ಬ್ರೇಕಿಂಗ್ ನ್ಯೂಸ್
03-11-24 09:54 pm HK News Desk ಕರ್ನಾಟಕ
ಮೈಸೂರು, ನ.3: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಮತ್ತೊಂದು ಮಹಾ ಗೋಲ್ಮಾಲ್ ಪ್ರಕರಣ ಎಂಟು ತಿಂಗಳ ನಂತರ ಬೆಳಕಿಗೆ ಬಂದಿದೆ. ಜನರು ವಿವಿಧ ಸೇವೆಗಳಿಗಾಗಿ ಪ್ರಾಧಿಕಾರಕ್ಕೆ ಕಟ್ಟಿದ ಹಣವನ್ನ ಮುಡಾ ನೌಕರರು ಮತ್ತು ಬ್ಯಾಂಕ್ನ ಕೆಲ ನೌಕರರು ತಮ್ಮ ಜೇಬಿಗೆ ಇಳಿಸಿಕೊಂಡಿದ್ದಾರೆ. ಹೀಗೆ ಜೇಬು ಸೇರಿದ ಹಣದ ಪ್ರಮಾಣ ಕೋಟಿ ದಾಟಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ತನ್ನ ವಿವಿಧ ಸೇವೆಗಳನ್ನು ನೀಡಲು ಹಣ ನಿಗದಿ ಮಾಡಿದೆ. ಇದಕ್ಕಾಗಿ ಬ್ಯಾಂಕ್ ಆಫ್ ಬರೋಡಾದಲ್ಲಿ ಪ್ರಾಧಿಕಾರದ ಬ್ಯಾಂಕ್ ಖಾತೆಯನ್ನು ಮಾಡಿದೆ. ಜನರು ಅಲ್ಲಿ ಹಣ ಕಟ್ಟಿ ಚಲನ್ ಪಡೆದು ಅದನ್ನು ಪ್ರಾಧಿಕಾರದ ಸಂಬಂಧಪಟ್ಟ ಶಾಖೆಗೆ ನೀಡಿದರೆ ಅವರಿಗೆ ಆ ಸೇವೆಯನ್ನು ನೀಡಲಾಗುತ್ತದೆ.
ಕಳೆದ ವರ್ಷ ಹೀಗೆ ಚಲನ್ ಕಟ್ಟಿ ಸೇವೆ ಪಡೆದ ಒಟ್ಟು 93 ಜನರ ಹಣ ಪ್ರಾಧಿಕಾರಕ್ಕೆ ಬಂದಿಲ್ಲ. ಇದರ ಮೊತ್ತ 1 ಕೋಟಿ ರೂ.ಗೂ ಹೆಚ್ಚಿದೆ. ಪ್ರಾಧಿಕಾರದ ಹಣಕಾಸು ಶಾಖೆಯವರು ಬ್ಯಾಂಕ್ ಆಫ್ ಬರೋಡಾದ ವ್ಯವಸ್ಥಾಪಕರಿಗೆ ಪತ್ರ ಬರೆದು 93 ಜನರು ಕಟ್ಟಿರುವ ಹಣ ನಮಗೆ ಡೆಪಾಸಿಟ್ ಮಾಡಿ ಎಂದು ಕೇಳಿದ್ದಾರೆ.
ಈ ಪತ್ರಕ್ಕೆ ಬ್ಯಾಂಕ್ ಆಫ್ ಬರೋಡಾದ ವ್ಯವಸ್ಥಾಪಕರು ಉತ್ತರ ನೀಡಿದ್ದು ನೀವು ಕೇಳಿರುವ 93 ಜನರ ಹಣ ಬ್ಯಾಂಕ್ಗೆ ಸಂದಾಯವೇ ಆಗಿಲ್ಲ ಎಂದು ಉತ್ತರ ಕೊಟ್ಟಿದ್ದಾರೆ. ಅಲ್ಲಿಗೆ ಬ್ಯಾಂಕ್ ಚಲನ್ ಹಾಗೂ ಬ್ಯಾಂಕ್ ಸ್ಹೀಲ್ ಎರಡೂ ನಕಲಿ ಮಾಡಿ ಹಣ ವಂಚಿಸಿರುವ ಶಂಕೆ ವ್ಯಕ್ತವಾಗಿದೆ. ಬ್ಯಾಂಕ್ನ ಕೆಲವು ಸಿಬ್ಬಂದಿ ಹಾಗೂ ಮೂಡಾದ ನೌಕರರು ಸೇರಿ ಗ್ರಾಹಕರಿಂದ ಹಣ ಪಡೆದು ಅವರಿಗೆ ನಕಲಿ ಸ್ಹೀಲ್ ಹಾಕಿರುವ ಚಲನ್ ಕೊಟ್ಟು ವಂಚಿಸಿದ್ದಾರೆ. ಆಮೂಲಕ ನಿರ್ದಿಷ್ಟ ಸೇವೆಯನ್ನು ಗ್ರಾಹಕನಿಗೆ ನೀಡದೇ ಮೂಡಾಗೆ ಸೇರಬೇಕಾದ ಹಣವನ್ನು ತಮ್ಮ ಜೇಬಿಗೆ ಇಳಿಸಿದ್ದಾರೆ ಎನ್ನುವ ಶಂಕೆಯಿದೆ.
Muda scam, another muda scam exposed, challan money misused in Mysuru.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm