ಬ್ರೇಕಿಂಗ್ ನ್ಯೂಸ್
19-10-24 05:46 pm Bangalore Correspondent ಕರ್ನಾಟಕ
ಬೆಂಗಳೂರು, ಅ.19: ಸುಪ್ರೀಂಕೋರ್ಟ್ ನಿರ್ದೇಶನದಂತೆ ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ, ಖಾಸಗಿ ಶಾಲೆಗಳ 5, 8, 9ನೇ ತರಗತಿ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಈ ಬಾರಿ ಬೋರ್ಡ್ ಪರೀಕ್ಷೆ ಇರುವುದಿಲ್ಲ. ಈ ಹಿಂದಿನಂತೆ ಶಾಲಾ ಹಂತದಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 5, 8, 9ನೇ ತರಗತಿ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ಬದಲಿಗೆ ಈ ಹಿಂದೆ ಇದ್ದಂತೆ ಶಾಲಾ ಹಂತದಲ್ಲಿ ಮೌಲ್ಯಾಂಕನ- 2(ಎಸ್ಎ-2). 11ನೇ ತರಗತಿಗೆ ವಾರ್ಷಿಕ ಪರೀಕ್ಷೆ ನಡೆಸಲಾಗುವುದು. 5, 8, 9, 11ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಕೆಲವು ಖಾಸಗಿ ಶಾಲಾ ಸಂಘಟನೆಗಳು ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಿವೆ. ಪ್ರಕರಣದ ವಿಚಾರಣೆ ವೇಳೆ ಮಂಡಳಿ ಪರೀಕ್ಷೆ ನಡೆಸದಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಈ ವರ್ಷ ಬೋರ್ಡ್ ಪರೀಕ್ಷೆ ನಡೆಸುವುದಿಲ್ಲ ಎಂದು ತಿಳಿಸಿದ್ದಾರೆ.
ಇನ್ನು ಸ್ಥಳೀಯ ಪಠ್ಯಕ್ರಮ, ಭಾಷೆ ಮತ್ತು ಸಂದರ್ಭವನ್ನು ಆಧರಿಸಿ ಸಮಗ್ರ ಬೋಧನಾ ಸಂಪನ್ಮೂಲಗಳು ಮತ್ತು ಕಲಿಕೆಯ ಅನುಭವಗಳನ್ನು ರಚಿಸಲು ಶಿಕ್ಷಣ ಕೋಪೈಲಟ್ ಯೋಜನೆ ಶಿಕ್ಷಕರನ್ನು ಸಶಕ್ತಗೊಳಿಸುತ್ತದೆ. ಕರ್ನಾಟಕ ರಾಜ್ಯದ ನಗರ ಮತ್ತು ಗ್ರಾಮೀಣ ಭಾಗಗಳ ಎಲ್ಲಾ ಶೈಕ್ಷಣಿಕ ಜಿಲ್ಲೆಗಳಲ್ಲಿ 750ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಂದ ಆಯ್ದ 1000 ಶಿಕ್ಷಕರಿಗೆ ಶಿಕ್ಷಣ ಕೋಪೈಲಟ್ -AI ಚಾಲಿತ ಡಿಜಿಟಲ್ ಸಹಾಯವನ್ನು ನೀಡಲಾಗುವುದು ಎಂದು ತಿಳಿಸಿದರು.
ಶಿಕ್ಷಣ ಕೋಪೈಲಟ್ ಉತ್ತಮ ಗುಣಮಟ್ಟದ ವಿಷಯವನ್ನು ರಚಿಸಲು ಶಿಕ್ಷಕರನ್ನು ಸಬಲೀಕರಣಗೊಳಿಸುತ್ತದೆ. ಶಿಕ್ಷಕರ ಹಿಮ್ಮಾಹಿತಿ ಆಧಾರದ ಮೇಲೆ ಚಟುವಟಿಕೆಗಳು, ಮೌಲ್ಯಮಾಪನಗಳು, ನೈಜ-ಪ್ರಪಂಚದ ಉದಾಹರಣೆಗಳು, ಅನ್ವಯಗಳು, ಕಿರು ವೀಡಿಯೊಗಳು ಮತ್ತು ಸಮಗ್ರ ಪಾಠ ಯೋಜನೆಗಳಂತಹ ಬೋಧನಾ ಸಂಪನ್ಮೂಲಗಳನ್ನು ರಚಿಸಲು ಶಿಕ್ಷ ಕೋಪೈಲಟ್ ಸಹಾಯ ಮಾಡುತ್ತದೆ. ಇದು ಸ್ವಯಂ ಕಲಿಕೆ ಮತ್ತು ಸಂವಾದಾತ್ಮಕ ವಿಷಯ ರಚನೆಗಾಗಿ ಶಿಕ್ಷಕರಿಗೆ ಚಾಟ್-ಬಾಟ್ ಅನ್ನು ಸಹ ಒದಗಿಸುತ್ತದೆ ಎಂದು ಸಚಿವರು ತಿಳಿಸಿದರು.
The Karnataka Government has officially decided not to conduct board examinations for students in classes 5, 8, 9, and 11 in state-affiliated schools, aligning with a directive from the Supreme Court.
23-02-25 06:38 pm
Bangalore Correspondent
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
Bidar accident, Prayagraj, five killed; ಬೀದರ್...
21-02-25 02:00 pm
23-02-25 11:22 pm
HK News Desk
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
Kerala school teacher suicide, catholic Churc...
22-02-25 03:53 pm
23-02-25 03:20 pm
Mangalore Correspondent
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
Thumbay Group, Fergana College, Uzbekistan: ಉ...
21-02-25 07:54 pm
23-02-25 03:42 pm
HK News Desk
Visa fraud, Bangalore crime, Arrest: ವಿದೇಶಿ ವ...
22-02-25 10:36 pm
Ankola Car Robbery, Rajendra Pawar, Gold Smug...
20-02-25 01:22 pm
Mangalore, Puttur, Cheating, paras traders: ಲ...
19-02-25 09:26 pm
Mangalore CCB police, 119 kg ganja, Crime: ಮೀ...
18-02-25 07:19 pm