ಬ್ರೇಕಿಂಗ್ ನ್ಯೂಸ್
22-10-24 12:24 pm Bangalore Correspondent ಕರ್ನಾಟಕ
ಬೆಂಗಳೂರು, ಅ.22: ಸಾಯಿ ವೆಂಕಟೇಶ್ವರ ಮಿನರಲ್ಸ್ಗೆ ಸಂಬಂಧಿಸಿದ ಪ್ರಕರಣದಲ್ಲಿ ಅಕ್ರಮ ಮಧ್ಯಪ್ರವೇಶ ಮತ್ತು ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ ಕುಮಾರಸ್ವಾಮಿ ಅವರಿಗೆ ನೀಡಿರುವ ಜಾಮೀನನ್ನು ರದ್ದುಗೊಳಿಸುವಂತೆ ಕರ್ನಾಟಕ ಲೋಕಾಯುಕ್ತದ ಎಸ್ಐಟಿ ಅಧಿಕಾರಿಗಳು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಪ್ರಕರಣದಲ್ಲಿ ಆಗಸ್ಟ್ 3, 2015ರಂದು ಮಾಜಿ ಮುಖ್ಯಮಂತ್ರಿಗೆ ನೀಡಲಾದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಸ್ಐಟಿ ಅಧಿಕಾರಿಗಳು ಸೋಮವಾರ ಅರ್ಜಿ ಸಲ್ಲಿಸಿದ್ದಾರೆ. ಆಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೆ ಕುಮಾರಸ್ವಾಮಿ ಮೇಲಿನ ಹಳೆ ಪ್ರಕರಣವನ್ನು ಕೆದಕಲು ಮುಂದಾಗಿದೆ. ಅರ್ಜಿಗೆ ಸಂಬಂಧಿಸಿ ಆಕ್ಷೇಪಣೆ ಸಲ್ಲಿಸುವಂತೆ ಕುಮಾರಸ್ವಾಮಿ ಪರ ವಕೀಲರಿಗೆ ಕೋರ್ಟ್ ಸೂಚಿಸಿದ್ದು ವಿಚಾರಣೆಯನ್ನು ಅಕ್ಟೋಬರ್ 25ಕ್ಕೆ ಮುಂದೂಡಿದೆ. ಎರಡನೇ ಆರೋಪಿಯಾಗಿರುವ ಕುಮಾರಸ್ವಾಮಿ, ಪ್ರಕರಣ ಸಂಬಂಧಿತ ದಾಖಲೆಗಳನ್ನು ಅಕ್ರಮವಾಗಿ ಪಡೆದಿದ್ದಾರೆ ಎಂದು ಎಸ್ಐಟಿ ತನ್ನ ಅರ್ಜಿಯಲ್ಲಿ ಉಲ್ಲೇಖಿಸಿದೆ.
ಅಲ್ಲದೆ, ತನಿಖೆಯನ್ನು ಕುಂಠಿತಗೊಳಿಸುವ ಉದ್ದೇಶದಿಂದ ಆರೋಪಿ ಕುಮಾರಸ್ವಾಮಿ ಅವರು ರಾಜ್ಯಪಾಲರು ಮತ್ತು ಎಸ್ಐಟಿ ನಡುವಿನ ಸಂವಹನದ ವಿಚಾರವನ್ನು ಅಕ್ರಮವಾಗಿ ಪಡೆದುಕೊಂಡಿದ್ದಾರೆ. ಇದು ತನಿಖಾ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುತ್ತದೆ ಮತ್ತು ಪ್ರಾಸಿಕ್ಯೂಷನ್ ಸಾಕ್ಷಿ ಮತ್ತು ತನಿಖಾ ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತದೆ ಎಂದು ಎಸ್ಐಟಿ ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ. ಇತ್ತೀಚೆಗೆ ಕುಮಾರಸ್ವಾಮಿ ಜೊತೆಗೆ ಜಟಾಪಟಿ ನಡೆಸಿದ್ದ ಎಡಿಜಿಪಿ ಚಂದ್ರಶೇಖರ್ ಎಸ್ಐಟಿ ತಂಡದಲ್ಲಿ ಮುಖ್ಯಸ್ಥರಾಗಿದ್ದಾರೆ.
The SIT of the Karnataka Lokayukta to probe the illegal mining cases has moved the court requesting to cancel the bail granted to Union Minister for Heavy Industries and Steel HD Kumaraswamy in the case related to Sri Sai Venkateshwara Minerals on the grounds of interference with the investigation and threatening the witnesses.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm