ಬ್ರೇಕಿಂಗ್ ನ್ಯೂಸ್
24-10-24 08:52 pm HK News Desk ಕರ್ನಾಟಕ
ಹಾವೇರಿ, ಅ.24: ಶಿಗ್ಗಾಂವಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದು ತನ್ನ ಅಫಿಡವಿಟ್ ನಲ್ಲಿ 16.17 ಕೋಟಿ ಆಸ್ತಿ ಘೋಷಣೆ ಮಾಡಿದ್ದಾರೆ.
ಭರತ್ ಬೊಮ್ಮಾಯಿ ತನ್ನ ಕೈಯಲ್ಲಿ 2.03 ಲಕ್ಷ ರೂ. ನಗದು ಹಣ ಹೊಂದಿದ್ದಾಗಿ ಹೇಳಿಕೊಂಡಿದ್ದು ವಿವಿಧ ಬ್ಯಾಂಕ್, ಹಣಕಾಸು ಸಂಸ್ಥೆಗಳಲ್ಲಿ 4.05 ಲಕ್ಷ ನಿಶ್ಚಿತ ಠೇವಣಿ, ಉಳಿತಾಯ ಖಾತೆಗಳಲ್ಲಿ 1.19 ಕೋಟಿ ಹೊಂದಿದ್ದಾರೆ.
ಸಾರ್ವಜನಿಕ ಕಂಪನಿಗಳಲ್ಲಿ 1.74 ಲಕ್ಷ , ಖಾಸಗಿ ಕಂಪನಿಗಳಲ್ಲಿ 50 ಸಾವಿರ, ಪಾಲುದಾರಿಕೆ ಕಂಪನಿಯಲ್ಲಿ 1.23 ಕೋಟಿ ರು. ಬಂಡವಾಳ ತೊಡಗಿಸಿದ್ದಾರೆ.
ಗೋಲ್ಡ್ ಚಿಟ್ ಫಂಡ್ನಲ್ಲಿ 70 ಸಾವಿರ, ಮ್ಯೂಚುವಲ್ ಫಂಡ್ನಲ್ಲಿ 10.20 ಲಕ್ಷ ತೊಡಗಿಸಿದ್ದಾರೆ. ಇದಲ್ಲದೆ, 81.61 ಲಕ್ಷ ಮೌಲ್ಯದ ಚಿನ್ನಾಭರಣ ಹೊಂದಿದ್ದಾರೆ. ಇನ್ನಿತರ ಆದಾಯ, ಬಡ್ಡಿ ಸೇರಿದಂತೆ ಒಟ್ಟು 3.79 ಕೋಟಿ ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ಭರತ್ ಬೊಮ್ಮಾಯಿ ತನ್ನ ಹೆಸರಿನಲ್ಲಿ ಯಾವುದೇ ವಾಹನ ಹೊಂದಿಲ್ಲ.
ಬೆಂಗಳೂರಿನ ಆರ್.ಟಿ.ನಗರದಲ್ಲಿ ಒಂದು ವಾಸದ ಮನೆ, ಬೆಂಗಳೂರಿನ ಸೆಂಚುರಿ ಎಥೋಸ್ ಅಪಾರ್ಟ್ಮೆಂಟ್ನಲ್ಲಿ ಪ್ಲಾಟ್ ಸೇರಿದಂತೆ 5.50 ಕೋಟಿ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಪತ್ನಿ ಇಬ್ಬನಿ ಬಳಿ 1.43 ಲಕ್ಷ ನಗದು ಹಣ, ವಿವಿಧ ಬ್ಯಾಂಕುಗಳಲ್ಲಿ ನಿಶ್ಚಿತ ಠೇವಣಿ, ಉಳಿತಾಯ ಖಾತೆಗಳಲ್ಲಿ 56.32 ಲಕ್ಷ ಹೊಂದಿದ್ದಾರೆ. ವಿವಿಧ ಕಂಪನಿಗಳಲ್ಲಿ 33 .75 ಲಕ್ಷ ಬಂಡವಾಳ ಹೂಡಿಕೆ ಮಾಡಿದ್ದಾರೆ. ಪಾಲುದಾರಿಕೆ ವ್ಯವಹಾರದಲ್ಲಿ 31.12 ಲಕ್ಷ ತೊಡಗಿಸಿದ್ದಾರೆ. ಪತ್ನಿಯ ಹೆಸರಿನಲ್ಲಿ ಮಾರುತಿ ಸ್ವಿಫ್ಟ್ ಕಾರು ಹೊಂದಿದ್ದಾರೆ. ಇವರಲ್ಲಿ 8.16 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಒಟ್ಟು 3.64 ಕೋಟಿ ಮೌಲ್ಯದ ಸ್ಥಿರಾಸ್ತಿಯಿದೆ.
ಬೆಂಗಳೂರಿನ ತಾವರೆಕೆರೆ ಹೋಬಳಿ ಅಜ್ಜನಹಳ್ಳಿ ಗ್ರಾಮದಲ್ಲಿ ಒಂದು ಸೈಟ್, ಕೆಂಗೇರಿಯಲ್ಲಿ ಕೆಎಚ್ಬಿ ನಿವೇಶನ ಇದೆ. ಸೆಂಚುರಿ ಎಥೋಸ್ ಅಪಾರ್ಟ್ಮೆಂಟ್ನಲ್ಲಿ ಪ್ಲಾಟ್ ಸೇರಿದಂತೆ 2.83 ಕೋಟಿ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಇವರ ಪುತ್ರನ ಬಳಿ 40.47 ಲಕ್ಷ ಮೌಲ್ಯದ ಚರಾಸ್ತಿಯಿದೆ. ಒಟ್ಟಾರೆ ಭರತ್ ಬೊಮ್ಮಾಯಿ 16.17 ಕೋಟಿ ರು. ಮೌಲ್ಯದ ಆಸ್ತಿ ಹೊಂದಿದ್ದಾರೆ.
Six candidates, including the former Chief Minister Basavaraj Bommai’s son Bharath Bommai, filed their nomination papers for the byelections to Shiggaon Assembly Constituency on Thursday taking the total number of nomination papers filed to 21.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm