ಬ್ರೇಕಿಂಗ್ ನ್ಯೂಸ್
17-10-24 03:36 pm Bangalore Correspondent ಕರ್ನಾಟಕ
ಬೆಂಗಳೂರು, ಅ.16: ಮುಸ್ಲಿಂ ಸಮುದಾಯದ ದಂಪತಿಗೆ ವಿವಾಹ ನೋಂದಣಿ ಪ್ರಮಾಣಪತ್ರ ವಿತರಿಸುವ ಅಧಿಕಾರವನ್ನು ವಕ್ಫ್ ಮಂಡಳಿಗೆ ವಹಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಲಾಗಿದ್ದು ಈ ಸಂಬಂಧ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಬೆಂಗಳೂರಿನ ಇಂದಿರಾ ನಗರದ ನಿವಾಸಿ ಎ. ಆಲಂಪಾಷ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ನ್ಯಾಯಪೀಠ, ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆ ಮತ್ತು ವಕ್ಫ್ ಮಂಡಳಿಗೆ ನೋಟಿಸ್ ಜಾರಿ ಮಾಡಿದೆ.
ವಿಚಾರಣೆ ವೇಳೆ ಅರ್ಜಿದಾರ ಪರ ವಕೀಲರು, ಮುಸ್ಲಿಂ ದಂಪತಿಗಳಿಗೆ ವಿವಾಹ ನೋಂದಣಿ ಮಾಡುವ ಅಧಿಕಾರವನ್ನು ವಕ್ಫ್ ಮಂಡಳಿಗೆ ವಹಿಸಿ 2023ರ ಆಗಸ್ಟ್ 3 ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದರಂತೆ, ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಮತ್ತು ಜಿಲ್ಲಾ ವಕ್ಫ್ ಸಲಹಾ ಸಮಿತಿಗಳು ಕೆಲ ಷರತ್ತುಗಳೊಂದಿಗೆ ಮುಸ್ಲಿಂ ದಂಪತಿಗಳಿಗೆ ವಿವಾಹ ನೋಂದಣಿ ಮಾಡುವುದಕ್ಕೆ ಅವಕಾಶ ಮಾಡಲಾಗಿದೆ. ವಿವಾಹ ನೋಂದಣಿ ಪ್ರಮಾಣ ಪತ್ರಗಳನ್ನು ವಿತರಿಸುವುದಕ್ಕೆ ವಕ್ಫ್ ಕಾಯ್ದೆಯಡಿ ಅಧಿಕಾರ ಇಲ್ಲ. ವಕ್ಫ್ ಕಾಯ್ದೆ-1995ರ ಅನ್ವಯ ವಕ್ಫ್ ಆಸ್ತಿಗಳ ಸಂರಕ್ಷಣೆ ಮತ್ತು ನಿರ್ವಹಣೆ ಮಾಡುವುದು ವಕ್ಫ್ ಮಂಡಳಿ ಕಾರ್ಯವ್ಯಾಪ್ತಿ ಆಗಿದೆ. ಕರ್ನಾಟಕ ವಿವಾಹ ನೋಂದಣಿ ಕಾಯ್ದೆ-1976ರ ಪ್ರಕಾರ ವಿವಾಹ ನೋಂದಣಿ ಅಧಿಕಾರ ಇರುವುದು ಉಪ ನೋಂದಣಾಧಿಕಾರಿಗೆ ಮಾತ್ರ ಎಂದು ವಾದಿಸಿದ್ದಾರೆ.
ಮುಸ್ಲಿಮರಿಗೆ ವಿವಾಹ ನೋಂದಣಿ ಪ್ರಮಾಣಪತ್ರ ವಿತರಿಸುವ ಸಂಬಂಧ 2009ರಲ್ಲಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ 2011ರಲ್ಲಿ ರದ್ದುಪಡಿಸಿದೆ. ಇದಾದ ಬಳಿಕ ಸರ್ಕಾರ ಪರಿಷ್ಕೃತ ಆದೇಶಗಳನ್ನು ಹೊರಡಿಸಿದೆ. ಈಗಾಗಲೇ ಉಪ ನೋಂದಣಾಧಿಕಾರಿಗಳ ಬಳಿ ವಿವಾಹ ನೋಂದಣಿಗೆ ಅವಕಾಶವಿದೆ. ಅಲ್ಲದೆ, ಸ್ಥಳೀಯ ಖಾಜಿಗಳ ಬಳಿಯೂ ವಿವಾಹ ದಾಖಲೆ ಸಲ್ಲಿಸಲಾಗುವುದು. ಆದಾಗ್ಯೂ ವಿವಾಹ ನೋಂದಣಿ ಮತ್ತು ವಿವಾಹ ಪ್ರಮಾಣಪತ್ರ ನೀಡುವ ಅಧಿಕಾರವನ್ನು ವಕ್ಫ್ ಮಂಡಳಿಗೆ ನೀಡುವ ಮೂಲಕ ಮೂರನೇ ವ್ಯವಸ್ಥೆಯೊಂದನ್ನು ಹುಟ್ಟು ಹಾಕಿರುವುದು ಸರಿಯಲ್ಲ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ. ಅಲ್ಲದೆ, ಈ ಆದೇಶ ಸಂವಿಧಾನದ ಪರಿಚ್ಛೇದ 14ಕ್ಕೆ ತದ್ವಿರುದ್ಧವಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಹೊರಡಿಸಿರುವ ಈ ಆದೇಶವನ್ನು ರದ್ದುಪಡಿಸಬೇಕು ಎಂದು ಮನವಿ ಮಾಡಿದರು.
The High Court of Karnataka on Wednesday ordered issue of notice to the State government on a PIL petition, which had questioned the legality of the notification issued last year authorising the Karnataka State Board Auqaf and its Wakf officers in the districts to issue marriage certificates to married Muslim applicants.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
30-06-26 11:02 pm
HK News Staffer
ಪಾಗಲ್ ಪ್ರೇಮಿ ಕೇಸ್ ಬೆನ್ನಲ್ಲೇ ಬಯಲಾಯ್ತು ಅಕ್ರಮ ಬ...
30-06-26 03:48 pm
ಮಂಗಳೂರು ಕೋರ್ಟಿಗೆ ಕೆಮಿಕಲ್ ಬಾಂಬ್ ಬೆದರಿಕೆ ; ಜೆನ್...
29-06-26 07:25 pm
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm