ಬ್ರೇಕಿಂಗ್ ನ್ಯೂಸ್
17-10-24 05:29 pm HK News Desk ಕರ್ನಾಟಕ
ವಿಜಯಪುರ, ಅ 18: ಚರಂಡಿಯಲ್ಲಿ ಬಿದ್ದು ಎರಡು ವರ್ಷದ ಮಗು ಸಾವನ್ನಪ್ಪಿದ್ದ ದಾರುಣ ಘಟನೆ ನಗರದ ಬಡಿಕಮಾನ್ ರಸ್ತೆಯ ಬಳಿ ನಡೆದಿದೆ.
ಮೃತ ಮಗುವನ್ನು 2 ವರ್ಷದ ಯಾಸೀನ್ ಸದ್ದಾಂ ಮುಲ್ಲಾ ಎಂದು ಗುರುತಿಸಲಾಗಿದೆ.
ಕಳೆದ ಕೆಲವು ದಿನಗಳ ಹಿಂದೆ ಭಾರೀ ಮಳೆ ಹಿನ್ನೆಲೆ ಚರಂಡಿ ಮೇಲಿನ ಕಲ್ಲು ತೆಗೆಯಲಾಗಿತ್ತು. ಬಳಿಕ ಮಹಾನಗರ ಪಾಲಿಕೆಯವರು ಚರಂಡಿಯ ಮೇಲ್ಭಾಗವನ್ನು ಮುಚ್ಚಿರಲಿಲ್ಲ. ಇದರಿಂದಾಗಿ ಮಂಗಳವಾರ ಅ.15 ಸಂಜೆ ಮಗು ಚರಂಡಿಗೆ ಬಿದ್ದು ಸಾವನ್ನಪ್ಪಿದೆ. ಅವಘಡಕ್ಕೆ ಮಹಾನಗರ ಪಾಲಿಕೆಯ ನಿರ್ಲಕ್ಷ್ಯವೇ ಕಾರಣ ಎಂದು ಮಗುವಿನ ಕುಟುಂಬಸ್ಥರು ಆರೋಪಿಸಿದ್ದಾರೆ.


ಮಹಾನಗರ ಪಾಲಿಕೆಯ ವಿರುದ್ಧ ಸ್ಥಳೀಯರು, ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಒಳಚರಂಡಿ ಕಾಮಗಾರಿ ಆರಂಭವಾಗಿ ಆರು ತಿಂಗಳು ಕಳೆದಿದೆ. ಗುತ್ತಿಗೆದಾರರು ಕಾಮಗಾರಿಯ ಬಗ್ಗೆ ಕಾಳಜಿ ವಹಿಸಿಲ್ಲ. ಕೊಳಚೆ ನೀರಿನ ಚರಂಡಿಗೆ ಸ್ಲ್ಯಾಬ್ ಹಾಕದ ಕಾರಣ, ಶಿಶು ಜೀವ ಕಳೆದುಕೊಂಡಂತಾಗಿದೆ, ನಗರ ಶಾಸಕರು ಸೌಜನ್ಯಕ್ಕೂ ಈ ಭಾಗಕ್ಕೆ ಭೇಟಿ ನೀಡಿಲ್ಲ ಎಂದು ದೂರಿದರು.
ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಪ್ರತಿಭಟನಾ ಸ್ಥಳಕ್ಕೆ ಧಾವಿಸಿದರು. ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ವಿಫಲವಾಗಿರುವ ಪಾಲಿಕೆ ಅಧಿಕಾರಿಗಳು ಹಾಗೂ ಜಿಲ್ಲಾಡಳಿತ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ವೈಯಕ್ತಿಕವಾಗಿ ₹2ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದರು.
ಉಪ ಮೇಯರ್ ದಿನೇಶ ಹಳ್ಳಿ ಮಾತನಾಡಿ, ‘ನೊಂದ ಕುಟುಂಬಕ್ಕೆ ಮಹಾನಗರ ಪಾಲಿಕೆಯಿಂದಲೂ ₹2ಲಕ್ಷ ಪರಿಹಾರ ಧನ ನೀಡಲಾಗುವುದು’ ಎಂದರು.
ಸ್ಥಳೀಯ ಮುಖಂಡ ರಫೀಕ್ ಅಹ್ಮದ್ ಖಾಣೆ ಮಾತನಾಡಿ, ‘ಚರಂಡಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಇಲ್ಲಿನ ನಿವಾಸಿಗಳು ಒತ್ತಾಯಿಸಿ ಆರು ತಿಂಗಳಾಗುತ್ತಾ ಬಂದರೂ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ವಾರ್ಡ್ ಪ್ರತಿನಿಧಿಸುವ ಸದಸ್ಯೆ ಕೂಡ ಅನೇಕ ಬಾರಿ ಪತ್ರ ಮುಖೇನ, ಮೌಖಿಕವಾಗಿಯೂ ವಿನಂತಿ ಮಾಡಿಕೊಂಡರೂ ಪ್ರಯೋಜನಾಗಿಲ್ಲ’ ಎಂದು ಅಸಮಾಧಾನ ಹೊರಹಾಕಿದರು.
ಮುಗಿಲು ಮುಟ್ಟಿದ ಆಕ್ರಂದನ ;
ಬದುಕನ್ನು ನೋಡಲು ಆಗಷ್ಟೇ ಆರಂಭಿಸಿದ ಎರಡು ವರ್ಷದ ಕಂದಮ್ಮನನ್ನು ಕಳೆದುಕೊಂಡ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತ್ತು. ಸತತ ಒಂದು ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿ ಕಸ ತುಂಬಿದ ಚರಂಡಿಯಲ್ಲಿ ಬಾಲಕನ ಮೃತದೇಹ ಹೊರತಗೆಯುತ್ತಿದ್ದಂತೆ ಹೆತ್ತ ಕರುಳಿನ ಆಕ್ರಂದನ ನೋಡಿ ನೆರೆ ಹೊರೆಯವರ ಕಣ್ಣೀರಾದರು.
Two year old baby falls into pit, dies at vijyapur. Family alleges total negligence of city corporation.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm