ಬ್ರೇಕಿಂಗ್ ನ್ಯೂಸ್
07-11-24 06:49 pm Bangalore Correspondent ಕರ್ನಾಟಕ
ಬೆಂಗಳೂರು, ನ.7: ಕರ್ನಾಟಕದ ವಕ್ಫ್ ಬೋರ್ಡ್ ವಿವಾದ ತಾರಕಕ್ಕೇರುತ್ತಿದ್ದಂತೆ ಸಮಸ್ಯೆ ಆಲಿಸಲು ಸಂಸತ್ತಿನ ಜೆಪಿಸಿ ಅಧ್ಯಕ್ಷರೇ ಬಂದಿದ್ದು ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಹಲವು ಜಿಲ್ಲೆಗಳಿಗೆ ಭೇಟಿ ಕೊಟ್ಟು, ರೈತರಿಂದ ಅಹವಾಲು ಸ್ವೀಕರಿಸುವ ಮೂಲಕ ವಕ್ಫ್ ಆಸ್ತಿ ಪರಿಶೀಲನೆಗೆ ಮುಂದಾಗಿದ್ದಾರೆ. ಇದೇ ವೇಳೆ, ಸದನ ಸಮಿತಿ ಅಧ್ಯಕ್ಷ ಜಗದಾಂಬಿಕಾ ಪಾಲ್ ನಡೆಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆದಿಯಾಗಿ ರಾಜ್ಯ ಸರ್ಕಾರದ ಸಚಿವರು, ಶಾಸಕರು, ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತೊಂದ್ಕಡೆ, ತೇಪೆ ಹಚ್ಚುವ ಹೇಳಿಕೆಯನ್ನೂ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್, ವಕ್ಫ್ ಜಂಟಿ ಸದನ ಸಮಿತಿ ಪಕ್ಷದ ಕೆಲಸಕ್ಕೆ ಬಂದಿರುವಂತೆ ತೋರುತ್ತಿದೆ. ರಾಜ್ಯದಲ್ಲಿ ಅಹವಾಲು ಸ್ವೀಕಾರ ಮಾಡೋದಕ್ಕು ಮುನ್ನ ಸರ್ಕಾರದ ಗಮನಕ್ಕೆ ತರಬೇಕಿತ್ತು. ಅದನ್ನು ಮಾಡಿಲ್ಲ. ಜೊತೆಗೆ ಅಧ್ಯಕ್ಷರು ತನ್ನ ಎಲ್ಲ ಸದಸ್ಯರನ್ನೂ ಕರೆತರಬೇಕಿತ್ತು. ಜೆಪಿಸಿ ಒಂದು ನಾಟಕ ಕಂಪನಿ ಆಗಿದೆ. ಬಸವರಾಜ ಬೊಮ್ಮಾಯಿ ಅವಧಿಯಲ್ಲಿ ಪಹಣಿ ಪತ್ರಗಳಲ್ಲಿ ತಿದ್ದುಪಡಿ ಆಗಿದೆ. ಬಿಜೆಪಿ ಅವಧಿಯಲ್ಲಿ ರೈತರಿಗೆ ನೋಟಿಸ್ ಕೂಡ ಮಾಡಿದ್ದಾರೆ. ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ರೈತರ ಆಸ್ತಿ ಕಬಳಿಸೋ ಪ್ರಶ್ನೆ ಇಲ್ಲ. ಬಿಜೆಪಿ ಸರ್ಕಾರ ಮಾಡಿದ್ದ ತಪ್ಪನ್ನು ಸರಿಪಡಿಸಿ ನಾವು ರೈತರನ್ನ ಉಳಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.
ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ರಾಜ್ಯಕ್ಕೆ ಜೆಪಿಸಿ ಕಮಿಟಿ ಭೇಟಿ ರಾಜಕೀಯ ಪ್ರೇರಿತ. ಜಂಟಿ ಪಾರ್ಲಿಮೆಂಟ್ ಕಮಿಟಿ ಅಂದ್ರೆ ಏನು? ಕಮಿಟಿ ಭೇಟಿ ಅಂದ್ರೆ ಎಲ್ಲಾ ಸದಸ್ಯರು ಬರಬೇಕಲ್ವಾ? ಬರೀ ಅದ್ಯಕ್ಷಕರು ಮಾತ್ರ ಬಂದಿದ್ದಾರೆ. ಅವರ ಜೊತೆ ಯಾರಿದ್ದಾರೆ. ಬಿಜೆಪಿ ಮಾಜಿ ಎಂಪಿ ಇದ್ದಾರೆ. ಅವರೆಲ್ಲಾ ಕಮಿಟಿಗೆ ಏನು ಸಂಬಂಧ? ವಕ್ಫ್ ತೆಗೆಯಬೇಕು ಎಂದು ಬಿಜೆಪಿಯವರು ಹೇಳುತ್ತಾರೆ ಅಲ್ವಾ.. ಒಂದೂವರೆ ವರ್ಷದ ಹಿಂದೆ ಬಿಜೆಪಿ ಸರ್ಕಾರನೇ ಇತ್ತು. ಆಗ ಏನು ಇವರು ಕತ್ತೆ ಕಾಯುತ್ತಿದ್ದರಾ ಎಂದು ವಾಗ್ದಾಳಿ ನಡೆಸಿದರು.
"Nothing but a BJP-sponsored committee": Priyank Kharge on JPC Chairman's Karnataka visit amid Waqf land issue.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am