ಬ್ರೇಕಿಂಗ್ ನ್ಯೂಸ್
16-10-24 05:08 pm Bangalore Correspondent ಕರ್ನಾಟಕ
ಬೆಂಗಳೂರು, ಅ.16: ಮಸೀದಿ ಆವರಣದಲ್ಲಿ ಜೈಶ್ರೀರಾಮ್ ಘೋಷಣೆ ಕೂಗಿದ ಮಾತ್ರಕ್ಕೆ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವುದಿಲ್ಲ ಎಂದು ಹೇಳಿರುವ ಹೈಕೋರ್ಟ್, ಈ ಕುರಿತು ದಾಖಲಿಸಿದ್ದ ಎಫ್ಐಆರ್ ಅನ್ನು ರದ್ದುಪಡಿಸಿದೆ.
ಕಡಬ ತಾಲೂಕಿನಲ್ಲಿ ಮಸೀದಿ ಆವರಣಕ್ಕೆ ನುಗ್ಗಿ ಜೈಶ್ರೀರಾಮ್ ಘೋಷಣೆ ಕೂಗಿದ ಆರೋಪದ ಮೇಲೆ ಇಬ್ಬರು ಯುವಕರ ವಿರುದ್ಧ ಧಾರ್ಮಿಕ ನಂಬಿಕೆಗಳ ಧಕ್ಕೆ ತಂದ ಆರೋಪದ ಮೇಲೆ ಪೊಲೀಸರು ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸಿದ ಕೋರ್ಟ್, ಮೇಲಿನಂತೆ ಅಭಿಪ್ರಾಯ ವ್ಯಕ್ತಪಡಿಸಿದೆ. ತಮ್ಮ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್ ಐಆರ್ ಹಾಗೂ ಸಳೀಯ ಜೆಎಂಎಫ್ಸಿ ಕೋರ್ಟ್ ವಿಚಾರಣೆ ರದ್ದುಪಡಿಸುವಂತೆ ಕೋರಿ ಪುತ್ತೂರಿನ ಬಿಳಿನೆಲೆ ಗ್ರಾಮದ ಕೀರ್ತನ್ ಮತ್ತು ಮಂಗಳೂರಿನ ಕೈಕಂಬದ ಸಚಿನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಈ ಆದೇಶ ನೀಡಿದೆ.
ಕಡಬ ತಾಲೂಕು ಐತ್ತೂರು ಗ್ರಾಮದ ಮರ್ಧಾಳ ಎಂಬಲ್ಲಿನ ಬದ್ರಿಯಾ ಜುಮ್ಮಾ ಮಸೀದಿ ಆವರಣಕ್ಕೆ 2024ರ ಸೆಪ್ಟೆಂಬರ್ 24ರಂದು ರಾತ್ರಿ ಸುಮಾರು 10.50ರ ಸಮಯಕ್ಕೆ ಬಂದು ಜೈಶ್ರೀರಾಮ್ ಘೋಷಣೆ ಕೂಗಿದ ಮತ್ತು ಬ್ಯಾರಿಗಳನ್ನು ಬದುಕಲು ಬಿಡುವುದಿಲ್ಲ ಎಂದು ಬೊಬ್ಬೆ ಹಾಕಿದ್ದರೆಂದು ಆರೋಪಿಸಿ ಕೇಸು ದಾಖಲಾಗಿತ್ತು.
ಪ್ರಕರಣವನ್ನು ಪುತ್ತೂರು ಜೆಎಂಎಫ್ ಕೋರ್ಟ್ ವಿಚಾರಣೆ ನಡೆಸುತ್ತಿದ್ದಾಗಲೇ ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ಆರೋಪಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ಪುರಸ್ಕರಿಸಿರುವ ಹೈಕೋರ್ಟ್, ದೂರುದಾರರು ನೆಲೆಸಿರುವ ಭಾಗದಲ್ಲಿ ಹಿಂದೂ- ಮುಸ್ಲಿಮರು ಒಟ್ಟಾಗಿ ಸೌರ್ಹಾದತೆಯಿಂದ ಜೀವಿಸುತ್ತಿರುವುದಾಗಿ ದೂರಿನಲ್ಲಿಯೇ ಹೇಳಲಾಗಿದೆ. ಆದರೆ, ಅರ್ಜಿದಾರರ ವಿರುದ್ಧ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸಿದ ಆರೋಪದಲ್ಲಿ ಐಪಿಸಿ ಸೆಕ್ಷನ್ 295ಎ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಸೆಕ್ಷನ್ 295ಎ ಪ್ರಕಾರ ಉದ್ದೇಶಪೂರ್ವಕ ಯಾವುದೇ ವರ್ಗದ ಧಾರ್ಮಿಕ ಭಾವನೆಗಳನ್ನು, ಅದರ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವುದು, ಕೆರಳಿಸುವುದು ಅಪರಾಧ ಕೃತ್ಯವಾಗುತ್ತದೆ.
ಯಾರಾದರೂ ‘ಜೈಶ್ರೀರಾಮ್’ ಎಂದು ಕೂಗಿದರೆ ಅದು ಯಾವುದೇ ವರ್ಗದ ಧಾರ್ಮಿಕ ಭಾವನೆಯನ್ನು ಹೇಗೆ ಕೆರಳಿಸುತ್ತದೆ ಎಂಬುದು ಅರ್ಥವಾಗುವುದಿಲ್ಲ. ಪ್ರಕರಣದಲ್ಲಿ ಯಾವುದೇ ಅಪರಾಧ ಕಂಡು ಬರುತ್ತಿಲ್ಲ. ಹೀಗಿರುವಾಗ ಅರ್ಜಿದಾರರ ವಿರುದ್ಧ ಪ್ರಕರಣದ ವಿಚಾರಣೆ ಮುಂದುವರಿಸಲು ಅನುಮತಿ ನೀಡುವುದು ಕಾನೂನಿನ ಪ್ರಕ್ರಿಯೆಯ ದುರುಪಯೋಗ ಆಗುತ್ತದೆ ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.
Quashing a case against two men accused of an offence under IPC Section 295A for allegedly shouting 'Jai Sriram' in a mosque, the Karnataka High Court said it was not understandable how the slogan would outrage the religious feelings of any class.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm