ಬ್ರೇಕಿಂಗ್ ನ್ಯೂಸ್
03-11-24 09:54 pm HK News Desk ಕರ್ನಾಟಕ
ಮೈಸೂರು, ನ.3: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಮತ್ತೊಂದು ಮಹಾ ಗೋಲ್ಮಾಲ್ ಪ್ರಕರಣ ಎಂಟು ತಿಂಗಳ ನಂತರ ಬೆಳಕಿಗೆ ಬಂದಿದೆ. ಜನರು ವಿವಿಧ ಸೇವೆಗಳಿಗಾಗಿ ಪ್ರಾಧಿಕಾರಕ್ಕೆ ಕಟ್ಟಿದ ಹಣವನ್ನ ಮುಡಾ ನೌಕರರು ಮತ್ತು ಬ್ಯಾಂಕ್ನ ಕೆಲ ನೌಕರರು ತಮ್ಮ ಜೇಬಿಗೆ ಇಳಿಸಿಕೊಂಡಿದ್ದಾರೆ. ಹೀಗೆ ಜೇಬು ಸೇರಿದ ಹಣದ ಪ್ರಮಾಣ ಕೋಟಿ ದಾಟಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ತನ್ನ ವಿವಿಧ ಸೇವೆಗಳನ್ನು ನೀಡಲು ಹಣ ನಿಗದಿ ಮಾಡಿದೆ. ಇದಕ್ಕಾಗಿ ಬ್ಯಾಂಕ್ ಆಫ್ ಬರೋಡಾದಲ್ಲಿ ಪ್ರಾಧಿಕಾರದ ಬ್ಯಾಂಕ್ ಖಾತೆಯನ್ನು ಮಾಡಿದೆ. ಜನರು ಅಲ್ಲಿ ಹಣ ಕಟ್ಟಿ ಚಲನ್ ಪಡೆದು ಅದನ್ನು ಪ್ರಾಧಿಕಾರದ ಸಂಬಂಧಪಟ್ಟ ಶಾಖೆಗೆ ನೀಡಿದರೆ ಅವರಿಗೆ ಆ ಸೇವೆಯನ್ನು ನೀಡಲಾಗುತ್ತದೆ.
ಕಳೆದ ವರ್ಷ ಹೀಗೆ ಚಲನ್ ಕಟ್ಟಿ ಸೇವೆ ಪಡೆದ ಒಟ್ಟು 93 ಜನರ ಹಣ ಪ್ರಾಧಿಕಾರಕ್ಕೆ ಬಂದಿಲ್ಲ. ಇದರ ಮೊತ್ತ 1 ಕೋಟಿ ರೂ.ಗೂ ಹೆಚ್ಚಿದೆ. ಪ್ರಾಧಿಕಾರದ ಹಣಕಾಸು ಶಾಖೆಯವರು ಬ್ಯಾಂಕ್ ಆಫ್ ಬರೋಡಾದ ವ್ಯವಸ್ಥಾಪಕರಿಗೆ ಪತ್ರ ಬರೆದು 93 ಜನರು ಕಟ್ಟಿರುವ ಹಣ ನಮಗೆ ಡೆಪಾಸಿಟ್ ಮಾಡಿ ಎಂದು ಕೇಳಿದ್ದಾರೆ.
ಈ ಪತ್ರಕ್ಕೆ ಬ್ಯಾಂಕ್ ಆಫ್ ಬರೋಡಾದ ವ್ಯವಸ್ಥಾಪಕರು ಉತ್ತರ ನೀಡಿದ್ದು ನೀವು ಕೇಳಿರುವ 93 ಜನರ ಹಣ ಬ್ಯಾಂಕ್ಗೆ ಸಂದಾಯವೇ ಆಗಿಲ್ಲ ಎಂದು ಉತ್ತರ ಕೊಟ್ಟಿದ್ದಾರೆ. ಅಲ್ಲಿಗೆ ಬ್ಯಾಂಕ್ ಚಲನ್ ಹಾಗೂ ಬ್ಯಾಂಕ್ ಸ್ಹೀಲ್ ಎರಡೂ ನಕಲಿ ಮಾಡಿ ಹಣ ವಂಚಿಸಿರುವ ಶಂಕೆ ವ್ಯಕ್ತವಾಗಿದೆ. ಬ್ಯಾಂಕ್ನ ಕೆಲವು ಸಿಬ್ಬಂದಿ ಹಾಗೂ ಮೂಡಾದ ನೌಕರರು ಸೇರಿ ಗ್ರಾಹಕರಿಂದ ಹಣ ಪಡೆದು ಅವರಿಗೆ ನಕಲಿ ಸ್ಹೀಲ್ ಹಾಕಿರುವ ಚಲನ್ ಕೊಟ್ಟು ವಂಚಿಸಿದ್ದಾರೆ. ಆಮೂಲಕ ನಿರ್ದಿಷ್ಟ ಸೇವೆಯನ್ನು ಗ್ರಾಹಕನಿಗೆ ನೀಡದೇ ಮೂಡಾಗೆ ಸೇರಬೇಕಾದ ಹಣವನ್ನು ತಮ್ಮ ಜೇಬಿಗೆ ಇಳಿಸಿದ್ದಾರೆ ಎನ್ನುವ ಶಂಕೆಯಿದೆ.
Muda scam, another muda scam exposed, challan money misused in Mysuru.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm