ಬ್ರೇಕಿಂಗ್ ನ್ಯೂಸ್
24-10-24 08:52 pm HK News Desk ಕರ್ನಾಟಕ
ಹಾವೇರಿ, ಅ.24: ಶಿಗ್ಗಾಂವಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದು ತನ್ನ ಅಫಿಡವಿಟ್ ನಲ್ಲಿ 16.17 ಕೋಟಿ ಆಸ್ತಿ ಘೋಷಣೆ ಮಾಡಿದ್ದಾರೆ.
ಭರತ್ ಬೊಮ್ಮಾಯಿ ತನ್ನ ಕೈಯಲ್ಲಿ 2.03 ಲಕ್ಷ ರೂ. ನಗದು ಹಣ ಹೊಂದಿದ್ದಾಗಿ ಹೇಳಿಕೊಂಡಿದ್ದು ವಿವಿಧ ಬ್ಯಾಂಕ್, ಹಣಕಾಸು ಸಂಸ್ಥೆಗಳಲ್ಲಿ 4.05 ಲಕ್ಷ ನಿಶ್ಚಿತ ಠೇವಣಿ, ಉಳಿತಾಯ ಖಾತೆಗಳಲ್ಲಿ 1.19 ಕೋಟಿ ಹೊಂದಿದ್ದಾರೆ.
ಸಾರ್ವಜನಿಕ ಕಂಪನಿಗಳಲ್ಲಿ 1.74 ಲಕ್ಷ , ಖಾಸಗಿ ಕಂಪನಿಗಳಲ್ಲಿ 50 ಸಾವಿರ, ಪಾಲುದಾರಿಕೆ ಕಂಪನಿಯಲ್ಲಿ 1.23 ಕೋಟಿ ರು. ಬಂಡವಾಳ ತೊಡಗಿಸಿದ್ದಾರೆ.
ಗೋಲ್ಡ್ ಚಿಟ್ ಫಂಡ್ನಲ್ಲಿ 70 ಸಾವಿರ, ಮ್ಯೂಚುವಲ್ ಫಂಡ್ನಲ್ಲಿ 10.20 ಲಕ್ಷ ತೊಡಗಿಸಿದ್ದಾರೆ. ಇದಲ್ಲದೆ, 81.61 ಲಕ್ಷ ಮೌಲ್ಯದ ಚಿನ್ನಾಭರಣ ಹೊಂದಿದ್ದಾರೆ. ಇನ್ನಿತರ ಆದಾಯ, ಬಡ್ಡಿ ಸೇರಿದಂತೆ ಒಟ್ಟು 3.79 ಕೋಟಿ ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ಭರತ್ ಬೊಮ್ಮಾಯಿ ತನ್ನ ಹೆಸರಿನಲ್ಲಿ ಯಾವುದೇ ವಾಹನ ಹೊಂದಿಲ್ಲ.
ಬೆಂಗಳೂರಿನ ಆರ್.ಟಿ.ನಗರದಲ್ಲಿ ಒಂದು ವಾಸದ ಮನೆ, ಬೆಂಗಳೂರಿನ ಸೆಂಚುರಿ ಎಥೋಸ್ ಅಪಾರ್ಟ್ಮೆಂಟ್ನಲ್ಲಿ ಪ್ಲಾಟ್ ಸೇರಿದಂತೆ 5.50 ಕೋಟಿ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಪತ್ನಿ ಇಬ್ಬನಿ ಬಳಿ 1.43 ಲಕ್ಷ ನಗದು ಹಣ, ವಿವಿಧ ಬ್ಯಾಂಕುಗಳಲ್ಲಿ ನಿಶ್ಚಿತ ಠೇವಣಿ, ಉಳಿತಾಯ ಖಾತೆಗಳಲ್ಲಿ 56.32 ಲಕ್ಷ ಹೊಂದಿದ್ದಾರೆ. ವಿವಿಧ ಕಂಪನಿಗಳಲ್ಲಿ 33 .75 ಲಕ್ಷ ಬಂಡವಾಳ ಹೂಡಿಕೆ ಮಾಡಿದ್ದಾರೆ. ಪಾಲುದಾರಿಕೆ ವ್ಯವಹಾರದಲ್ಲಿ 31.12 ಲಕ್ಷ ತೊಡಗಿಸಿದ್ದಾರೆ. ಪತ್ನಿಯ ಹೆಸರಿನಲ್ಲಿ ಮಾರುತಿ ಸ್ವಿಫ್ಟ್ ಕಾರು ಹೊಂದಿದ್ದಾರೆ. ಇವರಲ್ಲಿ 8.16 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಒಟ್ಟು 3.64 ಕೋಟಿ ಮೌಲ್ಯದ ಸ್ಥಿರಾಸ್ತಿಯಿದೆ.
ಬೆಂಗಳೂರಿನ ತಾವರೆಕೆರೆ ಹೋಬಳಿ ಅಜ್ಜನಹಳ್ಳಿ ಗ್ರಾಮದಲ್ಲಿ ಒಂದು ಸೈಟ್, ಕೆಂಗೇರಿಯಲ್ಲಿ ಕೆಎಚ್ಬಿ ನಿವೇಶನ ಇದೆ. ಸೆಂಚುರಿ ಎಥೋಸ್ ಅಪಾರ್ಟ್ಮೆಂಟ್ನಲ್ಲಿ ಪ್ಲಾಟ್ ಸೇರಿದಂತೆ 2.83 ಕೋಟಿ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಇವರ ಪುತ್ರನ ಬಳಿ 40.47 ಲಕ್ಷ ಮೌಲ್ಯದ ಚರಾಸ್ತಿಯಿದೆ. ಒಟ್ಟಾರೆ ಭರತ್ ಬೊಮ್ಮಾಯಿ 16.17 ಕೋಟಿ ರು. ಮೌಲ್ಯದ ಆಸ್ತಿ ಹೊಂದಿದ್ದಾರೆ.
Six candidates, including the former Chief Minister Basavaraj Bommai’s son Bharath Bommai, filed their nomination papers for the byelections to Shiggaon Assembly Constituency on Thursday taking the total number of nomination papers filed to 21.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm