ಬ್ರೇಕಿಂಗ್ ನ್ಯೂಸ್
03-11-24 09:54 pm HK News Desk ಕರ್ನಾಟಕ
ಮೈಸೂರು, ನ.3: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಮತ್ತೊಂದು ಮಹಾ ಗೋಲ್ಮಾಲ್ ಪ್ರಕರಣ ಎಂಟು ತಿಂಗಳ ನಂತರ ಬೆಳಕಿಗೆ ಬಂದಿದೆ. ಜನರು ವಿವಿಧ ಸೇವೆಗಳಿಗಾಗಿ ಪ್ರಾಧಿಕಾರಕ್ಕೆ ಕಟ್ಟಿದ ಹಣವನ್ನ ಮುಡಾ ನೌಕರರು ಮತ್ತು ಬ್ಯಾಂಕ್ನ ಕೆಲ ನೌಕರರು ತಮ್ಮ ಜೇಬಿಗೆ ಇಳಿಸಿಕೊಂಡಿದ್ದಾರೆ. ಹೀಗೆ ಜೇಬು ಸೇರಿದ ಹಣದ ಪ್ರಮಾಣ ಕೋಟಿ ದಾಟಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ತನ್ನ ವಿವಿಧ ಸೇವೆಗಳನ್ನು ನೀಡಲು ಹಣ ನಿಗದಿ ಮಾಡಿದೆ. ಇದಕ್ಕಾಗಿ ಬ್ಯಾಂಕ್ ಆಫ್ ಬರೋಡಾದಲ್ಲಿ ಪ್ರಾಧಿಕಾರದ ಬ್ಯಾಂಕ್ ಖಾತೆಯನ್ನು ಮಾಡಿದೆ. ಜನರು ಅಲ್ಲಿ ಹಣ ಕಟ್ಟಿ ಚಲನ್ ಪಡೆದು ಅದನ್ನು ಪ್ರಾಧಿಕಾರದ ಸಂಬಂಧಪಟ್ಟ ಶಾಖೆಗೆ ನೀಡಿದರೆ ಅವರಿಗೆ ಆ ಸೇವೆಯನ್ನು ನೀಡಲಾಗುತ್ತದೆ.
ಕಳೆದ ವರ್ಷ ಹೀಗೆ ಚಲನ್ ಕಟ್ಟಿ ಸೇವೆ ಪಡೆದ ಒಟ್ಟು 93 ಜನರ ಹಣ ಪ್ರಾಧಿಕಾರಕ್ಕೆ ಬಂದಿಲ್ಲ. ಇದರ ಮೊತ್ತ 1 ಕೋಟಿ ರೂ.ಗೂ ಹೆಚ್ಚಿದೆ. ಪ್ರಾಧಿಕಾರದ ಹಣಕಾಸು ಶಾಖೆಯವರು ಬ್ಯಾಂಕ್ ಆಫ್ ಬರೋಡಾದ ವ್ಯವಸ್ಥಾಪಕರಿಗೆ ಪತ್ರ ಬರೆದು 93 ಜನರು ಕಟ್ಟಿರುವ ಹಣ ನಮಗೆ ಡೆಪಾಸಿಟ್ ಮಾಡಿ ಎಂದು ಕೇಳಿದ್ದಾರೆ.
ಈ ಪತ್ರಕ್ಕೆ ಬ್ಯಾಂಕ್ ಆಫ್ ಬರೋಡಾದ ವ್ಯವಸ್ಥಾಪಕರು ಉತ್ತರ ನೀಡಿದ್ದು ನೀವು ಕೇಳಿರುವ 93 ಜನರ ಹಣ ಬ್ಯಾಂಕ್ಗೆ ಸಂದಾಯವೇ ಆಗಿಲ್ಲ ಎಂದು ಉತ್ತರ ಕೊಟ್ಟಿದ್ದಾರೆ. ಅಲ್ಲಿಗೆ ಬ್ಯಾಂಕ್ ಚಲನ್ ಹಾಗೂ ಬ್ಯಾಂಕ್ ಸ್ಹೀಲ್ ಎರಡೂ ನಕಲಿ ಮಾಡಿ ಹಣ ವಂಚಿಸಿರುವ ಶಂಕೆ ವ್ಯಕ್ತವಾಗಿದೆ. ಬ್ಯಾಂಕ್ನ ಕೆಲವು ಸಿಬ್ಬಂದಿ ಹಾಗೂ ಮೂಡಾದ ನೌಕರರು ಸೇರಿ ಗ್ರಾಹಕರಿಂದ ಹಣ ಪಡೆದು ಅವರಿಗೆ ನಕಲಿ ಸ್ಹೀಲ್ ಹಾಕಿರುವ ಚಲನ್ ಕೊಟ್ಟು ವಂಚಿಸಿದ್ದಾರೆ. ಆಮೂಲಕ ನಿರ್ದಿಷ್ಟ ಸೇವೆಯನ್ನು ಗ್ರಾಹಕನಿಗೆ ನೀಡದೇ ಮೂಡಾಗೆ ಸೇರಬೇಕಾದ ಹಣವನ್ನು ತಮ್ಮ ಜೇಬಿಗೆ ಇಳಿಸಿದ್ದಾರೆ ಎನ್ನುವ ಶಂಕೆಯಿದೆ.
Muda scam, another muda scam exposed, challan money misused in Mysuru.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm