ಬ್ರೇಕಿಂಗ್ ನ್ಯೂಸ್
24-10-24 11:07 pm Bangalore Correspondent ಕರ್ನಾಟಕ
ಬೆಂಗಳೂರು, ಅ.24: ರಾಜ್ಯದಲ್ಲಿ ಉಪ ಚುನಾವಣೆಗೆ ಬೆರಳೆಣಿಕೆ ದಿನಗಳು ಬಾಕಿ ಇರುವಾಗಲೇ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬಿಗ್ ಶಾಕ್ ಸಿಕ್ಕಿದೆ. ಕಾರವಾರದ ಬೇಲೆಕೇರಿ ಬಂದರಿನಲ್ಲಿ ಅದಿರು ನಾಪತ್ತೆ ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.
ಸತೀಶ್ ಸೈಲ್ ಮತ್ತು ಇತರ ಏಳು ಮಂದಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ದೋಷಿ ಎಂದು ಆದೇಶಿಸಿದ್ದು ಅ.25ರಂದು ಶಿಕ್ಷೆ ಪ್ರಮಾಣ ಪ್ರಕಟಿಸಲಿದೆ. ಕಾರವಾರ ಶಾಸಕ ಸತೀಶ್ ಸೈಲ್ ಮತ್ತು ಅಂದಿನ ಬಂದರು ಅಧಿಕಾರಿ ಮಹೇಶ್ ಬಿಳಿಯ ಸೇರಿ ಇತರರು ದೋಷಿ ಎಂದು ನ್ಯಾ.ಸಂತೋಷ್ ಗಜಾನನ ಭಟ್ ತೀರ್ಪು ನೀಡಿದ್ದಾರೆ. ಅಪರಾಧಿಗಳನ್ನು ಕೂಡಲೇ ವಶಕ್ಕೆ ಪಡೆಯುವಂತೆ ಕೋರ್ಟ್ ಸೂಚಿಸಿದ್ದು ಇದರ ಬೆನ್ನಲ್ಲೇ ಏಳು ಮಂದಿಯನ್ನೂ ತನಿಖಾಧಿಕಾರಿಗಳು ಬಂಧಿಸಿದ್ದಾರೆ. ಸತೀಶ್ ಸೈಲ್, ಬಂದರು ಅಧಿಕಾರಿ ಮಹೇಶ್ ಬಿಳಿಯ, ಲಾಲ್ ಮಹಲ್ ಕಂಪನಿಯ ಮಾಲೀಕ ಪ್ರೇಮ್ ಚಂದ್ ಗರ್ಗ್, ಪಿಜಿಎಸ್ ಕಂಪನಿಯ ಶ್ರೀಲಕ್ಷ್ಮೀ ವೆಂಕಟೇಶ್ವರ ಟ್ರೇಡರ್ಸ್ ಮಾಲೀಕ ಖಾರದಪುಡಿ ಮಹೇಶ್, ಸ್ವಸ್ತಿಕ್ ಕಂಪನಿ ಮಾಲೀಕ ಕೆ.ವಿ.ನಾಗರಾಜ್, ಗೋವಿಂದರಾಜು, ಆಶಾಪುರ ಕಂಪನಿ ಮಾಲೀಕ ಚೇತನ್ ಇವರನ್ನು ಬಂಧಿಸಲಾಗಿದೆ.
ಕಾರವಾರದ ಬೇಲೆಕೇರಿ ಬಂದರಿನಲ್ಲಿ 11,312 ಮೆಟ್ರಿಕ್ ಟನ್ ಅದಿರನ್ನು ವಿದೇಶಕ್ಕೆ ಸಾಗಿಸುವ ಸಲುವಾಗಿ ಸಂಗ್ರಹಿಸಲಾಗಿತ್ತು. ಇದನ್ನು ಸಿಬಿಐ ಅಧಿಕಾರಿಗಳು ಜಪ್ತಿ ಮಾಡಿದ್ದರು. ಅನುಮತಿ ಇಲ್ಲದೇ ಮಲ್ಲಿಕಾರ್ಜುನ ಶಿಪ್ಪಿಂಗ್ ಕಾರ್ಪೊರೇಷನ್ ಮಾಲೀಕರಾಗಿದ್ದ ಸತೀಶ್ ಸೈಲ್ ಈ ಅದಿರನ್ನು ವಿದೇಶಕ್ಕೆ ಸಾಗಿಸುತ್ತಿದ್ದರು. ಈ ಸಂಬಂಧ ಪ್ರತ್ಯೇಕ 6 ಪ್ರಕರಣಗಳು ದಾಖಲಾಗಿದ್ದವು. ಲೋಕಾಯುಕ್ತ ಸಂಸ್ಥೆ ಮತ್ತು ಸಿಬಿಐ ತನಿಖೆ ನಡೆಸಿ ಕೋರ್ಟ್ಗೆ ಆರೋಪಪಟ್ಟಿ ಸಲ್ಲಿಸಿತ್ತು.
In the first conviction in cases related to illegal mining in Karnataka, a special court in Bengaluru on Thursday convicted Karwar MLA, Satish Krishna Sail, and six individuals, including a retired Deputy Conservator of Ports, and seven private companies on charges of illegally exporting seized iron ore worth several crores from Belekeri port in the State during 2009-10.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm