ಬ್ರೇಕಿಂಗ್ ನ್ಯೂಸ್
03-11-24 09:54 pm HK News Desk ಕರ್ನಾಟಕ
ಮೈಸೂರು, ನ.3: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಮತ್ತೊಂದು ಮಹಾ ಗೋಲ್ಮಾಲ್ ಪ್ರಕರಣ ಎಂಟು ತಿಂಗಳ ನಂತರ ಬೆಳಕಿಗೆ ಬಂದಿದೆ. ಜನರು ವಿವಿಧ ಸೇವೆಗಳಿಗಾಗಿ ಪ್ರಾಧಿಕಾರಕ್ಕೆ ಕಟ್ಟಿದ ಹಣವನ್ನ ಮುಡಾ ನೌಕರರು ಮತ್ತು ಬ್ಯಾಂಕ್ನ ಕೆಲ ನೌಕರರು ತಮ್ಮ ಜೇಬಿಗೆ ಇಳಿಸಿಕೊಂಡಿದ್ದಾರೆ. ಹೀಗೆ ಜೇಬು ಸೇರಿದ ಹಣದ ಪ್ರಮಾಣ ಕೋಟಿ ದಾಟಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ತನ್ನ ವಿವಿಧ ಸೇವೆಗಳನ್ನು ನೀಡಲು ಹಣ ನಿಗದಿ ಮಾಡಿದೆ. ಇದಕ್ಕಾಗಿ ಬ್ಯಾಂಕ್ ಆಫ್ ಬರೋಡಾದಲ್ಲಿ ಪ್ರಾಧಿಕಾರದ ಬ್ಯಾಂಕ್ ಖಾತೆಯನ್ನು ಮಾಡಿದೆ. ಜನರು ಅಲ್ಲಿ ಹಣ ಕಟ್ಟಿ ಚಲನ್ ಪಡೆದು ಅದನ್ನು ಪ್ರಾಧಿಕಾರದ ಸಂಬಂಧಪಟ್ಟ ಶಾಖೆಗೆ ನೀಡಿದರೆ ಅವರಿಗೆ ಆ ಸೇವೆಯನ್ನು ನೀಡಲಾಗುತ್ತದೆ.
ಕಳೆದ ವರ್ಷ ಹೀಗೆ ಚಲನ್ ಕಟ್ಟಿ ಸೇವೆ ಪಡೆದ ಒಟ್ಟು 93 ಜನರ ಹಣ ಪ್ರಾಧಿಕಾರಕ್ಕೆ ಬಂದಿಲ್ಲ. ಇದರ ಮೊತ್ತ 1 ಕೋಟಿ ರೂ.ಗೂ ಹೆಚ್ಚಿದೆ. ಪ್ರಾಧಿಕಾರದ ಹಣಕಾಸು ಶಾಖೆಯವರು ಬ್ಯಾಂಕ್ ಆಫ್ ಬರೋಡಾದ ವ್ಯವಸ್ಥಾಪಕರಿಗೆ ಪತ್ರ ಬರೆದು 93 ಜನರು ಕಟ್ಟಿರುವ ಹಣ ನಮಗೆ ಡೆಪಾಸಿಟ್ ಮಾಡಿ ಎಂದು ಕೇಳಿದ್ದಾರೆ.
ಈ ಪತ್ರಕ್ಕೆ ಬ್ಯಾಂಕ್ ಆಫ್ ಬರೋಡಾದ ವ್ಯವಸ್ಥಾಪಕರು ಉತ್ತರ ನೀಡಿದ್ದು ನೀವು ಕೇಳಿರುವ 93 ಜನರ ಹಣ ಬ್ಯಾಂಕ್ಗೆ ಸಂದಾಯವೇ ಆಗಿಲ್ಲ ಎಂದು ಉತ್ತರ ಕೊಟ್ಟಿದ್ದಾರೆ. ಅಲ್ಲಿಗೆ ಬ್ಯಾಂಕ್ ಚಲನ್ ಹಾಗೂ ಬ್ಯಾಂಕ್ ಸ್ಹೀಲ್ ಎರಡೂ ನಕಲಿ ಮಾಡಿ ಹಣ ವಂಚಿಸಿರುವ ಶಂಕೆ ವ್ಯಕ್ತವಾಗಿದೆ. ಬ್ಯಾಂಕ್ನ ಕೆಲವು ಸಿಬ್ಬಂದಿ ಹಾಗೂ ಮೂಡಾದ ನೌಕರರು ಸೇರಿ ಗ್ರಾಹಕರಿಂದ ಹಣ ಪಡೆದು ಅವರಿಗೆ ನಕಲಿ ಸ್ಹೀಲ್ ಹಾಕಿರುವ ಚಲನ್ ಕೊಟ್ಟು ವಂಚಿಸಿದ್ದಾರೆ. ಆಮೂಲಕ ನಿರ್ದಿಷ್ಟ ಸೇವೆಯನ್ನು ಗ್ರಾಹಕನಿಗೆ ನೀಡದೇ ಮೂಡಾಗೆ ಸೇರಬೇಕಾದ ಹಣವನ್ನು ತಮ್ಮ ಜೇಬಿಗೆ ಇಳಿಸಿದ್ದಾರೆ ಎನ್ನುವ ಶಂಕೆಯಿದೆ.
Muda scam, another muda scam exposed, challan money misused in Mysuru.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 01:01 pm
HK News Staffer
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm