ಬ್ರೇಕಿಂಗ್ ನ್ಯೂಸ್
21-10-24 11:20 pm Bangalore Correspondent ಕರ್ನಾಟಕ
ಬೆಂಗಳೂರು, ಅ.21 : ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿ.ಪಿ ಯೋಗೇಶ್ವರ್ ಅವರನ್ನು ಕಾಂಗ್ರೆಸ್ ಸೆಳೆಯುವ ಪ್ರಯತ್ನ ನಡೆದಿದೆ ಎನ್ನಲಾಗುತ್ತಿದೆ. ಇದಕ್ಕೆ ಪೂರಕವಾಗಿ ಸಚಿವ ಸಂತೋಷ್ ಲಾಡ್, ನಮ್ಮ ಸೈನಿಕ, ನಮ್ಮ ಹೀರೋ.. ಯೋಗೀಶ್ವರ್ ಕಾಂಗ್ರೆಸ್ ಬಂದರೆ ಅವರನ್ನು ಸ್ವಾಗತಿಸುತ್ತೇನೆ ಎಂದಿದ್ದಾರೆ.
ಯೋಗೀಶ್ವರ್ ಚನ್ನಪಟ್ಟಣ ಕ್ಷೇತ್ರದಿಂದ ಬಿಜೆಪಿ ಚಿಹ್ನೆಯಲ್ಲಿ ಟಿಕೆಟ್ ಬೇಡಿಕೆ ಇಟ್ಟಿದ್ದರು. ಆದರೆ ಕುಮಾರಸ್ವಾಮಿ ಅವರು ತನ್ನ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡಲು ಸಿದ್ಧರಿಲ್ಲ. ಇದರ ನಡುವೆಯೇ ಯೋಗೇಶ್ವರ್ ಚುನಾವಣೆ ಸ್ಪರ್ಧಿಸುವುದಾಗಿ ಖಚಿತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಬಸವರಾಜ್ ಹೊರಟ್ಟಿ ನಿವಾಸಕ್ಕೆ ತೆರಳಿ ತಮ್ಮ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇತ್ತ ಚನ್ನಪಟ್ಟಣ ಉಪ ಚುನಾವಣೆಗೆ ಸಂಬಂಧಿಸಿ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ ಸಚಿವ ಸಂತೋಷ್ ಲಾಡ್, ಸಿಪಿ ಯೋಗೇಶ್ವರ್ ನಮ್ಮ ಸೈನಿಕ, ನಮ್ಮ ಹೀರೊ. ಅವರು ಕಾಂಗ್ರೆಸ್ಗೆ ಬರ್ತಾರೆ ಅಂದ್ರೆ ಸ್ವಾಗತ ಮಾಡ್ತೇನೆ. ಸಿಪಿ ಯೋಗೇಶ್ವರ್ಗೆ ಕಾಂಗ್ರೆಸ್ ಟಿಕೆಟ್ ಕೊಡಬೇಕೋ ಬೇಡವೋ ಅಂತ ನಮ್ಮ ಹೈಕಮಾಂಡ್ ತೀರ್ಮಾನ ಮಾಡುತ್ತೆ, ಸಿಪಿ ಯೋಗೇಶ್ವರ್ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಸೇರ್ಪಡೆ ಆಗ್ತಾರೆ ಅನ್ನೋ ಸುದ್ದಿ ಇದೆ. ಯೋಗೇಶ್ವರ್ ಬಂದ್ರೆ ಹೈಕಮಾಂಡ್, ನಮ್ಮ ಪಕ್ಷದ ಮುಖಂಡರು ಹಾಗೂ ನಾನು ವ್ಯಯಕ್ತಿಕವಾಗಿ ಸ್ವಾಗತ ಮಾಡ್ತೇನೆ ಎಂದಿದ್ದಾರೆ.
ಯೋಗೇಶ್ವರ್ ಅವರು ನಮ್ಮ ಪಕ್ಷಕ್ಕೆ ಬಂದ್ರೆ ಅನುಕೂಲ ಆಗುತ್ತೆ, ಅವರು ನಮ್ಮ ಸೈನಿಕ ಹೀರೋ, ಪಕ್ಷದ ನಾಯಕರು ಅವರನ್ನು ಸಂಪರ್ಕ ಮಾಡಿದ್ದಾರೋ ಇಲ್ವೋ ಗೊತ್ತಿಲ್ಲ. ಪಕ್ಷಕ್ಕೆ ಸೇರ್ಪಡೆಯಾದ್ರೆ ಚನ್ನಪಟ್ಟಣದಿಂದ ಕಾಂಗ್ರೆಸ್ ಟಿಕೆಟ್ ನೀಡ್ತಾರೆಯೇ ಅಂತ ನನಗೆ ಗೊತ್ತಿಲ್ಲ. ಕೆಪಿಸಿಸಿ ಅಧ್ಯಕ್ಷರು ಹಾಗೂ ಅಲ್ಲಿನ ಮುಖಂಡರು ತೀರ್ಮಾನ ಮಾಡ್ತಾರೆ. ನಮ್ಮ ಪಕ್ಷದ ನಾಯಕರು ಸಿಪಿ ಯೋಗೇಶ್ವರ್ ಅವರೊಂದಿಗೆ ಚರ್ಚೆ ಮಾಡಿದ್ರು ಮಾಡಿರಬಹುದು, ಆದ್ರೆ ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ.
Minister Santosh lad appluds C P Yogeshwar resignation, says he's out hero and solider. The resignation of BJP MLC C.P. Yogeshwar from his Council position and announcement of contesting possibly as an Independent in the Channapatna bypolls has come as a twist to the poll plot.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm