ಬ್ರೇಕಿಂಗ್ ನ್ಯೂಸ್
12-12-20 12:52 pm Headline Karnataka News Network ಕರ್ನಾಟಕ
ಮೈಸೂರು, ಡಿಸೆಂಬರ್ 12: ಗುರುವಾರ (ಡಿ.11) ರಾತ್ರಿ ಮೈಸೂರು ಹೊರವಲಯದಲ್ಲಿ ನಡೆದ ಬೈಕ್ - ಕಾರು ಅಪಘಾತದಲ್ಲಿ ಮೂವರು ಮೃತಪಟ್ಟಿದ್ದ ಘಟನೆ ನಡೆದಿದ್ದು, ತನಿಖೆ ವೇಳೆ ಆ ಕಾರು ಓಡಿಸುತ್ತಿದ್ದುದು ಬಾಲಕ ಎಂದು ತಿಳಿದುಬಂದಿದೆ. ಇದೀಗ ಬಾಲಕನ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.
ಬಾಲಕ 9ನೇ ತರಗತಿ ವಿದ್ಯಾರ್ಥಿಯಾಗಿದ್ದು, ಆತನ ತಂದೆ ಕಾರು ಮಾರಾಟ ಮಳಿಗೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂದಿನಂತೆ ಬಾಲಕನ ತಂದೆ ಗುರುವಾರ ರಾತ್ರಿ 8 ಗಂಟೆಗೆ ಮನೆಗೆ ಬಂದಿದ್ದಾರೆ. ಜೊತೆಗೆ ಮಾರಾಟ ಮಳಿಗೆಯ ಟ್ರಯಲ್ ಕಾರನ್ನು ತಂದಿದ್ದಾರೆ. ಕಾರನ್ನು ಮನೆಯ ಮುಂದೆ ನಿಲ್ಲಿಸಿ ಅನ್ಯ ಕೆಲಸದ ನಿಮಿತ್ತ ದ್ವಿಚಕ್ರ ವಾಹನದಲ್ಲಿ ತೆರಳಿದ್ದಾರೆ.
ಇದೇ ಸಮಯ ಸಾಧಿಸಿದ ಬಾಲಕ ಕಾರನ್ನು ಚಲಾಯಿಸಿಕೊಂಡು ಬೆಂಗಳೂರು-ಮೈಸೂರು ರಸ್ತೆಗೆ ತೆರಳಿದ್ದಾನೆ. ಆತನ ತಪ್ಪಿನಿಂದ ಅಪಘಾತದಲ್ಲಿ ಮೂವರು ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ.
ಕೆಲ ತಿಂಗಳ ಹಿಂದಷ್ಟೇ ಸಂಚಾರ ವಿಭಾಗದ ಎಸಿಪಿ ಸಂದೇಶ್ ಅವರು ಬಾಲಕ ಓದುತ್ತಿದ್ದ ಶಾಲೆಗೆ ತೆರಳಿ ಸಂಚಾರ ನಿಯಮದ ಬಗ್ಗೆ ಪಾಠ ಹೇಳಿದ್ದರು. ನೀವು ಯಾವುದೇ ಕಾರಣಕ್ಕೂ ವಾಹನ ಚಾಲನೆಗೆ ಮುಂದಾಗಬಾರದು ಎಂದು ತಿಳಿಹೇಳಿದ್ದರು. ಈ ವಿಚಾರವನ್ನು ಬಾಲಕನೇ ಪೊಲೀಸರ ಮುಂದೆ ಹೇಳಿದ್ದಾನೆ.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm