ಬ್ರೇಕಿಂಗ್ ನ್ಯೂಸ್
18-10-24 10:57 pm Bangalore Correspondent ಕರ್ನಾಟಕ
ಬೆಂಗಳೂರು, ಅ.18: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಸೈಟ್ ಹಂಚಿಕೆ ಹಗರಣದಲ್ಲಿ ಇಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು ಮೈಸೂರಿನ ಮುಡಾ ಕಚೇರಿಗೆ ದಾಳಿ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಪತ್ನಿಯ ಸೈಟ್ ಮೂಲ ದಾಖಲೆ ಪಡೆಯಲು ಮುಂದಾಗಿದ್ದಾರೆ. ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಸೈಟ್ಗಳ ಮೂಲ ದಾಖಲೆ ಕೊಡುವಂತೆ ಮುಡಾ ಅಧಿಕಾರಿಗಳಿಗೆ ಇಡಿ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಮುಡಾ ಆಯುಕ್ತ ಹಾಗು ಕಾರ್ಯದರ್ಶಿಗೆ ಶುಕ್ರವಾರ ಇಡೀ ದಿನ ಇಡಿ ಅಧಿಕಾರಿಗಳು ಕ್ಲಾಸ್ ತೆಗೆದುಕೊಂಡಿದ್ದು, ಇಡಿ ಪ್ರಶ್ನೆಗೆ ಮುಡಾ ಅಧಿಕಾರಿಗಳು ತಬ್ಬಿಬ್ಬಾಗಿದ್ದಾರೆ. ಸಿದ್ದರಾಮಯ್ಯ ಅವರ ಪತ್ನಿ ಶ್ರೀಮತಿ ಪಾರ್ವತಿ ಅವ್ರ ಸೈಟು ಮೂಲ ದಾಖಲಾತಿ ಕೊಡಿ. ವೈಟ್ನರ್ ಹಾಕಿದ್ದ ದಾಖಲೆ ಕೊಡಿ. ಮೂಲ ದಾಖಲೆ ಎಲ್ಲಿದೆ? ಎಂದು ಪ್ರಶ್ನಿಸಿದ್ದಾರೆ.
ಸರಿಯಾದ ದಾಖಲೆ ಕೊಡಿ, ಇಲ್ಲದಿದ್ದರೆ ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ ಅಂತ ಇಡಿ ಅಧಿಕಾರಿಗಳು ಮುಡಾ ಸಿಬಂದಿಯನ್ನು ಎಚ್ಚರಿಸಿದ್ದಾರೆ. ನಾವು ಹೊಸಬರು ಸರ್, ಕಳೆದ ತಿಂಗಳಷ್ಟೇ ಹೊಸದಾಗಿ ಮುಡಾಗೆ ಬಂದಿದ್ದೇವೆ. ನಮಗೂ ಇದಕ್ಕೂ ಸಂಬಂಧವಿಲ್ಲ. ದಯಮಾಡಿ ಈ ವಿಚಾರದಲ್ಲಿ ನಮ್ಮನ್ನು ಬಿಡಿ. ಇಲ್ಲಿರುವ ದಾಖಲೆಗಳನ್ನು ಕೊಡ್ತೇವೆ. ನೀವು ಕೇಳಿದ ಕೆಲ ದಾಖಲೆಗಳ ಪೈಕಿ ಇರುವ ದಾಖಲೆಯನ್ನು ಕೊಡ್ತೀವಿ ಅಂತ ಮುಡಾ ಅಧಿಕಾರಿಗಳು ಇಡಿ ಅಧಿಕಾರಿಗಳ ಮುಂದೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
2010ರ ವರೆಗೆ 800 ಪುಟಗಳ ದಾಖಲಾತಿಗಳ ಜೆರಾಕ್ಸ್ ಪ್ರತಿಗಳನ್ನು ಮುಡಾ ಅಧಿಕಾರಿಗಳು ನೀಡಿದ್ದಾರಂತೆ. ಆದರೆ ನಮಗೆ ಈ ದಾಖಲಾತಿ ಬೇಡ. ಪಾರ್ವತಿ ಅವರಿಗೆ ಸೈಟು ವರ್ಗಾವಣೆಯಾದ ದಾಖಲೆ ಕೊಡಿ. 50:50 ಅನುಪಾತದ ಅಡಿಯಲ್ಲಿ ಹಂಚಿಕೆಯಾಗಿರುವ ದಾಖಲೆ ಕೊಡಿ ಎಂದು ಪಟ್ಟು ಹಿಡಿದಿದ್ದಾರೆ.
A team of 12 Enforcement Directorate officials searched the city office of the Mysuru Urban Development Authority Friday in connection with the money laundering case against Karnataka Chief Minister Siddaramaiah. The Congress leader - who has refused to comment on the raids - and his family face state and federal charges over allegations they profited from an exchange of land allotments by MUDA.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm