ಬ್ರೇಕಿಂಗ್ ನ್ಯೂಸ್
19-10-24 09:15 pm Bangalore Correspondent ಕರ್ನಾಟಕ
ಬೆಂಗಳೂರು, ಅ.19: ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಶಿಗ್ಗಾಂವಿಯಿಂದ ಹಾಗೂ ಬಳ್ಳಾರಿ ಜಿಲ್ಲೆಯ ಸಂಡೂರು ಎಸ್ಟಿ ಮೀಸಲು ಕ್ಷೇತ್ರದಿಂದ ಬಿಜೆಪಿ ಎಸ್ಸಿ-ಎಸ್ಟಿ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು ಸ್ಪರ್ಧಿಸಲಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಶಿಗ್ಗಾಂವಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದ ಬಸವರಾಜ ಬೊಮ್ಮಯಿ ಅವರು ಹಾವೇರಿ ಲೋಕಸಭೆ ಚುನಾವಣೆಯಲ್ಲಿ ಗೆದ್ದು ಸಂಸದರಾಗಿದ್ದರು. ಸಂಡೂರು ಕ್ಷೇತ್ರದಲ್ಲಿ ಗೆದ್ದಿದ್ದ ಕಾಂಗ್ರೆಸ್ ಶಾಸಕ ತುಕಾರಾಮ್ ಲೋಕಸಭೆ ಚುನಾವಣೆಯಲ್ಲಿ ಬಳ್ಳಾರಿಯಿಂದ ಗೆದ್ದು ಸಂಸದರಾಗಿದ್ದರು. ಇವರಿಂದ ತೆರವಾಗಿದ್ದ ಕ್ಷೇತ್ರಗಳಿಗೆ ಉಪ ಚುನಾವಣೆ ನ.13ರ ದಿನಾಂಕವನ್ನು ಚುನಾವಣಾ ಆಯೋಗ ಘೋಷಣೆ ಮಾಡಿತ್ತು.
ಚನ್ನಪಟ್ಟಣ ಕ್ಷೇತ್ರದಿಂದ ಗೆದ್ದಿದ್ದ ಎಚ್.ಡಿ ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಗೆದ್ದು ಈಗ ಕೇಂದ್ರ ಸಚಿವರಾಗಿದ್ದಾರೆ. ಇದೀಗ ಅವರಿಂದ ತೆರವಾಗಿರುವ ಚನ್ನಪಟ್ಟಣ ಕ್ಷೇತ್ರಕ್ಕೂ ಉಪ ಚುನಾವಣೆ ನಡೆಯಲಿದೆ. ಆದರೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಯಾರು ಎಂಬುದು ಇನ್ನೂ ನಿರ್ಣಯವಾಗಿಲ್ಲ. ಎರಡು ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಹೆಸರು ಘೋಷಣೆಯಾಗಿದ್ದರಿಂದ ಚನ್ನಪಟ್ಟಣ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟು ಕೊಡುವ ಸಾಧ್ಯತೆಯಿದೆ. ಆದರೆ ಜೆಡುಎಸ್ಸಿಗೆ ಸರಿಯಾದ ಅಭ್ಯರ್ಥಿ ಸಿಗದೇ ಹೋದರೆ, ಬಿಜೆಪಿ ನಾಯಕ ಸಿ.ಪಿ ಯೋಗೇಶ್ವರ್ ಅವರೇ ಜೆಡಿಎಸ್ ಪಕ್ಷದ ಚಿಹ್ನೆಯಲ್ಲಿ ನಿಲ್ಲುವ ಸಾಧ್ಯತೆ ಹೆಚ್ಚಿದೆ.
ನವೆಂಬರ್ 13ರಂದು ಉಪ ಚುನಾವಣೆಗೆ ಮತದಾನ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಮೂರು ಕ್ಷೇತ್ರವನ್ನು ಮೂರೂ ಪಕ್ಷಗಳೂ ಪ್ರತಿಷ್ಠೆಯಾಗಿ ತೆಗೆದುಕೊಂಡಿವೆ. ಶಿಗ್ಗಾಂವಿ ಕ್ಷೇತ್ರಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿಗೆ ಟಿಕೆಟ್ ನೀಡಲಾಗಿದ್ದರೆ ಸಂಡೂರು ಕ್ಷೇತ್ರಕ್ಕೆ ಮಾಜಿ ಸಚಿವ ಜನಾರ್ಧನ ರೆಡ್ಡಿ ಆಪ್ತ ಬಂಗಾರು ಹನುಮಂತುಗೆ ಟಿಕೆಟ್ ನೀಡಲಾಗಿದೆ.
Out of the three Vidhan Sabha constituencies bound for by-elections, BJP had announced the names of candidates for Shiggaon and Sandur on Saturday. However, the candidate for Channapatna is yet to be decided. Bharat Basavaraj Bommai, son of the former CM Bommai, is the candidate for Shiggaon constituency. As Basavaraj Bommai, the previous legislator from the constituency, was elected an MP, the seat had become vacant.
19-10-24 09:15 pm
Bangalore Correspondent
BJP ticket fruad, Acp Chandan Kumar, Pralhad...
19-10-24 08:16 pm
ಈ ಬಾರಿ 5, 8, 9ನೇ ತರಗತಿ, ಪಿಯು ವಿದ್ಯಾರ್ಥಿಗಳಿಗೆ...
19-10-24 05:46 pm
MUDA, Siddaramaiah: ಮೈಸೂರು ಮುಡಾ ಕಚೇರಿಗೆ ಇಡಿ ದ...
18-10-24 10:57 pm
Big boss Kannada, Colours: ಬಿಗ್ ಬಾಸ್ ಶೋಗೆ ಮತ್...
18-10-24 05:32 pm
17-10-24 11:16 am
HK News Desk
Mumbai Road Rage Video; ಮುಂಬೈ ; ಕಾರಿಗೆ ಆಟೋ ರಿ...
15-10-24 03:51 pm
ಡಿ ಕಂಪನಿ ಹಾದಿಯಲ್ಲಿ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್...
14-10-24 10:12 pm
Actor Sanjay Dutt Mangalore,Baba Siddique; ಬಾ...
13-10-24 06:13 pm
ಮೈಸೂರು ದರ್ಭಾಂಗ್ ಬಾಗಮತಿ ಎಕ್ಸ್ ಪ್ರೆಸ್ ರೈಲು ಅಪಘಾ...
13-10-24 03:48 pm
19-10-24 05:07 pm
Mangalore Correspondent
Udupi, scooty Fire: ಪೆಟ್ರೋಲ್ ಪಂಪ್ ಬಳಿಯೇ ಹೊತ್...
19-10-24 02:48 pm
Actor Duniya Vijay, Koragajja, Mangalore: ಬುರ...
19-10-24 12:47 pm
Mangalore crime, Police, Suicide, Puttur: ಸುದ...
18-10-24 09:34 pm
By Election date, Mangalore: ಅ.21ರಂದು ದಕ್ಷಿಣ...
18-10-24 05:55 pm
19-10-24 02:38 pm
HK News Desk
ಸಿಸಿಬಿ ಪೊಲೀಸರ ಭರ್ಜರಿ ಬೇಟೆ ; ಪೋಸ್ಟ್ ಆಫೀಸ್ನಲ್ಲ...
18-10-24 03:11 pm
Mangalore cyber fraud, share market, crime: ಅ...
17-10-24 11:03 pm
Bangalore crime, Double Murder, Illecit affai...
17-10-24 08:02 pm
Fake Aadhar, Mangalore Fraud, Crime: ಹತ್ತು ಸಾ...
16-10-24 02:44 pm