ಬ್ರೇಕಿಂಗ್ ನ್ಯೂಸ್
18-10-24 05:32 pm HK News Desk ಕರ್ನಾಟಕ
ಶಿವಮೊಗ್ಗ, ಅ.18: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಕನ್ನಡದ ಕಿರುತೆರೆಯ ರಿಯಾಲಿಟಿ ಶೋ ಬಿಗ್ ಬಾಸ್ 11ನೇ ಸೀಸನ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. ಬಿಗ್ ಬಾಸ್ ಶೋ ರದ್ದುಪಡಿಸುವಂತೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸ್ಥಳೀಯ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಹಾಕಲಾಗಿದೆ.
ಬಿಗ್ ಬಾಸ್ ಶೋ ವಿರುದ್ಧ ಅನೇಕ ಆರೋಪ ಕೇಳಿಬಂದಿದ್ದು, ಕಳೆದ ವಾರ, 'ಬಿಗ್ ಬಾಸ್' ಮನೆಯಲ್ಲಿ ಮಹಿಳಾ ಸ್ಪರ್ಧಿಗಳ ಖಾಸಗಿತನಕ್ಕೆ ಧಕ್ಕೆಯಾಗಿದೆ ಎಂದು ವಕೀಲೆಯೊಬ್ಬರು ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೂ ದೂರು ಸಲ್ಲಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಬಿಗ್ ಬಾಸ್ ತಂಡ ಎಚ್ಚತ್ತುಕೊಂಡು ಈ ಬಾರಿಯ ನರಕ- ಸ್ವರ್ಗ ಎಂಬ ಪರಿಕಲ್ಪನೆಯನ್ನು ಅರ್ಧಕ್ಕೆ ನಿಲ್ಲಿಸಿ ಎಲ್ಲಾ ಸ್ಪರ್ಧಿಗಳನ್ನು ಒಂದೇ ಮನೆಯಲ್ಲಿ ಇರುವ ಅವಕಾಶ ಕಲ್ಪಿಸಲಾಗಿದೆ.
ಹೀಗಿರುವಾಗಲೇ ಬಿಗ್ ಬಾಸ್ 11ನೇ ಸೀಸನ್ ಪ್ರಸಾರವನ್ನು ಖಾಯಂ ಆಗಿ ರದ್ದುಪಡಿಸುವಂತೆ ಶಿವಮೊಗ್ಗ ಜಿಲ್ಲೆಯ ಸಾಗರದ ಪ್ರಧಾನ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಅರ್ಜಿ ಹಾಕಲಾಗಿದೆ. ಸಾಗರದ ವಕೀಲ ಕೆ.ಎಲ್ ಭೋಜರಾಜ್ ಎಂಬವರು ವ್ಯವಹಾರ ಪ್ರಕ್ರಿಯಾ ಸಂಹಿತೆ ಆದೇಶ 39 ನಿಯಮ 1 ಮತ್ತು 2ರ ಸೆಕ್ಷನ್ 151ರ ಪ್ರಕಾರ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಧೀಶೆ ಚಾಂದಿನಿ ಜಿ.ಯು. ಅವರು ವಕೀಲ ಕೆ.ಎಲ್ ಭೋಜರಾಜ್ ಅವರ ಅರ್ಜಿ ಕೈಗೆತ್ತಿಕೊಂಡಿದ್ದು ಸಿವಿಲ್ ಕಾರ್ಯ ವಿಧಾನದ ಕೋಡ್ ಕಾಯಿದೆ U/sec 26, order 7, rule1 ಅಡಿಯಲ್ಲಿ ಕಲರ್ಸ್ ಕನ್ನಡ ವಾಹಿನಿಯ ನಿರ್ಮಾಪಕರ ಹಾಗೂ ಸಂಪಾದಕರಿಗೆ ತುರ್ತು ನೋಟಿಸ್ ನೀಡಿದ್ದು, ಅರ್ಜಿ ವಿಚಾರಣೆ ಅಕ್ಟೋಬರ್ 28 ರಂದು ನಡೆಯಲಿದೆ.
Case filed at Shivamogga court to stop big boss kannada show. Big boss kannada has both heaven and hell in which human rights commission had sent a notice to stop the hell game.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm