ಬ್ರೇಕಿಂಗ್ ನ್ಯೂಸ್
25-10-24 09:49 pm HK News Desk ಕರ್ನಾಟಕ
ಹಾವೇರಿ, ಅ.25: ಶಿಗ್ಗಾಂವಿ ಉಪ ಚುನಾವಣೆಗೆ ಒಂದೆಡೆ ರಣಕಣ ಸಿದ್ಧವಾಗುತ್ತಿದ್ದರೆ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಆರ್ಭಟಕ್ಕೆ ಕೈ ಪಡೆ ವಿಲವಿಲ ಎಂದು ಒದ್ದಾಡಿದೆ. ಟಿಕೆಟ್ ಸಿಗದ ಸಿಟ್ಟಿನಲ್ಲಿದ್ದ ಅಜ್ಜಂಪೀರ್ ಖಾದ್ರಿ ಅವರನ್ನು ಮನವೊಲಿಸಲು ಸಚಿವ ಜಮೀರ್ ಅಹ್ಮದ್ ಬಂದಿದ್ದಾಗಲೇ ಬೈಕ್ ಏರಿ, ಓಡೋಡಿ ಬಂದು ಖಾದ್ರಿ ಉಮೇದುವಾರಿಕೆ ಸಲ್ಲಿಸಿ ಅಚ್ಚರಿ ಸೃಷ್ಟಿಸಿದ್ದಾರೆ. ಖಾದ್ರಿ ನಡೆಗೆ ಕೈ ಪಡೆಯ ಜಂಘಾಬಲವೇ ಉಡುಗಿ ಹೋಗಿದೆ. ಈ ನಡುವೆ ಕೈ ಪಡೆಯ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಕೈ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಶಿಗ್ಗಾವಿ ಟಿಕೆಟ್ ಹಂಚಿಕೆ ಮಾಡುವಲ್ಲಿ ಸುಸ್ತು ಹೊಡೆದಿದ್ದ ಕೈ ನಾಯಕರು ನಿನ್ನೆ ಕೊನೆ ಕ್ಷಣದಲ್ಲಿ ಯಾಸೀರ್ ಖಾನ್ ಪಠಾಣ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದರು. ಪಠಾಣ ಶಿಗ್ಗಾವಿ ಕ್ಷೇತ್ರದ ಕೈ ಅಭ್ಯರ್ಥಿ ಎಂದು ಘೋಷಣೆ ಆಗುತ್ತಿದ್ದಂತೆ ಬೆಂಗಳೂರಿನಲ್ಲಿದ್ದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ, ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ, ಯಾಸೀರ್ ಪಠಾಣ್ ವಿರುದ್ದ ತಿರುಗಿ ಬಿದ್ದಿದ್ದರು. ಪಠಾಣ್ ಒಬ್ಬ ರೌಡಿ ಶೀಟರ್, ಗೂಂಡಾಗಿರಿ ಮಾಡುತ್ತಾನೆ, ಬೊಮ್ಮಾಯಿ ಏಜೆಂಟ್ ಗೆ ಶಿಗ್ಗಾವಿಯಲ್ಲಿ ಬಕ್ರಾ ಮಾಡಲು ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಟಿಕೆಟ್ ಕೊಡಿಸಿದ್ದಾರೆಂದು ಬೆಂಕಿ ಉಗುಳಿದ್ದರು.



ಬಂಡಾಯದ ಮುನ್ಸೂಚನೆ ಅರಿತ ಸಚಿವ ಜಮೀರ್ ಅಹ್ಮದ್ ಖಾನ್ ಹುಲಗೂರಿನ ಖಾದ್ರಿ ನಿವಾಸದಲ್ಲಿ ಮನವೊಲಿಸಲು ಬಂದಿದ್ದರು. ಕೈ ಪಡೆಯ ತಂತ್ರಗಾರಿಕೆ ಅರಿತ ಅಜ್ಜಂಪೀರ್ ಖಾದ್ರಿ, ತನ್ನ ನಿವಾಸದಲ್ಲಿ ಜಮೀರ್ ಇದ್ದಾಗಲೇ ಕೊನೆ ಕ್ಷಣದಲ್ಲಿ ಪಲ್ಸರ್ ಬೈಕ್ ಏರಿ ಹತ್ತು ನಿಮಿಷದಲ್ಲಿ ತಹಶೀಲ್ದಾರ್ ಕಚೇರಿ ತಲುಪಿದ್ದರು. 13 ನಿಮಿಷ ಬಾಕಿ ಇರುವಂತೆ ಓಡೋಡಿ ಬಂದು ನಾಮಪತ್ರ ಸಲ್ಲಿಸಿ ಕೈ ನಾಯಕರಿಗೆ ಸೆಡ್ಡು ಹೊಡೆದಿದ್ದಾರೆ. ಇತ್ತ ಸಚಿವ ಜಮೀರ್ ಅಹ್ಮದ್ ಅವರನ್ನು ಮನೆಯಿಂದ ಹೊರ ಬರಲೂ ಆಗದಂತೆ ಖಾದ್ರಿ ಬೆಂಬಲಿಗರು ಲಾಕ್ ಮಾಡಿದ್ದರು. ಜಮೀರ್ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದೂ ಆಯ್ತು. ಆಕ್ರೋಶಕ್ಕೆ ತುತ್ತಾದ ಜಮೀರ್ ಅಲ್ಲಿಂದ ಕಾಲ್ಕಿತ್ತು ಬರುವುದರದಲ್ಲಿ ಸುಸ್ತು ಹೊಡೆದಿದ್ದರು.
ಇತ್ತ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಖಾನ್ ಪಠಾಣ್ ಅವರು ಸಚಿವ ಸತೀಶ್ ಜಾರಕಿಹೋಳಿ, ಈಶ್ವರ ಖಂಡ್ರೆ, ಶಿವಾನಂದ ಪಾಟೀಲ ಜೊತೆ ತೆರಳಿ ನಾಮಪತ್ರ ಸಲ್ಲಿಸಿ ಪಟ್ಟಣದಲ್ಲಿ ರೋಡ್ ಶೋ ನಡೆಸಿದರು. ಇದೇ ವೇಳೆ, ಕಾಂಗ್ರೆಸಿನ ಮಾಜಿ ಸಂಸದ ಮಂಜುನಾಥ ಕುನ್ನೂರ ಸಹ ಬಂಡಾಯ ಬಾವುಟ ಹಾರಿಸಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಹೀಗಾಗಿ ಶಿಗ್ಗಾಂವಿ ಕಾಂಗ್ರೆಸ್ ಮನೆಯೊಂದು ಮೂರು ಬಾಗಿಲು ಎನ್ನುವಂತಾಗಿದ್ದು ಕೈ ಪಡೆಗೆ ಇಬ್ಬರು ಬಂಡಾಯ ಸ್ಪರ್ಧೆ ಮಾಡಿರುವುದು ಆಡಳಿತ ಪಕ್ಷಕ್ಕೆ ಕೈ ಸುಟ್ಟುಕೊಳ್ಳುವ ಸ್ಥಿತಿಯಾಗಿದೆ.
ಮತ್ತೊಂದೆಡೆ ಕಮಲ ಕೋಟೆಯನ್ನು ಭದ್ರಗೊಳಿಸಲು ಚುನಾವಣಾ ಅಖಾಡಕ್ಕೆ ಇಳಿದಿರುವ ಕಮಲ ನಾಯಕರು ಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಭರತ ಬೊಮ್ಮಾಯಿ ನಾಮಪತ್ರ ಸಲ್ಲಿಕೆಗೂ ಮುನ್ನ ರೋಡ್ ಶೋ ನಡೆಸಿ ಶಕ್ರಿ ಪ್ರದರ್ಶನ ಮಾಡಿದರು. ಮಾಜಿ ಸಿಎಂ ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಮುರುಗೇಶ್ ನಿರಾಣಿ ಜೊತೆಯಾಗಿ ತೆರಳಿ ಉಮೇದುವಾರಿಕೆ ಸಲ್ಲಿಕೆ ಮಾಡಿದ್ದಾರೆ.
On the last day for filing nomination papers to the byelections in Shiggaon Assembly Constituency on Friday, 25 sets of nomination papers were filed by 20 candidates of various parties and Independents, including two rebel candidates of the Congress in the form of the former MLA Syed Azeem Peer Khadri and the former MP Manjunath Kunnur.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm