ಬ್ರೇಕಿಂಗ್ ನ್ಯೂಸ್
29-10-24 02:43 pm HK News Desk ಕರ್ನಾಟಕ
ಮೈಸೂರು, ಅ.29: ಮುಸ್ಲಿಮರು ವಕ್ಫ್ ಆಸ್ತಿ ಅಂತಾರಲ್ಲ, ಅದು ಅವರಿಗೆ ಎಲ್ಲಿಂದ ಬಂತು? ಅಕ್ಬರ್, ಔರಂಗಜೇಬ್, ಜಿನ್ನಾ ಅಥವಾ ಯಾರಾದರೂ ಸೌದಿಯ ಮುಲ್ಲಾಗಳು ಇವರಿಗೆ ಕೊಟ್ಟ ಆಸ್ತಿಯಾ ಇದು? ಪ್ರತ್ಯೇಕ ಆಸ್ತಿ ಮುಸ್ಲಿಮರಿಗೆ ಎಲ್ಲಿಂದ ಬಂತು? ಯಾರಿಂದ ಅವರಿಗೆ ಬಳುವಳಿ ಬಂದಿದ್ದು? ಎಂದು ಮೈಸೂರಿನ ಮಾಜಿ ಸಂಸದ ಪ್ರತಾಪಸಿಂಹ ಪ್ರಶ್ನೆ ಮಾಡಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಕ್ಕೆ ಮಾತನಾಡಿದ ಅವರು, ವಿಜಯಪುರದಲ್ಲಿ ರೈತರಿಗೆ ಸೇರಿದ 1200 ಎಕ್ರೆ ಜಮೀನು ತನ್ನದೆಂದು ವಕ್ಫ್ ಬೋರ್ಡ್ ಹೇಳಿದೆ. ಈ ವಕ್ಫ್ ಎಂದರೆ ಏನು? ಇವರಿಗೆ ಜಮೀನು ಬಳುವಳಿ ಆಗಿ ಕೊಟ್ಟಿದ್ದು ಯಾರು? ಇದೇನು ಜಿನ್ನಾ ಕೊಟ್ಟ ಭೂಮಿಯೇ? ಎಂದು ಪ್ರಶ್ನಿಸಿದರು.
ಕೇವಲ ವಿಜಯಪುರ ಮಾತ್ರವಲ್ಲ ಅಲ್ಲ. ಹುಣಸೂರಿನ ಗಣೇಶ ದೇವಸ್ಥಾನ, ಚಿಕ್ಕಮಗಳೂರಿನಲ್ಲಿ ಖಾಸಗಿ ಆಸ್ತಿಯನ್ನು ಕೂಡ ವಕ್ಫ್ ಆಸ್ತಿ ಎಂದು ಹೇಳಿ ಕಬಳಿಸುವ ಪ್ರಯತ್ನ ನಡೆದಿದೆ. ರಾಜ್ಯದಲ್ಲಿನ 1.25 ಲಕ್ಷ ಎಕರೆ ಜಮೀನು ತಮಗೆ ಸೇರಿದ್ದು ಎಂದು ವಕ್ಫ್ ಮಂಡಳಿ ವಾದಿಸುತ್ತಿದೆ. ಚಿಕ್ಕಮಗಳೂರಿನಲ್ಲೂ ಇದೇ ಕಥೆ ಆಗಿದೆ. ಕಂಡವರ ಜಮೀನಿಗೆಲ್ಲಾ ಮುಲ್ಲಾಗಳು ನೋಟಿಸ್ ಕೊಡ್ತಾರೆ, ಇದು ನಮ್ಮದು ಅಂತಿದ್ದಾರೆ. ವಕ್ಫ್ ಬೋರ್ಡ್ ಜಮೀನಿನಲ್ಲಿ ಮುಸ್ಲಿಮರಿಗೆ ಉಳುಮೆ ಮಾಡಲು ಅವಕಾಶ ಕೊಟ್ಟಿದ್ದೀರಾ? ಯಾವ ಮುಸಲ್ಮಾನರಿಗೂ ಕೃಷಿಗೆ ಜಮೀನು ಬಿಟ್ಟುಕೊಟ್ಟಿಲ್ಲ. ಬದಲಾಗಿ ರಿಯಲ್ ಎಸ್ಟೇಟ್ ದಂಧೆ ನಡೆಯುತ್ತಿದೆ. ಕೇಂದ್ರ ಸರ್ಕಾರ ಕೂಡಲೇ ವಕ್ಫ್ ಕಾಯ್ದೆ ಅನ್ನು ವಜಾ ಮಾಡಬೇಕು ಎಂದು ಆಗ್ರಹಿಸಿದರು.
ನಮ್ಮ ದೇವಾಲಯ, ಮಠಗಳಲ್ಲಿ ಹಾಕುವಂತೆ ಯಾವತ್ತಾದರೂ ಮಸೀದಿ ಚರ್ಚ್ ಗಳಲ್ಲಿ ಹಿಡಿ ಅನ್ನ ಯಾರಿಗಾದ್ರೂ ಹಾಕಿದ್ದೀರಾ? ಎಂದು ಪ್ರತಾಪಸಿಂಹ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಅವರಿಗೆ ಮುಡಾ ಪ್ರಕರಣ ನಂತರ ಚಾಮುಂಡೇಶ್ವರಿ, ಹಾಸನಾಂಬೆ ಸೇರಿದಂತೆ ಹಿಂದೂ ದೇವತೆಗಳ ಮೇಲೆ ನಂಬಿಕೆ ಬಂದಿದೆ. ಹೀಗಾಗಿ ದೇವಸ್ಥಾನ ಸುತ್ತಲು ಹೋಗಿದ್ದಾರೆ. ಮುಡಾ ಪ್ರಕರಣದಿಂದ ಪಾರು ಮಾಡಲು ಹಿಂದು ದೇವರ ಮೊರೆ ಹೋಗಿದ್ದಾರೆ. ವಿಜಯಪುರ ವಕ್ಫ್ ಆಸ್ತಿ ವಿಚಾರದಲ್ಲಿ ಹಿಂದೂಗಳ ಪರ ತೀರ್ಮಾನ ಕೈಗೊಳ್ಳುತ್ತಾರೆ ಎಂಬ ನಂಬಿಕೆ ಇದೆ ಎಂದು ಪ್ರತಾಪ ಸಿಂಹ ಹೇಳಿದರು.
Former MP Pratap Simha slams waqf board over notices to many Hindu families claiming land.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm