ಬ್ರೇಕಿಂಗ್ ನ್ಯೂಸ್
18-10-24 05:32 pm HK News Desk ಕರ್ನಾಟಕ
ಶಿವಮೊಗ್ಗ, ಅ.18: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಕನ್ನಡದ ಕಿರುತೆರೆಯ ರಿಯಾಲಿಟಿ ಶೋ ಬಿಗ್ ಬಾಸ್ 11ನೇ ಸೀಸನ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. ಬಿಗ್ ಬಾಸ್ ಶೋ ರದ್ದುಪಡಿಸುವಂತೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸ್ಥಳೀಯ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಹಾಕಲಾಗಿದೆ.
ಬಿಗ್ ಬಾಸ್ ಶೋ ವಿರುದ್ಧ ಅನೇಕ ಆರೋಪ ಕೇಳಿಬಂದಿದ್ದು, ಕಳೆದ ವಾರ, 'ಬಿಗ್ ಬಾಸ್' ಮನೆಯಲ್ಲಿ ಮಹಿಳಾ ಸ್ಪರ್ಧಿಗಳ ಖಾಸಗಿತನಕ್ಕೆ ಧಕ್ಕೆಯಾಗಿದೆ ಎಂದು ವಕೀಲೆಯೊಬ್ಬರು ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೂ ದೂರು ಸಲ್ಲಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಬಿಗ್ ಬಾಸ್ ತಂಡ ಎಚ್ಚತ್ತುಕೊಂಡು ಈ ಬಾರಿಯ ನರಕ- ಸ್ವರ್ಗ ಎಂಬ ಪರಿಕಲ್ಪನೆಯನ್ನು ಅರ್ಧಕ್ಕೆ ನಿಲ್ಲಿಸಿ ಎಲ್ಲಾ ಸ್ಪರ್ಧಿಗಳನ್ನು ಒಂದೇ ಮನೆಯಲ್ಲಿ ಇರುವ ಅವಕಾಶ ಕಲ್ಪಿಸಲಾಗಿದೆ.
ಹೀಗಿರುವಾಗಲೇ ಬಿಗ್ ಬಾಸ್ 11ನೇ ಸೀಸನ್ ಪ್ರಸಾರವನ್ನು ಖಾಯಂ ಆಗಿ ರದ್ದುಪಡಿಸುವಂತೆ ಶಿವಮೊಗ್ಗ ಜಿಲ್ಲೆಯ ಸಾಗರದ ಪ್ರಧಾನ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಅರ್ಜಿ ಹಾಕಲಾಗಿದೆ. ಸಾಗರದ ವಕೀಲ ಕೆ.ಎಲ್ ಭೋಜರಾಜ್ ಎಂಬವರು ವ್ಯವಹಾರ ಪ್ರಕ್ರಿಯಾ ಸಂಹಿತೆ ಆದೇಶ 39 ನಿಯಮ 1 ಮತ್ತು 2ರ ಸೆಕ್ಷನ್ 151ರ ಪ್ರಕಾರ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಧೀಶೆ ಚಾಂದಿನಿ ಜಿ.ಯು. ಅವರು ವಕೀಲ ಕೆ.ಎಲ್ ಭೋಜರಾಜ್ ಅವರ ಅರ್ಜಿ ಕೈಗೆತ್ತಿಕೊಂಡಿದ್ದು ಸಿವಿಲ್ ಕಾರ್ಯ ವಿಧಾನದ ಕೋಡ್ ಕಾಯಿದೆ U/sec 26, order 7, rule1 ಅಡಿಯಲ್ಲಿ ಕಲರ್ಸ್ ಕನ್ನಡ ವಾಹಿನಿಯ ನಿರ್ಮಾಪಕರ ಹಾಗೂ ಸಂಪಾದಕರಿಗೆ ತುರ್ತು ನೋಟಿಸ್ ನೀಡಿದ್ದು, ಅರ್ಜಿ ವಿಚಾರಣೆ ಅಕ್ಟೋಬರ್ 28 ರಂದು ನಡೆಯಲಿದೆ.
Case filed at Shivamogga court to stop big boss kannada show. Big boss kannada has both heaven and hell in which human rights commission had sent a notice to stop the hell game.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm