ಬ್ರೇಕಿಂಗ್ ನ್ಯೂಸ್
17-10-24 12:37 pm Bangalore Correspondent ಕರ್ನಾಟಕ
ಬೆಂಗಳೂರು, ಅ.17: ಕೆಎಫ್.ಡಿ (ಮಂಗನ ಕಾಯಿಲೆ) ಲಸಿಕೆ ಕುರಿತಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದೆಹಲಿಯಲ್ಲಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ನಿರ್ದೇಶಕರನ್ನ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳ ಜೊತೆ ಇಲಾಖೆಯ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ದೆಹಲಿ ಪ್ರವಾಸದಲ್ಲಿರುವ ಸಚಿವರು, ICMR DG ಅವರನ್ನ ಭೇಟಿ ಮಾಡಿ, ಕೆಎಫ್.ಡಿ ಲಸಿಕೆ ದೊರಕಿಸುವ ನಿಟ್ಟಿನಲ್ಲಿ ಅಗತ್ಯ ವಿತ್ತೀಯ ನೆರವು ಒದಗಿಸುವಂತೆ ಕೋರಿದರು.
ಮೊದಲ ಹಂತದ ಪ್ರಯೋಗದಲ್ಲಿ ಕೆ.ಎಫ್.ಡಿ ಲಸಿಕೆ ಭರವಸೆ ಮೂಡಿಸಿದ್ದು, ಕಾಲಮಿತಿಯೊಳಗೆ ಲಸಿಕೆ ಲಭ್ಯತೆ ಅಗತ್ಯವಾಗಿದೆ. ಲಸಿಕೆಯ ಎರಡನೇ ಹಂತವನ್ನ ಶೀಘ್ರದಲ್ಲಿ ಪ್ರಾರಂಭಿಸಲಾಗುವುದು. 2025ರ ಏಪ್ರಿಲ್ ತಿಂಗಳಲ್ಲಿ ಲಸಿಕೆಯ ಮಾನವ ಪ್ರಯೋಗಗಳನ್ನ ನಡೆಸಲು ಯೋಜಿಸಲಾಗಿದ್ದು, 2026 ರಲ್ಲಿ ಲಸಿಕೆ ಬಳಕೆಗೆ ಲಭ್ಯವಿರುತ್ತದೆ. ಈ ನಿಟ್ಟಿನಲ್ಲಿ ಅಗತ್ಯ ನೆರವು ಒದಗಿಸುವಂತೆ ICMR ನಿರ್ದೇಶಕರಿಗೆ ಸಚಿವ ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ.

ಭೇಟಿ ವೇಳೆ ರಾಜ್ಯದ ಅನೀಮಿಯಾ ಮುಕ್ತ ಪೌಷ್ಠಿಕ ಕರ್ನಾಟಕ ಯೋಜನೆಗೆ ICMR ನಿರ್ದೇಶಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ವಿಶೇಷವಾಗಿ ಸರ್ಕಾರಿ ಶಾಲಾ ಕಾಲೇಜು ಮಕ್ಕಳನ್ನ ರಕ್ತಹೀನತೆ ತಪಾಸಣೆಗೆ ಒಳಪಡಿಸುತ್ತಿರುವುದು ಉತ್ತಮ ಯೋಜನೆ ಎಂದಿದ್ದಾರೆ. ಅಲ್ಲದೆ, ಭಾರತ ಸರ್ಕಾರದ ರಕ್ತಹೀನತೆ ಮುಕ್ತ ಭಾರತ್ 2.O ಯೋಜನೆಗೆ ಅನುಗುಣವಾಗಿ ಯೋಜನೆ ವಿಸ್ತರಿಸುವಂತೆ ಸಚಿವರಲ್ಲಿ ವಿನಂತಿಸಿದರು.
ರಾಜ್ಯದಲ್ಲಿ ಡೆಂಘಿ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಕೈಗೊಂಡಿರುವ ನವೀನ ತಂತ್ರಜ್ಞಾನಗಳ ಬಗ್ಗೆ ಆಸಕ್ತಿ ತೋರಿದ ICMR ನಿರ್ದೇಶಕರು, ಕರ್ನಾಟಕ ಸರ್ಕಾರ ತೆಗೆದುಕೊಂಡಿರುವ ಕ್ರಮಗಳನ್ನ ದೇಶದ ಇತರ ರಾಜ್ಯಗಳಲ್ಲಿ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ಇದೇ ವೇಳೆ ICMR ನಿರ್ದೇಶಕರು ಸಚಿವರಿಗೆ ತಿಳಿಸಿದರು. ಆರೋಗ್ಯ ಸೇವೆಗಳ ಉತ್ತಮ ವಿತರಣೆಗಾಗಿ ಸಾರ್ವಜನಿಕ ಆರೋಗ್ಯ ಸಂಶೋಧನೆಯಲ್ಲಿ ವಿಶೇಷ ಯೋಜನೆಗಳನ್ನು ಕೈಗೊಳ್ಳುವಲ್ಲಿ ಪರಸ್ಪರ ಸಹಕರಿಸುವ ನಿಟ್ಟಿನಲ್ಲಿ ಭೇಟಿ ವೇಳೆ ಚರ್ಚೆ ನಡೆಸಲಾಯಿತು. ಸಚಿವರ ಜೊತೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ, NHM ಎಂ.ಡಿ ನವೀನ್ ಭಟ್ ಉಪಸ್ಥಿತರಿದ್ದರು.
Karnataka Health Minister Dinesh Gundu Rao met with Indian Council of Medical Research’s (ICMR) Director General D. Rajiv Bahl in New Delhi to discuss the progress of the vaccine for Kyasanur Forest Disease (KFD), also known as the monkeypox or monkey fever
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am