ಬ್ರೇಕಿಂಗ್ ನ್ಯೂಸ್
24-10-24 08:52 pm HK News Desk ಕರ್ನಾಟಕ
ಹಾವೇರಿ, ಅ.24: ಶಿಗ್ಗಾಂವಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದು ತನ್ನ ಅಫಿಡವಿಟ್ ನಲ್ಲಿ 16.17 ಕೋಟಿ ಆಸ್ತಿ ಘೋಷಣೆ ಮಾಡಿದ್ದಾರೆ.
ಭರತ್ ಬೊಮ್ಮಾಯಿ ತನ್ನ ಕೈಯಲ್ಲಿ 2.03 ಲಕ್ಷ ರೂ. ನಗದು ಹಣ ಹೊಂದಿದ್ದಾಗಿ ಹೇಳಿಕೊಂಡಿದ್ದು ವಿವಿಧ ಬ್ಯಾಂಕ್, ಹಣಕಾಸು ಸಂಸ್ಥೆಗಳಲ್ಲಿ 4.05 ಲಕ್ಷ ನಿಶ್ಚಿತ ಠೇವಣಿ, ಉಳಿತಾಯ ಖಾತೆಗಳಲ್ಲಿ 1.19 ಕೋಟಿ ಹೊಂದಿದ್ದಾರೆ.
ಸಾರ್ವಜನಿಕ ಕಂಪನಿಗಳಲ್ಲಿ 1.74 ಲಕ್ಷ , ಖಾಸಗಿ ಕಂಪನಿಗಳಲ್ಲಿ 50 ಸಾವಿರ, ಪಾಲುದಾರಿಕೆ ಕಂಪನಿಯಲ್ಲಿ 1.23 ಕೋಟಿ ರು. ಬಂಡವಾಳ ತೊಡಗಿಸಿದ್ದಾರೆ.
ಗೋಲ್ಡ್ ಚಿಟ್ ಫಂಡ್ನಲ್ಲಿ 70 ಸಾವಿರ, ಮ್ಯೂಚುವಲ್ ಫಂಡ್ನಲ್ಲಿ 10.20 ಲಕ್ಷ ತೊಡಗಿಸಿದ್ದಾರೆ. ಇದಲ್ಲದೆ, 81.61 ಲಕ್ಷ ಮೌಲ್ಯದ ಚಿನ್ನಾಭರಣ ಹೊಂದಿದ್ದಾರೆ. ಇನ್ನಿತರ ಆದಾಯ, ಬಡ್ಡಿ ಸೇರಿದಂತೆ ಒಟ್ಟು 3.79 ಕೋಟಿ ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ಭರತ್ ಬೊಮ್ಮಾಯಿ ತನ್ನ ಹೆಸರಿನಲ್ಲಿ ಯಾವುದೇ ವಾಹನ ಹೊಂದಿಲ್ಲ.
ಬೆಂಗಳೂರಿನ ಆರ್.ಟಿ.ನಗರದಲ್ಲಿ ಒಂದು ವಾಸದ ಮನೆ, ಬೆಂಗಳೂರಿನ ಸೆಂಚುರಿ ಎಥೋಸ್ ಅಪಾರ್ಟ್ಮೆಂಟ್ನಲ್ಲಿ ಪ್ಲಾಟ್ ಸೇರಿದಂತೆ 5.50 ಕೋಟಿ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಪತ್ನಿ ಇಬ್ಬನಿ ಬಳಿ 1.43 ಲಕ್ಷ ನಗದು ಹಣ, ವಿವಿಧ ಬ್ಯಾಂಕುಗಳಲ್ಲಿ ನಿಶ್ಚಿತ ಠೇವಣಿ, ಉಳಿತಾಯ ಖಾತೆಗಳಲ್ಲಿ 56.32 ಲಕ್ಷ ಹೊಂದಿದ್ದಾರೆ. ವಿವಿಧ ಕಂಪನಿಗಳಲ್ಲಿ 33 .75 ಲಕ್ಷ ಬಂಡವಾಳ ಹೂಡಿಕೆ ಮಾಡಿದ್ದಾರೆ. ಪಾಲುದಾರಿಕೆ ವ್ಯವಹಾರದಲ್ಲಿ 31.12 ಲಕ್ಷ ತೊಡಗಿಸಿದ್ದಾರೆ. ಪತ್ನಿಯ ಹೆಸರಿನಲ್ಲಿ ಮಾರುತಿ ಸ್ವಿಫ್ಟ್ ಕಾರು ಹೊಂದಿದ್ದಾರೆ. ಇವರಲ್ಲಿ 8.16 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಒಟ್ಟು 3.64 ಕೋಟಿ ಮೌಲ್ಯದ ಸ್ಥಿರಾಸ್ತಿಯಿದೆ.
ಬೆಂಗಳೂರಿನ ತಾವರೆಕೆರೆ ಹೋಬಳಿ ಅಜ್ಜನಹಳ್ಳಿ ಗ್ರಾಮದಲ್ಲಿ ಒಂದು ಸೈಟ್, ಕೆಂಗೇರಿಯಲ್ಲಿ ಕೆಎಚ್ಬಿ ನಿವೇಶನ ಇದೆ. ಸೆಂಚುರಿ ಎಥೋಸ್ ಅಪಾರ್ಟ್ಮೆಂಟ್ನಲ್ಲಿ ಪ್ಲಾಟ್ ಸೇರಿದಂತೆ 2.83 ಕೋಟಿ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಇವರ ಪುತ್ರನ ಬಳಿ 40.47 ಲಕ್ಷ ಮೌಲ್ಯದ ಚರಾಸ್ತಿಯಿದೆ. ಒಟ್ಟಾರೆ ಭರತ್ ಬೊಮ್ಮಾಯಿ 16.17 ಕೋಟಿ ರು. ಮೌಲ್ಯದ ಆಸ್ತಿ ಹೊಂದಿದ್ದಾರೆ.
Six candidates, including the former Chief Minister Basavaraj Bommai’s son Bharath Bommai, filed their nomination papers for the byelections to Shiggaon Assembly Constituency on Thursday taking the total number of nomination papers filed to 21.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm