ಬ್ರೇಕಿಂಗ್ ನ್ಯೂಸ್
19-10-24 05:46 pm Bangalore Correspondent ಕರ್ನಾಟಕ
ಬೆಂಗಳೂರು, ಅ.19: ಸುಪ್ರೀಂಕೋರ್ಟ್ ನಿರ್ದೇಶನದಂತೆ ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ, ಖಾಸಗಿ ಶಾಲೆಗಳ 5, 8, 9ನೇ ತರಗತಿ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಈ ಬಾರಿ ಬೋರ್ಡ್ ಪರೀಕ್ಷೆ ಇರುವುದಿಲ್ಲ. ಈ ಹಿಂದಿನಂತೆ ಶಾಲಾ ಹಂತದಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 5, 8, 9ನೇ ತರಗತಿ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ಬದಲಿಗೆ ಈ ಹಿಂದೆ ಇದ್ದಂತೆ ಶಾಲಾ ಹಂತದಲ್ಲಿ ಮೌಲ್ಯಾಂಕನ- 2(ಎಸ್ಎ-2). 11ನೇ ತರಗತಿಗೆ ವಾರ್ಷಿಕ ಪರೀಕ್ಷೆ ನಡೆಸಲಾಗುವುದು. 5, 8, 9, 11ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಕೆಲವು ಖಾಸಗಿ ಶಾಲಾ ಸಂಘಟನೆಗಳು ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಿವೆ. ಪ್ರಕರಣದ ವಿಚಾರಣೆ ವೇಳೆ ಮಂಡಳಿ ಪರೀಕ್ಷೆ ನಡೆಸದಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಈ ವರ್ಷ ಬೋರ್ಡ್ ಪರೀಕ್ಷೆ ನಡೆಸುವುದಿಲ್ಲ ಎಂದು ತಿಳಿಸಿದ್ದಾರೆ.
ಇನ್ನು ಸ್ಥಳೀಯ ಪಠ್ಯಕ್ರಮ, ಭಾಷೆ ಮತ್ತು ಸಂದರ್ಭವನ್ನು ಆಧರಿಸಿ ಸಮಗ್ರ ಬೋಧನಾ ಸಂಪನ್ಮೂಲಗಳು ಮತ್ತು ಕಲಿಕೆಯ ಅನುಭವಗಳನ್ನು ರಚಿಸಲು ಶಿಕ್ಷಣ ಕೋಪೈಲಟ್ ಯೋಜನೆ ಶಿಕ್ಷಕರನ್ನು ಸಶಕ್ತಗೊಳಿಸುತ್ತದೆ. ಕರ್ನಾಟಕ ರಾಜ್ಯದ ನಗರ ಮತ್ತು ಗ್ರಾಮೀಣ ಭಾಗಗಳ ಎಲ್ಲಾ ಶೈಕ್ಷಣಿಕ ಜಿಲ್ಲೆಗಳಲ್ಲಿ 750ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಂದ ಆಯ್ದ 1000 ಶಿಕ್ಷಕರಿಗೆ ಶಿಕ್ಷಣ ಕೋಪೈಲಟ್ -AI ಚಾಲಿತ ಡಿಜಿಟಲ್ ಸಹಾಯವನ್ನು ನೀಡಲಾಗುವುದು ಎಂದು ತಿಳಿಸಿದರು.
ಶಿಕ್ಷಣ ಕೋಪೈಲಟ್ ಉತ್ತಮ ಗುಣಮಟ್ಟದ ವಿಷಯವನ್ನು ರಚಿಸಲು ಶಿಕ್ಷಕರನ್ನು ಸಬಲೀಕರಣಗೊಳಿಸುತ್ತದೆ. ಶಿಕ್ಷಕರ ಹಿಮ್ಮಾಹಿತಿ ಆಧಾರದ ಮೇಲೆ ಚಟುವಟಿಕೆಗಳು, ಮೌಲ್ಯಮಾಪನಗಳು, ನೈಜ-ಪ್ರಪಂಚದ ಉದಾಹರಣೆಗಳು, ಅನ್ವಯಗಳು, ಕಿರು ವೀಡಿಯೊಗಳು ಮತ್ತು ಸಮಗ್ರ ಪಾಠ ಯೋಜನೆಗಳಂತಹ ಬೋಧನಾ ಸಂಪನ್ಮೂಲಗಳನ್ನು ರಚಿಸಲು ಶಿಕ್ಷ ಕೋಪೈಲಟ್ ಸಹಾಯ ಮಾಡುತ್ತದೆ. ಇದು ಸ್ವಯಂ ಕಲಿಕೆ ಮತ್ತು ಸಂವಾದಾತ್ಮಕ ವಿಷಯ ರಚನೆಗಾಗಿ ಶಿಕ್ಷಕರಿಗೆ ಚಾಟ್-ಬಾಟ್ ಅನ್ನು ಸಹ ಒದಗಿಸುತ್ತದೆ ಎಂದು ಸಚಿವರು ತಿಳಿಸಿದರು.
The Karnataka Government has officially decided not to conduct board examinations for students in classes 5, 8, 9, and 11 in state-affiliated schools, aligning with a directive from the Supreme Court.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm