ಬ್ರೇಕಿಂಗ್ ನ್ಯೂಸ್
25-10-24 07:23 pm Bangalore Correspondent ಕರ್ನಾಟಕ
ಬೆಂಗಳೂರು, ಅ.25 : ಹಳೇ ಪ್ರಕರಣದಲ್ಲಿ ಅರೆಸ್ಟ್ ವಾರೆಂಟ್ ಸಂಬಂಧಿಸಿ ಪೊಲೀಸರು ಲೇಖಕಿ ಲಕ್ಷ್ಮೀ ಜಿ. ಪ್ರಸಾದ್ ಮತ್ತು ಅವರ ಪುತ್ರನನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದು ಈ ವೇಳೆ ಪೊಲೀಸರನ್ನೇ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಜ್ಞಾನಭಾರತಿ ಠಾಣೆ ಮಹಿಳಾ ಪಿಎಸ್ಐ ಸುರೇಖಾ ನೀಡಿದ ದೂರಿನ ಮೇರೆಗೆ ಲೇಖಕಿ ಲಕ್ಷ್ಮೀ ಜಿ. ಪ್ರಸಾದ್ ಮತ್ತು ಆಕೆಯ ಪುತ್ರ ಆರವಿಂದ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹಳೇ ಪ್ರಕರಣದ ವಾರೆಂಟ್ ಸಂಬಂಧಿಸಿ ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಜಾಮೀನು ಮಂಜೂರು ಮಾಡಿತ್ತು. ಇದೀಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದು ಇಬ್ಬರಿಗೂ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮಾಡುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪ್ರಕರಣದ ಆರೋಪಿ ಲೇಖಕಿ ಲಕ್ಷ್ಮೀ ಜಿ. ಪ್ರಸಾದ್ ವಿರುದ್ಧ ಬೆಂಗಳೂರಿನ 6ನೇ ಎಸಿಎಂಎಂ ನ್ಯಾಯಾಲಯ ಬಂಧನ ವಾರೆಂಟ್ ಜಾರಿಗೊಳಿಸಿತ್ತು. ಅದರಂತೆ ಪಿಎಸ್ಐ ಸುರೇಖಾ ಅವರು ಅ.23ರಂದು ಆರೋಪಿ ಲಕ್ಷ್ಮೀ ಜಿ. ಪ್ರಸಾದ್ ಬೆಂಗಳೂರು ವಿಶ್ವವಿದ್ಯಾಲಯದ ಕ್ವಾಟ್ರರ್ಸ್ ಬಳಿ ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದಾರೆ. ಆರೋಪಿಯನ್ನು ವೈದ್ಯಕೀಯ ಪರೀಕ್ಷೆ ಮಾಡಿಸಿ ನ್ಯಾಯಾಧೀಶರ ಎದುರು ಹಾಜರುಪಡಿಸಲು ಸಿದ್ಧತೆ ಮಾಡಿಕೊಳ್ಳುವಾಗ, ಆಕೆ ಏಕಾಏಕಿ 'ನನ್ನನ್ನು ಏಕೆ ಬಂಧಿಸುತ್ತೀರಿ' ಎಂದು ಅವಾಚ್ಯ ಶಬ್ದಗಳಿಂದ ಪೊಲೀಸರನ್ನು ನಿಂದಿಸಿ ತಳ್ಳಾಡಿ ಕೈಗಳಿಂದ ಹಲ್ಲೆಗೈದು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ.
ಬಳಿಕ ಆಕೆ ತನ್ನ ಮಗ ಅರವಿಂದ್ ಗೆ ಕರೆ ಮಾಡಿ ಠಾಣೆಗೆ ಕರೆಸಿಕೊಂಡಿದ್ದು ಇಬ್ಬರೂ ಸೇರಿ ಪೊಲೀಸರನ್ನು ನಿಂದಿಸಿದ್ದಾರೆ. ನ್ಯಾಯಾಲಯದ ಆದೇಶ ತೋರಿಸಿದರೂ ಕೇಳದ ಆತ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ. ತಾನು ಹೈಕೋರ್ಟ್ ವಕೀಲ ಎಂದು ಅರವಿಂದ್ ಕೂಗಾಡಿದ್ದು ಪೊಲೀಸರ ವಶದಲ್ಲಿದ್ದ ಲಕ್ಷ್ಮೀ ಜಿ.ಪ್ರಸಾದ್ ಅವರನ್ನು ಕರೆದೊಯ್ಯಲು ಪ್ರಯತ್ನಿಸಿದ್ದಾರೆ. ಮಧ್ಯ ಪ್ರವೇಶಿಸಿದ ಇನ್ಸ್ಪೆಕ್ಟರ್ ರವಿ ಅವರಿಗೂ ಆರೋಪಿಗಳು ಕೈಗಳಿಂದ ಹಲ್ಲೆ ಮಾಡಿ ಪರಚಿ ಗಾಯಗೊಳಿಸಿದ್ದಾರೆ. ಠಾಣಾ ಸಿಬ್ಬಂದಿಗೂ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
Writer Lakshmi G Prasad arrested over assult on police in Bangalore. Police had reached her house with warrant after which she assulted them and later has been arrested.
18-03-26 11:00 pm
supritha Jain
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
ಯುಗಾದಿ ಹಬ್ಬಕ್ಕೆ ಬಸ್ ದರ ಏರಿಕೆ ; ಜೀವಂತ ವ್ಯಕ್ತಿಯ...
18-03-26 03:41 pm
18-03-26 07:11 pm
HK News Staffer
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
18-03-26 10:42 pm
HK News Staffer
ಬೋಳೂರಿನಲ್ಲಿ ದೈವನರ್ತನ ಮಾಡಿದ್ದು ಕ್ರಿಸ್ತಿಯನ್ ಅಲ್...
18-03-26 03:38 pm
SCS Hospital, Case: ಹೆರಿಗೆ ವೇಳೆ ನವಜಾತ ಶಿಶು ಸಾ...
18-03-26 09:41 am
ಭೂ ವ್ಯವಹಾರದ ವೈಷಮ್ಯ ; ಮೋಸ ಮಾಡಿದ ಸಿಟ್ಟಿನಲ್ಲಿ ಇನ...
17-03-26 10:54 pm
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
18-03-26 11:01 pm
HK News Desk
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm