ಬ್ರೇಕಿಂಗ್ ನ್ಯೂಸ್
04-11-24 08:29 pm HK News Desk ಕರ್ನಾಟಕ
ವಿಜಯಪುರ, ನ.4: ಅಂಬೇಡ್ಕರ್ ಸಂವಿಧಾನದಲ್ಲಿ ವಕ್ಪ್ ಕಾಯ್ದೆ ಬಗ್ಗೆ ಉಲ್ಲೇಖವೇ ಇಲ್ಲ. ಆದರೆ 1954-55 ರಲ್ಲಿ ನೆಹರು ಸರ್ಕಾರ ವಕ್ಪ್ ಕಾಯ್ದೆಯನ್ನು ಸಂವಿಧಾನಕ್ಕೆ ಸೇರಿಸಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಅವರು, ಇಲ್ಲಿ ಯಾವುದೇ ಜಮೀನು ವಕ್ಪ್ ನದ್ದು ಆಗುವುದಕ್ಕೆ ಸಾಧ್ಯವಿಲ್ಲ. ಇಲ್ಲಿನ ಮಠಗಳಿಗೆ ಚಾಲುಕ್ಯರು, ಹೊಯ್ಸಳರು, ಕಿತ್ತೂರು ರಾಣಿ ಚೆನ್ನಮ್ಮ ಜಮೀನು ಕೊಟ್ಟದ್ದು. ಆದರೆ, ಇಂಥವನ್ನೂ ಜಮೀರ್ ಖಾನ್ ವಕ್ಪ್ ಮಾಡಿ ನೋಟಿಸ್ ಕೊಡಿಸಿದ್ದಾರೆ. ಒಂದು ರೀತಿಯಲ್ಲಿ ಮುಸ್ಲಿಮರ ಷರಿಯತ್ ಕಾನೂನನ್ನು ರಾಜ್ಯದಲ್ಲಿ ತರೋಕೆ ಸಿದ್ದರಾಮಯ್ಯ ಹಾಗೂ ಜಮೀರ್ ಹೊರಟಿದ್ದಾರೆ. ನಾವು ಭಾರತದ ಸಂವಿಧಾನದ ಪ್ರಕಾರ ನಡೆಯುವವರು. ಲೋಕಸಭೆಯಲ್ಲಿ ಸಂವಿಧಾನ ಪ್ರತಿ ಹಿಡಿದುಕೊಂಡು ಪ್ರಮಾಣ ವಚನ ಸ್ವೀಕಾರ ಮಾಡುತ್ತೀರಿ. ಇಲ್ಲಿ ಬಂದು ಷರಿಯತ್ ಕಾನೂನು ತರುತ್ತೀರಿ. ಕರ್ನಾಟಕದಲ್ಲಿ ಇದು ನಡೆಯಲ್ಲ. ರಾಜ್ಯದಲ್ಲಿ ಹಲವಾರು ದೇವಸ್ಥಾನಗಳು ವಕ್ಪ್ ಎಂದಾಗಿವೆ. ಇದರ ಹಿಂದೆ ಯಾವ ರೀತಿಯ ಷಡ್ಯಂತ್ರ ಇದೆಯೆಂದು ಅರ್ಥವಾಗುತ್ತದೆ ಎಂದು ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ನೇತೃತ್ವದಲ್ಲಿ ಜಮೀರ್ ರಾಜ್ಯದ ಎಲ್ಲ ಭೂಮಿಯನ್ನು ವಕ್ಪ್ ಅಡಿಯಲ್ಲಿ ತರಲು ಹೊರಟಿದ್ದಾರೆ. ಕಾನೂನು ಬಾಹಿರವಾಗಿ ವಕ್ಪ್ ಅದಾಲತ್ ಮಾಡುತ್ತಿದ್ದಾರೆ. ಇವರು ಯಾವ ಕಾನೂನು ಅಡಿ ವಕ್ಪ್ ಅದಾಲತ್ ಮಾಡುತ್ತಿದ್ದಾರೆ ಎಂದು ಹೇಳಬೇಕಾಗಿದೆ. ರೈತರಿಗೆ ನೀಡಿದ್ದ ನೋಟಿಸ್ ರದ್ದು ಮಾಡಬೇಕು, ಪಹಣಿಯಲ್ಲಿ ನಮೂದಾಗಿರುವ ವಕ್ಪ್ ಬೋರ್ಡ್ ಹೆಸರು ತೆಗೆಯಬೇಕು ಎಂದು ಹೇಳಿದ ಶೋಭಾ, ಉಡುಪಿಯ ಕೃಷ್ಣ ಮಠದ ಮುಂಭಾಗದಿಂದ ಶಿವಳ್ಳಿ ಎಂಬ ಗ್ರಾಮದ ವರೆಗೆ ಸುಲ್ತಾನಪುರ ಎಂದು ದಿಶಾಂಕ ಆ್ಯಪ್ ನಲ್ಲಿ ತೋರಿಸುತ್ತಿದೆ. ಇದರಿಂದ ಆತಂಕದ ವಾತಾವರಣ ಮನೆ ಮಾಡಿದೆ ಎಂದರು.
ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕಗಳು ವಕ್ಪ್ ಅಡಿಯಲ್ಲಿವೆ. ಇದು ಬದಲಾವಣೆ ಆಗಬೇಕು. ವಿಜಯಪುರದ ಡಿಸಿ, ಎಸ್ಪಿ ಕಚೇರಿ, ಜಿಲ್ಲಾಸ್ಪತ್ರೆ ಹಾಗೂ ಇತರೇ ದೇವಸ್ಥಾನಗಳು ಕೂಡ ವಕ್ಪ್ ಭೂಮಿ ಎಂದಾಗಿವೆ. ದಾನದ ಮೂಲಕ ವಕ್ಪ್ ಗೆ ಬರಬೇಕು, ಆದರೆ ಇವೆಲ್ಲಾ ಹೇಗೆ ವಕ್ಪ್ ಎಂದಾದವು. 1974 ರ ಗೆಜೆಟ್ ನೊಟಿಫಿಕೇಷನ್ ಸಂಪೂರ್ಣ ರದ್ದಾಗಬೇಕು. ಇದು ರದ್ದಾಗೋ ವರೆಗೂ ಹೋರಾಟ ಮಾಡುತ್ತೇವೆ ಎಂದರು.
There was no waqf in Ambedkar constitution, Hoysalas, Chalukyas gave land to monasteries slams Shobha Karandlaje in vijaypur.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 01:01 pm
HK News Staffer
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm