ಬ್ರೇಕಿಂಗ್ ನ್ಯೂಸ್
            
                        04-11-24 08:29 pm HK News Desk ಕರ್ನಾಟಕ
            ವಿಜಯಪುರ, ನ.4: ಅಂಬೇಡ್ಕರ್ ಸಂವಿಧಾನದಲ್ಲಿ ವಕ್ಪ್ ಕಾಯ್ದೆ ಬಗ್ಗೆ ಉಲ್ಲೇಖವೇ ಇಲ್ಲ. ಆದರೆ 1954-55 ರಲ್ಲಿ ನೆಹರು ಸರ್ಕಾರ ವಕ್ಪ್ ಕಾಯ್ದೆಯನ್ನು ಸಂವಿಧಾನಕ್ಕೆ ಸೇರಿಸಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಅವರು, ಇಲ್ಲಿ ಯಾವುದೇ ಜಮೀನು ವಕ್ಪ್ ನದ್ದು ಆಗುವುದಕ್ಕೆ ಸಾಧ್ಯವಿಲ್ಲ. ಇಲ್ಲಿನ ಮಠಗಳಿಗೆ ಚಾಲುಕ್ಯರು, ಹೊಯ್ಸಳರು, ಕಿತ್ತೂರು ರಾಣಿ ಚೆನ್ನಮ್ಮ ಜಮೀನು ಕೊಟ್ಟದ್ದು. ಆದರೆ, ಇಂಥವನ್ನೂ ಜಮೀರ್ ಖಾನ್ ವಕ್ಪ್ ಮಾಡಿ ನೋಟಿಸ್ ಕೊಡಿಸಿದ್ದಾರೆ. ಒಂದು ರೀತಿಯಲ್ಲಿ ಮುಸ್ಲಿಮರ ಷರಿಯತ್ ಕಾನೂನನ್ನು ರಾಜ್ಯದಲ್ಲಿ ತರೋಕೆ ಸಿದ್ದರಾಮಯ್ಯ ಹಾಗೂ ಜಮೀರ್ ಹೊರಟಿದ್ದಾರೆ. ನಾವು ಭಾರತದ ಸಂವಿಧಾನದ ಪ್ರಕಾರ ನಡೆಯುವವರು. ಲೋಕಸಭೆಯಲ್ಲಿ ಸಂವಿಧಾನ ಪ್ರತಿ ಹಿಡಿದುಕೊಂಡು ಪ್ರಮಾಣ ವಚನ ಸ್ವೀಕಾರ ಮಾಡುತ್ತೀರಿ. ಇಲ್ಲಿ ಬಂದು ಷರಿಯತ್ ಕಾನೂನು ತರುತ್ತೀರಿ. ಕರ್ನಾಟಕದಲ್ಲಿ ಇದು ನಡೆಯಲ್ಲ. ರಾಜ್ಯದಲ್ಲಿ ಹಲವಾರು ದೇವಸ್ಥಾನಗಳು ವಕ್ಪ್ ಎಂದಾಗಿವೆ. ಇದರ ಹಿಂದೆ ಯಾವ ರೀತಿಯ ಷಡ್ಯಂತ್ರ ಇದೆಯೆಂದು ಅರ್ಥವಾಗುತ್ತದೆ ಎಂದು ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ನೇತೃತ್ವದಲ್ಲಿ ಜಮೀರ್ ರಾಜ್ಯದ ಎಲ್ಲ ಭೂಮಿಯನ್ನು ವಕ್ಪ್ ಅಡಿಯಲ್ಲಿ ತರಲು ಹೊರಟಿದ್ದಾರೆ. ಕಾನೂನು ಬಾಹಿರವಾಗಿ ವಕ್ಪ್ ಅದಾಲತ್ ಮಾಡುತ್ತಿದ್ದಾರೆ. ಇವರು ಯಾವ ಕಾನೂನು ಅಡಿ ವಕ್ಪ್ ಅದಾಲತ್ ಮಾಡುತ್ತಿದ್ದಾರೆ ಎಂದು ಹೇಳಬೇಕಾಗಿದೆ. ರೈತರಿಗೆ ನೀಡಿದ್ದ ನೋಟಿಸ್ ರದ್ದು ಮಾಡಬೇಕು, ಪಹಣಿಯಲ್ಲಿ ನಮೂದಾಗಿರುವ ವಕ್ಪ್ ಬೋರ್ಡ್ ಹೆಸರು ತೆಗೆಯಬೇಕು ಎಂದು ಹೇಳಿದ ಶೋಭಾ, ಉಡುಪಿಯ ಕೃಷ್ಣ ಮಠದ ಮುಂಭಾಗದಿಂದ ಶಿವಳ್ಳಿ ಎಂಬ ಗ್ರಾಮದ ವರೆಗೆ ಸುಲ್ತಾನಪುರ ಎಂದು ದಿಶಾಂಕ ಆ್ಯಪ್ ನಲ್ಲಿ ತೋರಿಸುತ್ತಿದೆ. ಇದರಿಂದ ಆತಂಕದ ವಾತಾವರಣ ಮನೆ ಮಾಡಿದೆ ಎಂದರು.
ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕಗಳು ವಕ್ಪ್ ಅಡಿಯಲ್ಲಿವೆ. ಇದು ಬದಲಾವಣೆ ಆಗಬೇಕು. ವಿಜಯಪುರದ ಡಿಸಿ, ಎಸ್ಪಿ ಕಚೇರಿ, ಜಿಲ್ಲಾಸ್ಪತ್ರೆ ಹಾಗೂ ಇತರೇ ದೇವಸ್ಥಾನಗಳು ಕೂಡ ವಕ್ಪ್ ಭೂಮಿ ಎಂದಾಗಿವೆ. ದಾನದ ಮೂಲಕ ವಕ್ಪ್ ಗೆ ಬರಬೇಕು, ಆದರೆ ಇವೆಲ್ಲಾ ಹೇಗೆ ವಕ್ಪ್ ಎಂದಾದವು. 1974 ರ ಗೆಜೆಟ್ ನೊಟಿಫಿಕೇಷನ್ ಸಂಪೂರ್ಣ ರದ್ದಾಗಬೇಕು. ಇದು ರದ್ದಾಗೋ ವರೆಗೂ ಹೋರಾಟ ಮಾಡುತ್ತೇವೆ ಎಂದರು.
            
            
            There was no waqf in Ambedkar constitution, Hoysalas, Chalukyas gave land to monasteries slams Shobha Karandlaje in vijaypur.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm