ಬ್ರೇಕಿಂಗ್ ನ್ಯೂಸ್
03-11-24 09:54 pm HK News Desk ಕರ್ನಾಟಕ
ಮೈಸೂರು, ನ.3: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಮತ್ತೊಂದು ಮಹಾ ಗೋಲ್ಮಾಲ್ ಪ್ರಕರಣ ಎಂಟು ತಿಂಗಳ ನಂತರ ಬೆಳಕಿಗೆ ಬಂದಿದೆ. ಜನರು ವಿವಿಧ ಸೇವೆಗಳಿಗಾಗಿ ಪ್ರಾಧಿಕಾರಕ್ಕೆ ಕಟ್ಟಿದ ಹಣವನ್ನ ಮುಡಾ ನೌಕರರು ಮತ್ತು ಬ್ಯಾಂಕ್ನ ಕೆಲ ನೌಕರರು ತಮ್ಮ ಜೇಬಿಗೆ ಇಳಿಸಿಕೊಂಡಿದ್ದಾರೆ. ಹೀಗೆ ಜೇಬು ಸೇರಿದ ಹಣದ ಪ್ರಮಾಣ ಕೋಟಿ ದಾಟಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ತನ್ನ ವಿವಿಧ ಸೇವೆಗಳನ್ನು ನೀಡಲು ಹಣ ನಿಗದಿ ಮಾಡಿದೆ. ಇದಕ್ಕಾಗಿ ಬ್ಯಾಂಕ್ ಆಫ್ ಬರೋಡಾದಲ್ಲಿ ಪ್ರಾಧಿಕಾರದ ಬ್ಯಾಂಕ್ ಖಾತೆಯನ್ನು ಮಾಡಿದೆ. ಜನರು ಅಲ್ಲಿ ಹಣ ಕಟ್ಟಿ ಚಲನ್ ಪಡೆದು ಅದನ್ನು ಪ್ರಾಧಿಕಾರದ ಸಂಬಂಧಪಟ್ಟ ಶಾಖೆಗೆ ನೀಡಿದರೆ ಅವರಿಗೆ ಆ ಸೇವೆಯನ್ನು ನೀಡಲಾಗುತ್ತದೆ.
ಕಳೆದ ವರ್ಷ ಹೀಗೆ ಚಲನ್ ಕಟ್ಟಿ ಸೇವೆ ಪಡೆದ ಒಟ್ಟು 93 ಜನರ ಹಣ ಪ್ರಾಧಿಕಾರಕ್ಕೆ ಬಂದಿಲ್ಲ. ಇದರ ಮೊತ್ತ 1 ಕೋಟಿ ರೂ.ಗೂ ಹೆಚ್ಚಿದೆ. ಪ್ರಾಧಿಕಾರದ ಹಣಕಾಸು ಶಾಖೆಯವರು ಬ್ಯಾಂಕ್ ಆಫ್ ಬರೋಡಾದ ವ್ಯವಸ್ಥಾಪಕರಿಗೆ ಪತ್ರ ಬರೆದು 93 ಜನರು ಕಟ್ಟಿರುವ ಹಣ ನಮಗೆ ಡೆಪಾಸಿಟ್ ಮಾಡಿ ಎಂದು ಕೇಳಿದ್ದಾರೆ.
ಈ ಪತ್ರಕ್ಕೆ ಬ್ಯಾಂಕ್ ಆಫ್ ಬರೋಡಾದ ವ್ಯವಸ್ಥಾಪಕರು ಉತ್ತರ ನೀಡಿದ್ದು ನೀವು ಕೇಳಿರುವ 93 ಜನರ ಹಣ ಬ್ಯಾಂಕ್ಗೆ ಸಂದಾಯವೇ ಆಗಿಲ್ಲ ಎಂದು ಉತ್ತರ ಕೊಟ್ಟಿದ್ದಾರೆ. ಅಲ್ಲಿಗೆ ಬ್ಯಾಂಕ್ ಚಲನ್ ಹಾಗೂ ಬ್ಯಾಂಕ್ ಸ್ಹೀಲ್ ಎರಡೂ ನಕಲಿ ಮಾಡಿ ಹಣ ವಂಚಿಸಿರುವ ಶಂಕೆ ವ್ಯಕ್ತವಾಗಿದೆ. ಬ್ಯಾಂಕ್ನ ಕೆಲವು ಸಿಬ್ಬಂದಿ ಹಾಗೂ ಮೂಡಾದ ನೌಕರರು ಸೇರಿ ಗ್ರಾಹಕರಿಂದ ಹಣ ಪಡೆದು ಅವರಿಗೆ ನಕಲಿ ಸ್ಹೀಲ್ ಹಾಕಿರುವ ಚಲನ್ ಕೊಟ್ಟು ವಂಚಿಸಿದ್ದಾರೆ. ಆಮೂಲಕ ನಿರ್ದಿಷ್ಟ ಸೇವೆಯನ್ನು ಗ್ರಾಹಕನಿಗೆ ನೀಡದೇ ಮೂಡಾಗೆ ಸೇರಬೇಕಾದ ಹಣವನ್ನು ತಮ್ಮ ಜೇಬಿಗೆ ಇಳಿಸಿದ್ದಾರೆ ಎನ್ನುವ ಶಂಕೆಯಿದೆ.
Muda scam, another muda scam exposed, challan money misused in Mysuru.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am