ಬ್ರೇಕಿಂಗ್ ನ್ಯೂಸ್
16-10-24 05:08 pm Bangalore Correspondent ಕರ್ನಾಟಕ
ಬೆಂಗಳೂರು, ಅ.16: ಮಸೀದಿ ಆವರಣದಲ್ಲಿ ಜೈಶ್ರೀರಾಮ್ ಘೋಷಣೆ ಕೂಗಿದ ಮಾತ್ರಕ್ಕೆ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲ ಎಂದು ಹೇಳಿರುವ ಹೈಕೋರ್ಟ್, ಈ ಕುರಿತು ದಾಖಲಿಸಿದ್ದ ಎಫ್ಐಆರ್ ಅನ್ನು ರದ್ದುಪಡಿಸಿದೆ.
ಕಡಬ ತಾಲೂಕಿನಲ್ಲಿ ಮಸೀದಿ ಆವರಣಕ್ಕೆ ನುಗ್ಗಿ ಜೈಶ್ರೀರಾಮ್ ಘೋಷಣೆ ಕೂಗಿದ ಆರೋಪದ ಮೇಲೆ ಇಬ್ಬರು ಯುವಕರ ವಿರುದ್ಧ ಧಾರ್ಮಿಕ ನಂಬಿಕೆಗಳ ಧಕ್ಕೆ ತಂದ ಆರೋಪದ ಮೇಲೆ ಪೊಲೀಸರು ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸಿದ ಕೋರ್ಟ್, ಮೇಲಿನಂತೆ ಅಭಿಪ್ರಾಯ ವ್ಯಕ್ತಪಡಿಸಿದೆ. ತಮ್ಮ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್ ಐಆರ್ ಹಾಗೂ ಸಳೀಯ ಜೆಎಂಎಫ್ಸಿ ಕೋರ್ಟ್ ವಿಚಾರಣೆ ರದ್ದುಪಡಿಸುವಂತೆ ಕೋರಿ ಪುತ್ತೂರಿನ ಬಿಳಿನೆಲೆ ಗ್ರಾಮದ ಕೀರ್ತನ್ ಮತ್ತು ಮಂಗಳೂರಿನ ಕೈಕಂಬದ ಸಚಿನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಈ ಆದೇಶ ನೀಡಿದೆ.
ಕಡಬ ತಾಲೂಕು ಐತ್ತೂರು ಗ್ರಾಮದ ಮರ್ಧಾಳ ಎಂಬಲ್ಲಿನ ಬದ್ರಿಯಾ ಜುಮ್ಮಾ ಮಸೀದಿ ಆವರಣಕ್ಕೆ 2024ರ ಸೆಪ್ಟೆಂಬರ್ 24ರಂದು ರಾತ್ರಿ ಸುಮಾರು 10.50ರ ಸಮಯಕ್ಕೆ ಬಂದು ಜೈಶ್ರೀರಾಮ್ ಘೋಷಣೆ ಕೂಗಿದ ಮತ್ತು ಬ್ಯಾರಿಗಳನ್ನು ಬದುಕಲು ಬಿಡುವುದಿಲ್ಲ ಎಂದು ಬೊಬ್ಬೆ ಹಾಕಿದ್ದರೆಂದು ಆರೋಪಿಸಿ ಕೇಸು ದಾಖಲಾಗಿತ್ತು.
ಪ್ರಕರಣವನ್ನು ಪುತ್ತೂರು ಜೆಎಂಎಫ್ ಕೋರ್ಟ್ ವಿಚಾರಣೆ ನಡೆಸುತ್ತಿದ್ದಾಗಲೇ ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ಆರೋಪಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ಪುರಸ್ಕರಿಸಿರುವ ಹೈಕೋರ್ಟ್, ದೂರುದಾರರು ನೆಲೆಸಿರುವ ಭಾಗದಲ್ಲಿ ಹಿಂದೂ- ಮುಸ್ಲಿಮರು ಒಟ್ಟಾಗಿ ಸೌರ್ಹಾದತೆಯಿಂದ ಜೀವಿಸುತ್ತಿರುವುದಾಗಿ ದೂರಿನಲ್ಲಿಯೇ ಹೇಳಲಾಗಿದೆ. ಆದರೆ, ಅರ್ಜಿದಾರರ ವಿರುದ್ಧ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸಿದ ಆರೋಪದಲ್ಲಿ ಐಪಿಸಿ ಸೆಕ್ಷನ್ 295ಎ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಸೆಕ್ಷನ್ 295ಎ ಪ್ರಕಾರ ಉದ್ದೇಶಪೂರ್ವಕ ಯಾವುದೇ ವರ್ಗದ ಧಾರ್ಮಿಕ ಭಾವನೆಗಳನ್ನು, ಅದರ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವುದು, ಕೆರಳಿಸುವುದು ಅಪರಾಧ ಕೃತ್ಯವಾಗುತ್ತದೆ.
ಯಾರಾದರೂ ‘ಜೈಶ್ರೀರಾಮ್’ ಎಂದು ಕೂಗಿದರೆ ಅದು ಯಾವುದೇ ವರ್ಗದ ಧಾರ್ಮಿಕ ಭಾವನೆಯನ್ನು ಹೇಗೆ ಕೆರಳಿಸುತ್ತದೆ ಎಂಬುದು ಅರ್ಥವಾಗುವುದಿಲ್ಲ. ಪ್ರಕರಣದಲ್ಲಿ ಯಾವುದೇ ಅಪರಾಧ ಕಂಡು ಬರುತ್ತಿಲ್ಲ. ಹೀಗಿರುವಾಗ ಅರ್ಜಿದಾರರ ವಿರುದ್ಧ ಪ್ರಕರಣದ ವಿಚಾರಣೆ ಮುಂದುವರಿಸಲು ಅನುಮತಿ ನೀಡುವುದು ಕಾನೂನಿನ ಪ್ರಕ್ರಿಯೆಯ ದುರುಪಯೋಗ ಆಗುತ್ತದೆ ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.
Quashing a case against two men accused of an offence under IPC Section 295A for allegedly shouting 'Jai Sriram' in a mosque, the Karnataka High Court said it was not understandable how the slogan would outrage the religious feelings of any class.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm