. Shivakumar: ನೀವು...
14-12-25 03:19 pm
ನೀವು ನಮ್ಮ ಪ್ರತಿನಿಧಿ ಹೊರತು ಯಜಮಾನರಲ್ಲ, ಮಂತ್ರಿಗಳ...
14-12-25 02:37 pm
15-12-25 08:12 pm
HK News Desk
ಪ್ರೇಕ್ಷಕ ಯುವಕನ ತಲೆಗೆ ಮರದ ಗುರಾಣಿಯಿಂದ ಹೊಡೆದ ತೈಯ...
15-12-25 08:09 pm
ಸಿಡ್ನಿಯ ಕಡಲತೀರದಲ್ಲಿ ರಕ್ತದೋಕುಳಿ ; ಸಾಮೂಹಿಕ ಗುಂಡ...
14-12-25 07:20 pm
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
15-12-25 05:40 pm
Mangalore Correspondent
Mangalore Reels, Arrest, Police: ತಲವಾರು ಹಿಡಿದ...
14-12-25 05:48 pm
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
15-12-25 05:37 pm
Udupi Correspondent
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm
Bangalore crime, Fake Police: ಪೊಲೀಸ್ ಸಮವಸ್ತ್ರ...
15-12-25 11:42 am
ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ಪೂರೈಕೆ ; ಸಾಗಣೆ ವ...
14-12-25 11:10 pm
ಟೀಮ್ ಎಸ್ಡಿಪಿಐ ಹೆಸರಲ್ಲಿ ಹಿಂದುಗಳ ಬಗ್ಗೆ ನಿಂದಿಸಿ...
14-12-25 09:12 pm