ಬ್ರೇಕಿಂಗ್ ನ್ಯೂಸ್
03-11-24 09:54 pm HK News Desk ಕರ್ನಾಟಕ
ಮೈಸೂರು, ನ.3: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಮತ್ತೊಂದು ಮಹಾ ಗೋಲ್ಮಾಲ್ ಪ್ರಕರಣ ಎಂಟು ತಿಂಗಳ ನಂತರ ಬೆಳಕಿಗೆ ಬಂದಿದೆ. ಜನರು ವಿವಿಧ ಸೇವೆಗಳಿಗಾಗಿ ಪ್ರಾಧಿಕಾರಕ್ಕೆ ಕಟ್ಟಿದ ಹಣವನ್ನ ಮುಡಾ ನೌಕರರು ಮತ್ತು ಬ್ಯಾಂಕ್ನ ಕೆಲ ನೌಕರರು ತಮ್ಮ ಜೇಬಿಗೆ ಇಳಿಸಿಕೊಂಡಿದ್ದಾರೆ. ಹೀಗೆ ಜೇಬು ಸೇರಿದ ಹಣದ ಪ್ರಮಾಣ ಕೋಟಿ ದಾಟಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ತನ್ನ ವಿವಿಧ ಸೇವೆಗಳನ್ನು ನೀಡಲು ಹಣ ನಿಗದಿ ಮಾಡಿದೆ. ಇದಕ್ಕಾಗಿ ಬ್ಯಾಂಕ್ ಆಫ್ ಬರೋಡಾದಲ್ಲಿ ಪ್ರಾಧಿಕಾರದ ಬ್ಯಾಂಕ್ ಖಾತೆಯನ್ನು ಮಾಡಿದೆ. ಜನರು ಅಲ್ಲಿ ಹಣ ಕಟ್ಟಿ ಚಲನ್ ಪಡೆದು ಅದನ್ನು ಪ್ರಾಧಿಕಾರದ ಸಂಬಂಧಪಟ್ಟ ಶಾಖೆಗೆ ನೀಡಿದರೆ ಅವರಿಗೆ ಆ ಸೇವೆಯನ್ನು ನೀಡಲಾಗುತ್ತದೆ.
ಕಳೆದ ವರ್ಷ ಹೀಗೆ ಚಲನ್ ಕಟ್ಟಿ ಸೇವೆ ಪಡೆದ ಒಟ್ಟು 93 ಜನರ ಹಣ ಪ್ರಾಧಿಕಾರಕ್ಕೆ ಬಂದಿಲ್ಲ. ಇದರ ಮೊತ್ತ 1 ಕೋಟಿ ರೂ.ಗೂ ಹೆಚ್ಚಿದೆ. ಪ್ರಾಧಿಕಾರದ ಹಣಕಾಸು ಶಾಖೆಯವರು ಬ್ಯಾಂಕ್ ಆಫ್ ಬರೋಡಾದ ವ್ಯವಸ್ಥಾಪಕರಿಗೆ ಪತ್ರ ಬರೆದು 93 ಜನರು ಕಟ್ಟಿರುವ ಹಣ ನಮಗೆ ಡೆಪಾಸಿಟ್ ಮಾಡಿ ಎಂದು ಕೇಳಿದ್ದಾರೆ.
ಈ ಪತ್ರಕ್ಕೆ ಬ್ಯಾಂಕ್ ಆಫ್ ಬರೋಡಾದ ವ್ಯವಸ್ಥಾಪಕರು ಉತ್ತರ ನೀಡಿದ್ದು ನೀವು ಕೇಳಿರುವ 93 ಜನರ ಹಣ ಬ್ಯಾಂಕ್ಗೆ ಸಂದಾಯವೇ ಆಗಿಲ್ಲ ಎಂದು ಉತ್ತರ ಕೊಟ್ಟಿದ್ದಾರೆ. ಅಲ್ಲಿಗೆ ಬ್ಯಾಂಕ್ ಚಲನ್ ಹಾಗೂ ಬ್ಯಾಂಕ್ ಸ್ಹೀಲ್ ಎರಡೂ ನಕಲಿ ಮಾಡಿ ಹಣ ವಂಚಿಸಿರುವ ಶಂಕೆ ವ್ಯಕ್ತವಾಗಿದೆ. ಬ್ಯಾಂಕ್ನ ಕೆಲವು ಸಿಬ್ಬಂದಿ ಹಾಗೂ ಮೂಡಾದ ನೌಕರರು ಸೇರಿ ಗ್ರಾಹಕರಿಂದ ಹಣ ಪಡೆದು ಅವರಿಗೆ ನಕಲಿ ಸ್ಹೀಲ್ ಹಾಕಿರುವ ಚಲನ್ ಕೊಟ್ಟು ವಂಚಿಸಿದ್ದಾರೆ. ಆಮೂಲಕ ನಿರ್ದಿಷ್ಟ ಸೇವೆಯನ್ನು ಗ್ರಾಹಕನಿಗೆ ನೀಡದೇ ಮೂಡಾಗೆ ಸೇರಬೇಕಾದ ಹಣವನ್ನು ತಮ್ಮ ಜೇಬಿಗೆ ಇಳಿಸಿದ್ದಾರೆ ಎನ್ನುವ ಶಂಕೆಯಿದೆ.
Muda scam, another muda scam exposed, challan money misused in Mysuru.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am