ಬ್ರೇಕಿಂಗ್ ನ್ಯೂಸ್
30-10-24 12:18 pm HK News Desk ಕರ್ನಾಟಕ
ಚಿಕ್ಕಮಗಳೂರು, ಅ 30: ಹಾಸನಾಂಬೆ ದರ್ಶನಕ್ಕೆ ಹೊರಟಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದು, ಮಹಿಳೆ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದಲ್ಲಿ ನಡೆದಿದೆ.
ಚಿಕ್ಕಮಗಳೂರು ತಾಲೂಕಿನ ಗವನಹಳ್ಳಿ ಗ್ರಾಮದ ಮಂಜು-ವನಿತಾ ದಂಪತಿ ಪ್ರಯಾಣಿಸುತ್ತಿದ್ದ ಕಾರು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಕೆರೆಗೆ ಬಿದ್ದಿದೆ
ಮಂಜು ಪತ್ನಿ ವನಿತಾ (38) ಮೃತಪಟ್ಟವರು. ಕಾರು ಚಲಾಯಿಸುತ್ತಿದ್ದ ಮಂಜು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕೂಡಲೇ ಗ್ರಾಮಸ್ಥರು ಇಬ್ಬರನ್ನು ಬದುಕಿಸಲು ಹರಸಾಹಸಪಟ್ಟಿದ್ದಾರೆ. ಬೆಳಗಿನ ಜಾವದ ಕತ್ತಲಲ್ಲು ಕೂಡ ಕಲ್ಕೆರೆ ಗ್ರಾಮಸ್ಥರು ಕೆರೆಗೆ ಇಳಿದು ಕಾರಿಗೆ ಹಗ್ಗ ಕಟ್ಟಿ ಎಳೆದಿದ್ದಾರೆ. ಕಾರಿನ ಚಾಲಕ ಮಂಜು ಪ್ರಾಣಾಪಾಯದಿಂದ ಪಾರಾಗಿದ್ದು, ಮಂಜು ಪತ್ನಿ ವನಿತಾ ಸಾವನ್ನಪ್ಪಿದ್ದಾರೆ. ಕಾರಿನಿಂದ ಮಹಿಳೆಯನ್ನು ಹೊರತಂತ ಗ್ರಾಮಸ್ಥರು ಅವರನ್ನ ಬದುಕಿಸಲು ತೀವ್ರ ಹರಸಾಹಸಪಟ್ಟಿದ್ದಾರೆ. ಎದೆ ಬಡಿದು, ಬಾಯಿಗೆ ಉಸಿರು ನೀಡಿ, ಕೈಕಾಲು ಉಜ್ಜಿ ಜೀವ ಉಳಿಸಲು ಪ್ರಯತ್ನಿಸಿದ್ದಾರೆ. ಆದರೆ, ಕಾರು ಕೆರೆಯಲ್ಲಿ ಮುಳುಗಿ ನೀರು ಕುಡಿದಿದ್ದ ವನಿತಾ ಉಸಿರುಗಟ್ಡಿ ಸಾವನ್ನಪ್ಪಿದ್ದಾರೆ.
ಬೇಲೂರು ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ
Chikkamagaluru car falls into lake, wife killed, husband surives accident. The deceased has been identified as Vanitha. Villagers tired hard to save her but she breathed her last.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm