ಬ್ರೇಕಿಂಗ್ ನ್ಯೂಸ್
24-10-24 12:12 pm Bangalore Correspondent ಕರ್ನಾಟಕ
ಬೆಂಗಳೂರು, ಅ 24: ಕಟ್ಟಡವೊಂದರ ಲಿಫ್ಟ್ಗೆ ಅಳವಡಿಸಲು ತೆರೆದಿದ್ದ ಗುಂಡಿಗೆ ಬಿದ್ದು 7 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಗುವಿನ ತಾಯಿ ನೀಡಿದ ದೂರಿನ ಮೇರೆಗೆ ಕಟ್ಟಡ ಮಾಲೀಕ ಹಾಗೂ ಉಸ್ತುವಾರಿ ವಹಿಸಿಕೊಂಡಿದ್ದ ಸುನಿಲ್ ಎಂಬಾತನ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಕನ್ನಮಂಗಲ ಗ್ರಾಮ ಪಂಚಾಯತ್ ಮುಂಭಾಗದ ಮಿಲ್ಕ್ ಡೈರಿ ಕಟ್ಟಡ ಕಾಮಗಾರಿ ನಡೆಯುತ್ತಿದ್ದು, ಕಟ್ಟಡಕ್ಕೆ ಲಿಫ್ಟ್ ಅಳವಡಿಸಲು 5 ಅಡಿ ಆಳ, ಅಗಲದ ಗುಂಡಿ ತೋಡಲಾಗಿತ್ತು. ಗುಂಡಿ ಸುತ್ತಮುತ್ತಲು ಸುರಕ್ಷಿತ ಕ್ರಮ ಅನುಸರಿಸುವಲ್ಲಿ ಮಾಲೀಕರು ನಿರ್ಲಕ್ಷ್ಯ ತೋರಿದ್ದರು ಎಂಬ ಆರೋಪ ಕೇಳಿಬಂದಿದೆ.
ಬುಧವಾರ ಬೆಳಗ್ಗೆ ಬಾಲಕ ಸ್ನೇಹಿತರ ಜೊತೆ ಆಟವಾಡುವಾಗ ಆಚಾನಕ್ಕಾಗಿ ಗುಂಡಿಗೆ ಬಿದ್ದಿದ್ದ. ಐದು ಅಡಿ ಆಳದ ಗುಂಡಿಯಲ್ಲಿ ಮಳೆ ನೀರು ತುಂಬಿಕೊಂಡಿದ್ದರಿಂದ ನೀರಿನಲ್ಲಿ ಬಾಲಕ ಮುಳುಗಿದ್ದ. ಅಲ್ಲೇ ಇದ್ದ ಸ್ನೇಹಿತರು ತಕ್ಷಣವೇ ನೀಡಿದ ಮಾಹಿತಿ ಮೇರೆಗೆ ಸ್ಥಳೀಯರು, ಬಾಲಕನನ್ನ ರಕ್ಷಿಸಿ ಆಸ್ಪತ್ರೆ ಸೇರಿಸಿದ್ದರು. ಆದರೆ, ಬಾಲಕ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ
ಮಗುವಿನ ತಾಯಿ ನೀಡಿದ ದೂರಿನ ಮೇರೆಗೆ ಮಾಲೀಕ ಹಾಗೂ ಕಟ್ಟಡ ಕಾಮಗಾರಿ ವಹಿಸಿಕೊಂಡಿದ್ದ ಸುನಿಲ್ ಎಂಬುವರ ವಿರುದ್ಧ ನಿರ್ಲಕ್ಷ್ಯ ಪ್ರಕರಣ ದಾಖಲಿಸಿಕೊಂಡು ವಿಚಾರಣೆಗೆ ಬರುವಂತೆ ನೊಟೀಸ್ ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
A seven-year-old boy drowned in a water-filled lift pit of an under-construction building at Kannamangala in Bengaluru on Wednesday.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am