ಬ್ರೇಕಿಂಗ್ ನ್ಯೂಸ್
18-10-24 05:32 pm HK News Desk ಕರ್ನಾಟಕ
ಶಿವಮೊಗ್ಗ, ಅ.18: ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಕನ್ನಡದ ಕಿರುತೆರೆಯ ರಿಯಾಲಿಟಿ ಶೋ ಬಿಗ್ ಬಾಸ್ 11ನೇ ಸೀಸನ್ ಗೆ ಮತ್ತೆ ಸಂಕಷ್ಟ ಎದುರಾಗಿದೆ. ಬಿಗ್ ಬಾಸ್ ಶೋ ರದ್ದುಪಡಿಸುವಂತೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸ್ಥಳೀಯ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಹಾಕಲಾಗಿದೆ.
ಬಿಗ್ ಬಾಸ್ ಶೋ ವಿರುದ್ಧ ಅನೇಕ ಆರೋಪ ಕೇಳಿಬಂದಿದ್ದು, ಕಳೆದ ವಾರ, 'ಬಿಗ್ ಬಾಸ್' ಮನೆಯಲ್ಲಿ ಮಹಿಳಾ ಸ್ಪರ್ಧಿಗಳ ಖಾಸಗಿತನಕ್ಕೆ ಧಕ್ಕೆಯಾಗಿದೆ ಎಂದು ವಕೀಲೆಯೊಬ್ಬರು ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೂ ದೂರು ಸಲ್ಲಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಬಿಗ್ ಬಾಸ್ ತಂಡ ಎಚ್ಚತ್ತುಕೊಂಡು ಈ ಬಾರಿಯ ನರಕ- ಸ್ವರ್ಗ ಎಂಬ ಪರಿಕಲ್ಪನೆಯನ್ನು ಅರ್ಧಕ್ಕೆ ನಿಲ್ಲಿಸಿ ಎಲ್ಲಾ ಸ್ಪರ್ಧಿಗಳನ್ನು ಒಂದೇ ಮನೆಯಲ್ಲಿ ಇರುವ ಅವಕಾಶ ಕಲ್ಪಿಸಲಾಗಿದೆ.
ಹೀಗಿರುವಾಗಲೇ ಬಿಗ್ ಬಾಸ್ 11ನೇ ಸೀಸನ್ ಪ್ರಸಾರವನ್ನು ಖಾಯಂ ಆಗಿ ರದ್ದುಪಡಿಸುವಂತೆ ಶಿವಮೊಗ್ಗ ಜಿಲ್ಲೆಯ ಸಾಗರದ ಪ್ರಧಾನ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಅರ್ಜಿ ಹಾಕಲಾಗಿದೆ. ಸಾಗರದ ವಕೀಲ ಕೆ.ಎಲ್ ಭೋಜರಾಜ್ ಎಂಬವರು ವ್ಯವಹಾರ ಪ್ರಕ್ರಿಯಾ ಸಂಹಿತೆ ಆದೇಶ 39 ನಿಯಮ 1 ಮತ್ತು 2ರ ಸೆಕ್ಷನ್ 151ರ ಪ್ರಕಾರ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಧೀಶೆ ಚಾಂದಿನಿ ಜಿ.ಯು. ಅವರು ವಕೀಲ ಕೆ.ಎಲ್ ಭೋಜರಾಜ್ ಅವರ ಅರ್ಜಿ ಕೈಗೆತ್ತಿಕೊಂಡಿದ್ದು ಸಿವಿಲ್ ಕಾರ್ಯ ವಿಧಾನದ ಕೋಡ್ ಕಾಯಿದೆ U/sec 26, order 7, rule1 ಅಡಿಯಲ್ಲಿ ಕಲರ್ಸ್ ಕನ್ನಡ ವಾಹಿನಿಯ ನಿರ್ಮಾಪಕರ ಹಾಗೂ ಸಂಪಾದಕರಿಗೆ ತುರ್ತು ನೋಟಿಸ್ ನೀಡಿದ್ದು, ಅರ್ಜಿ ವಿಚಾರಣೆ ಅಕ್ಟೋಬರ್ 28 ರಂದು ನಡೆಯಲಿದೆ.
Case filed at Shivamogga court to stop big boss kannada show. Big boss kannada has both heaven and hell in which human rights commission had sent a notice to stop the hell game.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm