ಬ್ರೇಕಿಂಗ್ ನ್ಯೂಸ್
24-10-24 09:13 pm Bangalore Correspondent ಕರ್ನಾಟಕ
ಬೆಂಗಳೂರು, ಅ.24: ಚನ್ನಪಟ್ಟಣ ಉಪ ಚುನಾವಣೆಯ ರಾಜಕೀಯ ಕಣ ರಂಗೇರಿದೆ. ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿರುವ ಐದು ಬಾರಿಯ ಶಾಸಕ ಸಿಪಿ ಯೋಗೀಶ್ವರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಅದ್ದೂರಿ ಮೆರವಣಿಗೆ ನಡೆಸಿ ಯೋಗೀಶ್ವರ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಇದೇ ವೇಳೆ, ನಾಮಪತ್ರದಲ್ಲಿ ಸಿ.ಪಿ.ಯೋಗೇಶ್ವರ್ ತನ್ನ ಒಟ್ಟು ಆಸ್ತಿ ಮೌಲ್ಯ 35.09 ಕೋಟಿ ಎಂಬುದಾಗಿ ಘೋಷಣೆ ಮಾಡಿದ್ದಾರೆ. ಒಟ್ಟು 7.15 ಕೋಟಿ ಮೌಲ್ಯದ ಚರಾಸ್ತಿ ಇದ್ದರೆ, 27.94 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಯನ್ನು ಯೋಗೇಶ್ವರ್ ಹೊಂದಿದ್ದಾರೆ.
ಪತ್ನಿ ಶೀಲಾ ಮತ್ತು ಅವರ ಒಟ್ಟು ಚರ ಮತ್ತು ಸ್ಥಿರಾಸ್ತಿ 32.46 ಕೋಟಿ ರೂ. ಆಗಿದೆ. ಯೋಗೀಶ್ವರ್ ಹೆಸರಲ್ಲಿ 250 ಗ್ರಾಂ ಚಿನ್ನ ಇದ್ದರೆ, ತಲಾ 70 ಲಕ್ಷ ರೂ. ಮೌಲ್ಯದ ಒಂದು ಬೆಂಜ್ ಮತ್ತು ಬಿಎಂಡಬ್ಲೂ ಕಾರು ಇದೆ. ತಾವು ಸಾರ್ವಜನಿಕರಿಂದ ಉಡುಗೊರೆಯಾಗಿ ಪಡೆದ 1 ಕೆಜಿ ಚಿನ್ನ ಮತ್ತು 50 ಕೆಜಿ ಬೆಳ್ಳಿಯನ್ನು ಪತ್ನಿ ಶೀಲಾ ಅವರಿಗೆ ಉಡುಗೊರೆಯಾಗಿ ನೀಡಿದ್ದಾರೆ. ಉಳಿದಂತೆ ಪತ್ನಿ ಹೆಸರಲ್ಲಿ 1.5 ಕೆಜಿ ಚಿನ್ನ, 20 ಕೆಜಿ ಬೆಳ್ಳಿ ಇದೆ.
ಯೋಗೀಶ್ವರ್ ಅವರ ಬಳಿ 54.2 ಎಕರೆ ಕೃಷಿ ಭೂಮಿ, ಬೆಂಗಳೂರಿನಲ್ಲಿ ಮನೆ ಸೇರಿದಂತೆ ಒಟ್ಟು 27.94 ಕೋಟಿ ರೂ. ಸ್ಥಿರಾಸ್ತಿ ಇದೆ. ಪತ್ನಿ ಶೀಲಾ ಅವರ ಬಳಿ 14.19 ಎಕರೆ ಕೃಷಿ ಭೂಮಿ ಸೇರಿದಂತೆ 25.35 ಕೋಟಿ ರೂ. ಮೌಲ್ಯದ ಸ್ತಿರಾಸ್ತಿ ಇದೆ. ಒಟ್ಟಾರೆ ಯೋಗೀಶ್ವರ್ 35.09 ಕೋಟಿ ರೂ. ಚರ ಮತ್ತು ಸ್ಥಿರಾಸ್ತಿ ಮಾಲೀಕರಾದರೆ, ಶೀಲಾ 32.46 ಕೋಟಿ ರೂ. ಚರ ಮತ್ತು ಸ್ಥಿರಾಸ್ತಿ ಒಡತಿ. ಯೋಗೇಶ್ವರ್ ಅವರಿಗೆ 25.46 ಕೋಟಿ ರೂ ಸಾಲವಿದ್ದರೆ, ಶೀಲಾ 3.41 ಕೋಟಿ ರೂ ಸಾಲ ಹೊಂದಿದ್ದಾರೆ. ಇನ್ನು ಯೋಗೇಶ್ವರ್ ಅವರ ವಿರುದ್ಧ 10 ಪ್ರಕರಣಗಳು ಬಾಕಿ ಇವೆ ಎಂದು ಅಫಿಡವಿಟ್ ನಲ್ಲಿ ತಿಳಿಸಿದ್ದಾರೆ.
Former Minister C P Yogeshwar, who joined the Congress after quitting BJP, on Thursday filed his nomination as the grand old party's candidate for the November 13 Assembly by-poll from Channapatna, amid a show of strength. He was accompanied by Chief Minister Siddaramaiah, state Congress President and Deputy Chief Minister D K Shivakumar and district in-charge Minister Ramalinga Reddy, among other party leaders.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
10-04-26 11:05 pm
HK News Staffer
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
10-04-26 10:12 pm
Mangalore Correspondent
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
Besant Evening College, BPL Cricket: ಬೆಸೆಂಟ್...
07-04-26 01:22 pm
10-04-26 11:06 pm
HK News Staffer
Red Corner Notice, Mangalore crime: ದೇರಳಕಟ್ಟೆ...
09-04-26 09:16 pm
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm