ಬ್ರೇಕಿಂಗ್ ನ್ಯೂಸ್
25-10-24 07:23 pm Bangalore Correspondent ಕರ್ನಾಟಕ
ಬೆಂಗಳೂರು, ಅ.25 : ಹಳೇ ಪ್ರಕರಣದಲ್ಲಿ ಅರೆಸ್ಟ್ ವಾರೆಂಟ್ ಸಂಬಂಧಿಸಿ ಪೊಲೀಸರು ಲೇಖಕಿ ಲಕ್ಷ್ಮೀ ಜಿ. ಪ್ರಸಾದ್ ಮತ್ತು ಅವರ ಪುತ್ರನನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದು ಈ ವೇಳೆ ಪೊಲೀಸರನ್ನೇ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಜ್ಞಾನಭಾರತಿ ಠಾಣೆ ಮಹಿಳಾ ಪಿಎಸ್ಐ ಸುರೇಖಾ ನೀಡಿದ ದೂರಿನ ಮೇರೆಗೆ ಲೇಖಕಿ ಲಕ್ಷ್ಮೀ ಜಿ. ಪ್ರಸಾದ್ ಮತ್ತು ಆಕೆಯ ಪುತ್ರ ಆರವಿಂದ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹಳೇ ಪ್ರಕರಣದ ವಾರೆಂಟ್ ಸಂಬಂಧಿಸಿ ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಜಾಮೀನು ಮಂಜೂರು ಮಾಡಿತ್ತು. ಇದೀಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದು ಇಬ್ಬರಿಗೂ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮಾಡುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪ್ರಕರಣದ ಆರೋಪಿ ಲೇಖಕಿ ಲಕ್ಷ್ಮೀ ಜಿ. ಪ್ರಸಾದ್ ವಿರುದ್ಧ ಬೆಂಗಳೂರಿನ 6ನೇ ಎಸಿಎಂಎಂ ನ್ಯಾಯಾಲಯ ಬಂಧನ ವಾರೆಂಟ್ ಜಾರಿಗೊಳಿಸಿತ್ತು. ಅದರಂತೆ ಪಿಎಸ್ಐ ಸುರೇಖಾ ಅವರು ಅ.23ರಂದು ಆರೋಪಿ ಲಕ್ಷ್ಮೀ ಜಿ. ಪ್ರಸಾದ್ ಬೆಂಗಳೂರು ವಿಶ್ವವಿದ್ಯಾಲಯದ ಕ್ವಾಟ್ರರ್ಸ್ ಬಳಿ ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದಾರೆ. ಆರೋಪಿಯನ್ನು ವೈದ್ಯಕೀಯ ಪರೀಕ್ಷೆ ಮಾಡಿಸಿ ನ್ಯಾಯಾಧೀಶರ ಎದುರು ಹಾಜರುಪಡಿಸಲು ಸಿದ್ಧತೆ ಮಾಡಿಕೊಳ್ಳುವಾಗ, ಆಕೆ ಏಕಾಏಕಿ 'ನನ್ನನ್ನು ಏಕೆ ಬಂಧಿಸುತ್ತೀರಿ' ಎಂದು ಅವಾಚ್ಯ ಶಬ್ದಗಳಿಂದ ಪೊಲೀಸರನ್ನು ನಿಂದಿಸಿ ತಳ್ಳಾಡಿ ಕೈಗಳಿಂದ ಹಲ್ಲೆಗೈದು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ.
ಬಳಿಕ ಆಕೆ ತನ್ನ ಮಗ ಅರವಿಂದ್ ಗೆ ಕರೆ ಮಾಡಿ ಠಾಣೆಗೆ ಕರೆಸಿಕೊಂಡಿದ್ದು ಇಬ್ಬರೂ ಸೇರಿ ಪೊಲೀಸರನ್ನು ನಿಂದಿಸಿದ್ದಾರೆ. ನ್ಯಾಯಾಲಯದ ಆದೇಶ ತೋರಿಸಿದರೂ ಕೇಳದ ಆತ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ತಾನು ಹೈಕೋರ್ಟ್ ವಕೀಲ ಎಂದು ಅರವಿಂದ್ ಕೂಗಾಡಿದ್ದು ಪೊಲೀಸರ ವಶದಲ್ಲಿದ್ದ ಲಕ್ಷ್ಮೀ ಜಿ.ಪ್ರಸಾದ್ ಅವರನ್ನು ಕರೆದೊಯ್ಯಲು ಪ್ರಯತ್ನಿಸಿದ್ದಾರೆ. ಮಧ್ಯ ಪ್ರವೇಶಿಸಿದ ಇನ್ಸ್ಪೆಕ್ಟರ್ ರವಿ ಅವರಿಗೂ ಆರೋಪಿಗಳು ಕೈಗಳಿಂದ ಹಲ್ಲೆ ಮಾಡಿ ಪರಚಿ ಗಾಯಗೊಳಿಸಿದ್ದಾರೆ. ಠಾಣಾ ಸಿಬ್ಬಂದಿಗೂ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
Writer Lakshmi G Prasad arrested over assult on police in Bangalore. Police had reached her house with warrant after which she assulted them and later has been arrested.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm