ಬ್ರೇಕಿಂಗ್ ನ್ಯೂಸ್
24-10-24 11:07 pm Bangalore Correspondent ಕರ್ನಾಟಕ
ಬೆಂಗಳೂರು, ಅ.24: ರಾಜ್ಯದಲ್ಲಿ ಉಪ ಚುನಾವಣೆಗೆ ಬೆರಳೆಣಿಕೆ ದಿನಗಳು ಬಾಕಿ ಇರುವಾಗಲೇ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬಿಗ್ ಶಾಕ್ ಸಿಕ್ಕಿದೆ. ಕಾರವಾರದ ಬೇಲೆಕೇರಿ ಬಂದರಿನಲ್ಲಿ ಅದಿರು ನಾಪತ್ತೆ ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.
ಸತೀಶ್ ಸೈಲ್ ಮತ್ತು ಇತರ ಏಳು ಮಂದಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ದೋಷಿ ಎಂದು ಆದೇಶಿಸಿದ್ದು ಅ.25ರಂದು ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ. ಕಾರವಾರ ಶಾಸಕ ಸತೀಶ್ ಸೈಲ್ ಮತ್ತು ಅಂದಿನ ಬಂದರು ಅಧಿಕಾರಿ ಮಹೇಶ್ ಬಿಳಿಯ ಸೇರಿ ಇತರರು ದೋಷಿ ಎಂದು ನ್ಯಾ.ಸಂತೋಷ್ ಗಜಾನನ ಭಟ್ ತೀರ್ಪು ನೀಡಿದ್ದಾರೆ. ಅಪರಾಧಿಗಳನ್ನು ಕೂಡಲೇ ವಶಕ್ಕೆ ಪಡೆಯುವಂತೆ ಕೋರ್ಟ್ ಸೂಚಿಸಿದ್ದು ಇದರ ಬೆನ್ನಲ್ಲೇ ಏಳು ಮಂದಿಯನ್ನೂ ತನಿಖಾಧಿಕಾರಿಗಳು ಬಂಧಿಸಿದ್ದಾರೆ. ಸತೀಶ್ ಸೈಲ್, ಬಂದರು ಅಧಿಕಾರಿ ಮಹೇಶ್ ಬಿಳಿಯ, ಲಾಲ್ ಮಹಲ್ ಕಂಪನಿಯ ಮಾಲೀಕ ಪ್ರೇಮ್ ಚಂದ್ ಗರ್ಗ್, ಪಿಜಿಎಸ್ ಕಂಪನಿಯ ಶ್ರೀಲಕ್ಷ್ಮೀ ವೆಂಕಟೇಶ್ವರ ಟ್ರೇಡರ್ಸ್ ಮಾಲೀಕ ಖಾರದಪುಡಿ ಮಹೇಶ್, ಸ್ವಸ್ತಿಕ್ ಕಂಪನಿ ಮಾಲೀಕ ಕೆ.ವಿ.ನಾಗರಾಜ್, ಗೋವಿಂದರಾಜು, ಆಶಾಪುರ ಕಂಪನಿ ಮಾಲೀಕ ಚೇತನ್ ಇವರನ್ನು ಬಂಧಿಸಲಾಗಿದೆ.
ಕಾರವಾರದ ಬೇಲೆಕೇರಿ ಬಂದರಿನಲ್ಲಿ 11,312 ಮೆಟ್ರಿಕ್ ಟನ್ ಅದಿರನ್ನು ವಿದೇಶಕ್ಕೆ ಸಾಗಿಸುವ ಸಲುವಾಗಿ ಸಂಗ್ರಹಿಸಲಾಗಿತ್ತು. ಇದನ್ನು ಸಿಬಿಐ ಅಧಿಕಾರಿಗಳು ಜಪ್ತಿ ಮಾಡಿದ್ದರು. ಅನುಮತಿ ಇಲ್ಲದೇ ಮಲ್ಲಿಕಾರ್ಜುನ ಶಿಪ್ಪಿಂಗ್ ಕಾರ್ಪೊರೇಷನ್ ಮಾಲೀಕರಾಗಿದ್ದ ಸತೀಶ್ ಸೈಲ್ ಈ ಅದಿರನ್ನು ವಿದೇಶಕ್ಕೆ ಸಾಗಿಸುತ್ತಿದ್ದರು. ಈ ಸಂಬಂಧ ಪ್ರತ್ಯೇಕ 6 ಪ್ರಕರಣಗಳು ದಾಖಲಾಗಿದ್ದವು. ಲೋಕಾಯುಕ್ತ ಸಂಸ್ಥೆ ಮತ್ತು ಸಿಬಿಐ ತನಿಖೆ ನಡೆಸಿ ಕೋರ್ಟ್ಗೆ ಆರೋಪಪಟ್ಟಿ ಸಲ್ಲಿಸಿತ್ತು.
In the first conviction in cases related to illegal mining in Karnataka, a special court in Bengaluru on Thursday convicted Karwar MLA, Satish Krishna Sail, and six individuals, including a retired Deputy Conservator of Ports, and seven private companies on charges of illegally exporting seized iron ore worth several crores from Belekeri port in the State during 2009-10.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm