ವಿದ್ಯಾರ್ಥಿಗಳ ಮೊಬೈಲ್​ಗೆ ಬರಲಿದೆ ಎಸ್​ಎಸ್​ಎಲ್​ಸಿ ರಿಸಲ್ಟ್

08-08-20 11:58 am       Headline Karnataka News Network   ಕರ್ನಾಟಕ

ಈ ಬಾರಿ ವಿದ್ಯಾರ್ಥಿಗಳ ಮೊಬೈಲ್​ಗೆ ಎಸ್.ಎಂ.ಎಸ್. ಮೂಲಕ ಫಲಿತಾಂಶ ಬರಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಚಾಮರಾಜನಗರ, ಆಗಸ್ಟ್ 8: ಆಗಸ್ಟ್ 10ರ ಸೋಮವಾರ ಮಧ್ಯಾಹ್ನ 3 ಗಂಟೆಗೆ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂತ ಪ್ರಕಟಗೊಳ್ಳಲಿದೆ. ಈ ಬಾರಿ ವಿದ್ಯಾರ್ಥಿಗಳ ಮೊಬೈಲ್​ಗೆ ಎಸ್.ಎಂ.ಎಸ್. ಮೂಲಕ ಫಲಿತಾಂಶ ಬರಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್ ಅವರು,  ಕೋವಿಡ್-19 ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಗುಂಪು ಗೂಡಬಾರದು ಎಂಬ ದೃಷ್ಟಿಯಿಂದ ಪ್ರತಿ ವಿದ್ಯಾರ್ಥಿಯ ಮೊಬೈಲ್ ಗೆ ಫಲಿತಾಂಶ  ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ವೆಬ್​ಸೈಟ್​ನಲ್ಲೂ ಫಲಿತಾಂಶ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದರು.

ಅನುತ್ತೀರ್ಣರಾದವರು ಯಾರು ಸಹ ನಿರಾಶರಾಗುವುದು ಬೇಡ. ಜೀವನದಲ್ಲಿ ಇದೇ ಕೊನೇ ಅಲ್ಲ. ಇದೂ ಒಂದು ಭಾಗ ಅಷ್ಟೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು.