ಬ್ರೇಕಿಂಗ್ ನ್ಯೂಸ್
17-10-24 05:29 pm HK News Desk ಕರ್ನಾಟಕ
ವಿಜಯಪುರ, ಅ 18: ಚರಂಡಿಯಲ್ಲಿ ಬಿದ್ದು ಎರಡು ವರ್ಷದ ಮಗು ಸಾವನ್ನಪ್ಪಿದ್ದ ದಾರುಣ ಘಟನೆ ನಗರದ ಬಡಿಕಮಾನ್ ರಸ್ತೆಯ ಬಳಿ ನಡೆದಿದೆ.
ಮೃತ ಮಗುವನ್ನು 2 ವರ್ಷದ ಯಾಸೀನ್ ಸದ್ದಾಂ ಮುಲ್ಲಾ ಎಂದು ಗುರುತಿಸಲಾಗಿದೆ.
ಕಳೆದ ಕೆಲವು ದಿನಗಳ ಹಿಂದೆ ಭಾರೀ ಮಳೆ ಹಿನ್ನೆಲೆ ಚರಂಡಿ ಮೇಲಿನ ಕಲ್ಲು ತೆಗೆಯಲಾಗಿತ್ತು. ಬಳಿಕ ಮಹಾನಗರ ಪಾಲಿಕೆಯವರು ಚರಂಡಿಯ ಮೇಲ್ಭಾಗವನ್ನು ಮುಚ್ಚಿರಲಿಲ್ಲ. ಇದರಿಂದಾಗಿ ಮಂಗಳವಾರ ಅ.15 ಸಂಜೆ ಮಗು ಚರಂಡಿಗೆ ಬಿದ್ದು ಸಾವನ್ನಪ್ಪಿದೆ. ಅವಘಡಕ್ಕೆ ಮಹಾನಗರ ಪಾಲಿಕೆಯ ನಿರ್ಲಕ್ಷ್ಯವೇ ಕಾರಣ ಎಂದು ಮಗುವಿನ ಕುಟುಂಬಸ್ಥರು ಆರೋಪಿಸಿದ್ದಾರೆ.


ಮಹಾನಗರ ಪಾಲಿಕೆಯ ವಿರುದ್ಧ ಸ್ಥಳೀಯರು, ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಒಳಚರಂಡಿ ಕಾಮಗಾರಿ ಆರಂಭವಾಗಿ ಆರು ತಿಂಗಳು ಕಳೆದಿದೆ. ಗುತ್ತಿಗೆದಾರರು ಕಾಮಗಾರಿಯ ಬಗ್ಗೆ ಕಾಳಜಿ ವಹಿಸಿಲ್ಲ. ಕೊಳಚೆ ನೀರಿನ ಚರಂಡಿಗೆ ಸ್ಲ್ಯಾಬ್ ಹಾಕದ ಕಾರಣ, ಶಿಶು ಜೀವ ಕಳೆದುಕೊಂಡಂತಾಗಿದೆ, ನಗರ ಶಾಸಕರು ಸೌಜನ್ಯಕ್ಕೂ ಈ ಭಾಗಕ್ಕೆ ಭೇಟಿ ನೀಡಿಲ್ಲ ಎಂದು ದೂರಿದರು.
ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಪ್ರತಿಭಟನಾ ಸ್ಥಳಕ್ಕೆ ಧಾವಿಸಿದರು. ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ವಿಫಲವಾಗಿರುವ ಪಾಲಿಕೆ ಅಧಿಕಾರಿಗಳು ಹಾಗೂ ಜಿಲ್ಲಾಡಳಿತ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ವೈಯಕ್ತಿಕವಾಗಿ ₹2ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದರು.
ಉಪ ಮೇಯರ್ ದಿನೇಶ ಹಳ್ಳಿ ಮಾತನಾಡಿ, ‘ನೊಂದ ಕುಟುಂಬಕ್ಕೆ ಮಹಾನಗರ ಪಾಲಿಕೆಯಿಂದಲೂ ₹2ಲಕ್ಷ ಪರಿಹಾರ ಧನ ನೀಡಲಾಗುವುದು’ ಎಂದರು.
ಸ್ಥಳೀಯ ಮುಖಂಡ ರಫೀಕ್ ಅಹ್ಮದ್ ಖಾಣೆ ಮಾತನಾಡಿ, ‘ಚರಂಡಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಇಲ್ಲಿನ ನಿವಾಸಿಗಳು ಒತ್ತಾಯಿಸಿ ಆರು ತಿಂಗಳಾಗುತ್ತಾ ಬಂದರೂ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ವಾರ್ಡ್ ಪ್ರತಿನಿಧಿಸುವ ಸದಸ್ಯೆ ಕೂಡ ಅನೇಕ ಬಾರಿ ಪತ್ರ ಮುಖೇನ, ಮೌಖಿಕವಾಗಿಯೂ ವಿನಂತಿ ಮಾಡಿಕೊಂಡರೂ ಪ್ರಯೋಜನಾಗಿಲ್ಲ’ ಎಂದು ಅಸಮಾಧಾನ ಹೊರಹಾಕಿದರು.
ಮುಗಿಲು ಮುಟ್ಟಿದ ಆಕ್ರಂದನ ;
ಬದುಕನ್ನು ನೋಡಲು ಆಗಷ್ಟೇ ಆರಂಭಿಸಿದ ಎರಡು ವರ್ಷದ ಕಂದಮ್ಮನನ್ನು ಕಳೆದುಕೊಂಡ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತ್ತು. ಸತತ ಒಂದು ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿ ಕಸ ತುಂಬಿದ ಚರಂಡಿಯಲ್ಲಿ ಬಾಲಕನ ಮೃತದೇಹ ಹೊರತಗೆಯುತ್ತಿದ್ದಂತೆ ಹೆತ್ತ ಕರುಳಿನ ಆಕ್ರಂದನ ನೋಡಿ ನೆರೆ ಹೊರೆಯವರ ಕಣ್ಣೀರಾದರು.
Two year old baby falls into pit, dies at vijyapur. Family alleges total negligence of city corporation.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am