ಬ್ರೇಕಿಂಗ್ ನ್ಯೂಸ್
06-11-24 03:11 pm HK News Desk ಕರ್ನಾಟಕ
ಮೈಸೂರು, ನ 06: ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಕ್ಕೆ ನನಗೇನು ಮುಜುಗರ ಇಲ್ಲ. ಲೋಕಾಯುಕ್ತರಿಗೆ ನಾನು ಎಲ್ಲಾ ಉತ್ತರ ಕೊಟ್ಟಿದ್ದೇನೆ. ಎಲ್ಲವನ್ನೂ ಅವರು ರೆಕಾರ್ಡ್ ಮಾಡಿಕೊಂಡಿದ್ದಾರೆ. ಮತ್ತೆ ವಿಚಾರಣೆ ಬರಲು ನನಗೆ ಹೇಳಿಲ್ಲ. ಇದೊಂದು ಸುಳ್ಳು ಕೇಸ್ ಅಷ್ಟೇ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರಿ ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು 2 ತಾಸು ವಿಚಾರಣೆಗೆ ಒಳಪಡಿಸಲಾಗಿತ್ತು. ವಿಚಾರಣೆ ಮುಗಿಸಿ ಬಂದಿ ಸಿಎಂ ಸಿದ್ದರಾಮಯ್ಯ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

"ಮುಡಾ ಕೇಸ್ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಪ್ರಶ್ನೆ ಕೇಳಿದರು. ಅವರು ಕೇಳಿದ ಪ್ರಶ್ನೆಗಳಿಗೆ ನಾನು ಉತ್ತರ ಕೊಟ್ಟಿದ್ದೇನೆ. ಎಲ್ಲವನ್ನೂ ಅವರು ರೆಕಾರ್ಡ್ ಮಾಡಿದ್ದಾರೆ. ಸುಳ್ಳು ಕೇಸ್ ಹಾಕಿದ್ದಾರೆ ವಿಚಾರಣೆ ಮಾಡಿದ್ದಾರೆ. ಇದರಲ್ಲಿ ನನಗೆ ಏಕೆ ಮುಜುಗರ ಆಗುತ್ತೆ. ಮತ್ತೆ ವಿಚಾರಣೆ ಬರಲು ನನಗೆ ಹೇಳಿಲ್ಲ " ಎಂದು ಸಿಎಂ ಹೇಳಿದರು.
" ಸ್ನೇಹಮಹಿ ಕೃಷ್ಣ ಏನು ದೂರು ನೀಡಿದ್ದಾನೆ. ಅದಕ್ಕಾಗಿ ನನ್ನ ವಿಚಾರಣೆಗೆ ಕರೆದಿದ್ದಾರೆ. ಬಿಜೆಪಿ ಅವರು ಗೋ ಬ್ಯಾಕ್ ಅಂದರೆ ಏನು ಅರ್ಥ. ಹಾಗಿದ್ರೆ ಬಿಜೆಪಿ ತನಿಖೆಗೆ ವಿರುದ್ಧ ಆಗಿದ್ದಾರಾ? ತನಿಖೆ ಆಗಬಾರದು ಅಂತಾ ಹೇಳುತ್ತಿದ್ದಾರಾ? ಹಾಗಾದರೆ ನನ್ನ ಮೇಲೆ ಇವರು ಸುಳ್ಳು ಆರೋಪ ಮಾಡಿದ್ದಾರೆ ಎಂದರ್ಥ " ಎಂದು ಸಿಎಂ ಕಿಡಿಕಾರಿದರು.
ಲೋಕಾಯುಕ್ತ ಮೇಲೆ ಬಿಜೆಪಿಗೆ ನಂಬಿಕೆ ಇಲ್ವಾ?
ಲೋಕಾಯುಕ್ತ ಬೇಡಾ ಸಿಬಿಐಗೆ ನೀಡಿ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, " ಸಿಬಿಐ ಆದರೆ ಯಾರ ಕೈಯಲ್ಲಿ ಇದೆ. ಬಿಜೆಪಿ ಅವರು ಎಲ್ಲಾ ಪ್ರಕರಣವನ್ನು ಸಿಬಿಐಗೆ ಕೊಟ್ಟಿದ್ದಾರಾ? ಲೋಕಾಯುಕ್ತ ಮಾಡಿರೋರು ಯಾರು? ಲೋಕಾಯುಕ್ತ ಸ್ವತಂತ್ರವಾಗಿರುವ ಸಂಸ್ಥೆಯಾಗಿದೆ. ಬಿಜೆಪಿ ಅವರಿಗೆ ಕಾನೂನಿನ ಮೇಲೆ ಗೌರವವಿಲ್ಲ. ಲೋಕಾಯುಕ್ತದ ಮೇಲೆ ನಂಬಿಕೆ ಕಳೆದುಕೊಂಡಿರೋರು ಸಿಬಿಐಗೆ ಕೊಡುತ್ತಾರಾ " ಎಂದು ಪ್ರಶ್ನೆ ಮಾಡಿದರು.
ಸೈಟ್ ವಿಚಾರ ಎಲ್ಲಾವೂ ಕಾನೂನು ಪ್ರಕಾರವೇ ನಡೆದಿದೆ. ನಾವು ಸೈಟ್ ವಾಪಸ್ಸು ನೀಡಿ ತಪ್ಪು ಮಾಡಿದ್ದೇವೆ ಅಂತಾ ಅಲ್ಲ. ನನ್ನ ಮೇಲೆ ಸುಳ್ಳು ಆರೋಪ ಮಾಡಿದ್ರು ಅಂತಾ ನನ್ನ ಹೆಂಡತಿ ತೀರ್ಮಾನ ತಗೊಂಡಿರೋದು. ಈ ಕೇಸ್ನ ನಮ್ಮ ಬಳಿ ಇರುವ ಲಾಯರ್ಗಳು ಫೇಸ್ ಮಾಡ್ತಾರೆ. ಸುಳ್ಳು ಆರೋಪಗಳು ಬಂದಾಗ ವಿಚಾರಣೆಗೆ ಹಾಜರಾಗಬೇಕಾಗಿದೆ. ನನ್ನ ಬಳಿ ಯಾವುದೇ ಡಾಕ್ಯುಮೆಂಟ್ ಇಲ್ಲ. ಇದು ನನಗೆ ಸಂಬಂಧವೇ ಇಲ್ಲ. ಕೋರ್ಟ್ನಲ್ಲಿ ತೀರ್ಮಾನ ಆಗುವವರೆಗೆ ಅದು ಆರೋಪ ಅಷ್ಟೇ. ಇದು ನನಗೆ ಕಪ್ಪು ಮಸಿ ಅಲ್ಲ, ಆರೋಪ ಅಷ್ಟೇ. ಲೋಕಾಯುಕ್ತ ಅವರಿಗೆ ನಾನು ಎಲ್ಲಾ ಉತ್ತರ ಕೊಟ್ಟಿದ್ದೇನೆ ಎಂದು ಸಿಎಂ ಮಾಹಿತಿ ನೀಡಿದರು.
ಮೈಸೂರಲ್ಲಿ ನಡೆದ ಸಿಎಂ ಸಿದ್ದರಾಮಯ್ಯ ಲೋಕಾಯುಕ್ತ ವಿಚಾರಣೆ ಅಂತ್ಯವಾಗಿದೆ. ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯ ವಿಚಾರಣೆ ಎದುರಿಸಿದ ಬಳಿಕ ಕಚೇರಿಯಿಂದ ನಿರ್ಗಮಿಸಿದ್ದಾರೆ. ಸತತ ಒಂದೂವರೆ ಗಂಟೆ ಪ್ರಶ್ನೆಗಳನ್ನ ಎದುರಿಸಿ ಸಿಎಂ ತೆರಳಿದ್ದಾರೆ. ಲೋಕಾಯುಕ್ತ ಎಸ್ಪಿ ಉದೇಶ್ ಸಿಎಂ ಗೆ ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ. ಎಲ್ಲದಕ್ಕೂ ಸಿಎಂ ಸಿದ್ದರಾಮಯ್ಯ ಸಾವಧಾನವಾಗಿ ಉತ್ತರಿಸಿದ್ದಾರೆ. ಮೂಲಗಳ ಪ್ರಕಾರ 30 ಕ್ಕೂ ಹೆಚ್ಚು ಪ್ರಶ್ನೆ ಕೇಳಿದ್ದಾರೆ ಎನ್ನಲಾಗುತ್ತಿದೆ. ಎಲ್ಲ ಪ್ರಶ್ನೆಗಳಿಗೂ ಸಿಎಂ ಯೋಚಿಸಿ ಉತ್ತರ ನೀಡಿದ್ದಾರೆ ಎನ್ನಲಾಗಿದೆ.
Chief Minister Siddaramaiah was questioned by the Lokayukta police for nearly two hours in connection with the alleged irregularities in the allotment of compensatory sites to his wife by Mysuru Urban Development Authority (MUDA) on Wednesday (November 6, 2024).
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm