ಬ್ರೇಕಿಂಗ್ ನ್ಯೂಸ್
24-10-24 09:16 pm HK News Desk ಕರ್ನಾಟಕ
ಶಿವಮೊಗ್ಗ, ಅ 24: ನಗರದ ಸಹ್ಯಾದ್ರಿ ಕಾಲೇಜು ಮುಂಭಾಗ ಗುರುವಾರ ಸಂಚಾರ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ನಿಲ್ಲಿಸುವಂತೆ ಸೂಚಿಸಿದ ಟ್ರಾಫಿಕ್ ಪೊಲೀಸ್ ಮೇಲೆಯೇ ಕಾರು ಡ್ರೈವರ್ ಕಾರು ಹಾಯಿಸಲು ಯತ್ನಿಸಿದ್ದಾನೆ. ಬಾನೆಟ್ ಮೇಲೆ ಬಿದ್ದ ಅವರನ್ನು 100 ಮೀಟರ್ನಷ್ಟು ದೂರ ಎಳೆದೊಯ್ದಿದ್ದಾನೆ ಎಂದು ತಿಳಿದುಬಂದಿದೆ.
ಶಿವಮೊಗ್ಗದ ಪೂರ್ವ ಸಂಚಾರ ವಿಭಾಗದ ಕಾನ್ಸ್ಟೆಬಲ್ ಪ್ರಭುರಾಜ್ ಸಹ್ಯಾದ್ರಿ ಕಾಲೇಜು ಬಳಿ ಕರ್ತವ್ಯ ನಿರತರಾಗಿದ್ದಾರೆ. ಈ ವೇಳೆ ಎಂಆರ್ಎಸ್ ಸರ್ಕಲ್ ಕಡೆಯಿಂದ ಹೊಳೆ ಬಸ್ ನಿಲ್ದಾಣದತ್ತ ಹೊರಟಿದ್ದ ಕಿಯಾ ಸಾನೆಟ್ ಕಾರಿನ ಚಾಲಕ ಸಂಚಾರ ನಿಯಮ ಉಲ್ಲಂಘನೆ ಮಾಡಿರುವುದು ಕಂಡು ಬಂದಿದೆ. ಆಗ ಕಾರಿಗೆ ಅಡ್ಡ ನಿಂತ ಅವರು, ಪಕ್ಕಕ್ಕೆ ನಿಲ್ಲಿಸುವಂತೆ ಚಾಲಕನಿಗೆ ಹೇಳಿದ್ದಾರೆ.

ಕಾರು ನಿಲ್ಲಿಸದೇ ಪ್ರಭುರಾಜ್ ಅವರೊಂದಿಗೆ ವಾದ ಮಾಡುತ್ತಲೇ ಮುಂದೆ ಚಲಾಯಿಸುತ್ತಾ ಅವರನ್ನು ದಬ್ಬಿಕೊಂಡು ಹೋಗಿದ್ದಾನೆ. ಹಿಂದಕ್ಕೆ ಸರಿಯುತ್ತಾ ಹೋದ ಕಾನ್ಸ್ಟೆಬಲ್, ಕಾರಿನ ವೇಗ ಹೆಚ್ಚುತ್ತಲೇ ಅದರ ಬಾನೆಟ್ ಮೇಲೆ ಬಿದ್ದಿದ್ದಾರೆ. ಆಗಲೂ ಕಾರು ನಿಲ್ಲಿಸದೇ ಮುಂದೆ ಸಾಗಿದ್ದಾನೆ. ಸ್ವಲ್ಪ ದೂರ ತೆರಳಿದ ನಂತರ ಕಾರು ನಿಲ್ಲಿಸಿದ್ದಾನೆ. ಕಾನ್ಸ್ಟೆಬಲ್ ಕೆಳಗೆ ಇಳಿದು ಪಕ್ಕಕ್ಕೆ ಬರುತ್ತಿದ್ದಂತೆಯೇ ವೇಗವಾಗಿ ಕಾರು ಚಲಾಯಿಸಿಕೊಂಡು ಹೋಗಿದ್ದಾನೆ ಎಂದು ಗೊತ್ತಾಗಿದೆ.
ಘಟನೆಯ ದೃಶ್ಯವನ್ನು ಸಾರ್ವಜನಿಕರೊಬ್ಬರು ವಿಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.
‘ಚಾಲಕ ಕಾರು ನಿಲ್ಲಿಸದೇ ಸ್ಥಳದಿಂದ ಹೊರಟು ಹೋಗಿದ್ದಾನೆ. ಅಲ್ಲಿನ ಸಿಸಿ ಟಿವಿ ಕ್ಯಾಮೆರಾದ ದೃಶ್ಯ ಪರಿಶೀಲನೆ ನಡೆಸಿದ್ದೇವೆ. ಕಾರು ಚಾಲಕ ಭದ್ರಾವತಿಯ ಹೊಸಮನೆ ಬಡಾವಣೆ ನಿವಾಸಿ, ಕೇಬಲ್ ಆಪರೇಟರ್ ಮಿಥುನ್ ಜಗದಾಳೆ ಎಂದು ಗೊತ್ತಾಗಿದೆ. ಆರೋಪಿ ವಿರುದ್ಧ ಕೋಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಬಂಧನಕ್ಕೆ ಬಲೆ ಬೀಸಿದ್ದೇವೆ’ ಎಂದು ಎಸ್ಪಿ ಜಿ.ಕೆ.ಮಿಥುನ್ಕುಮಾರ್ ಪ್ರತಿಕ್ರಿಯಿಸಿದರು.
Shivamogga Traffic Officer Dragged by Car: In a troubling incident near Sahyadri College, #Shivamogga, a traffic officer was dragged for over 100 meters on the bonnet of a car after attempting to stop the vehicle for a routine check. #traffic #DGkarnataka #karnataka pic.twitter.com/58JYhBNDAu
— Bharathirajan (@bharathircc) October 24, 2024
In a shocking incident near Sahyadri College in Karnataka's Shivamogga, a driver attempted to run over a police officer during a routine vehicle check. The incident occurred when traffic police from the East Station signalled a speeding car to stop.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm