ಬ್ರೇಕಿಂಗ್ ನ್ಯೂಸ್
08-11-24 01:58 pm Bangalore Correspondent ಕರ್ನಾಟಕ
ಬೆಂಗಳೂರು, ನ.8: IIT/IIM/IISC /NIT ಯಂತಹ ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ SC/ST ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು 1 ರಿಂದ 2 ಲಕ್ಷಕ್ಕೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದ್ದು ಇದು ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳ ಹೆಚ್ಚಿನ ಶೈಕ್ಷಣಿಕ ಸಾಧನೆಗೆ ಕಾರಣವಾಗಲಿದೆ ಎಂದು ಸಮಾಜ ಕಲ್ಯಾಣ ಸಚಿವರಾದ ಡಾ. ಹೆಚ್.ಸಿ ಮಹದೇವಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಿಯುಸಿ ಪರೀಕ್ಷೆಯಲ್ಲಿ 95ಕ್ಕೂ ಹೆಚ್ಚಿನ ಅಂಕಗಳನ್ನು ಪಡೆದು, ನೀಟ್ ಪ್ರವೇಶ ಪರೀಕ್ಷೆಯ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ದೊರಕದೇ ಮ್ಯಾನೇಜ್ ಮೆಂಟ್ ಕೋಟಾದಡಿ ಎಂಬಿಬಿಎಸ್ ಕೋರ್ಸ್ ಗೆ ಸೀಟು ಪಡೆದುಕೊಂಡ ಪರಿಶಿಷ್ಟ ಜಾತಿಯ ಮಕ್ಕಳಿಗೆ 25 ಲಕ್ಷ ರೂಪಾಯಿಗಳ ಶುಲ್ಕ ಧನವನ್ನು ಒದಗಿಸಲು ಸರ್ಕಾರ ತೀರ್ಮಾನಿಸಿದೆ.

ಎಂಬಿಬಿಎಸ್ ಪದವಿಯನ್ನು ಪಡೆಯುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಮೊದಲ ವರ್ಷ 60% ಗೂ ಹೆಚ್ಚಿನ ಅಂಕಗಗಳನ್ನು ಪಡೆದು ಉತ್ತೀರ್ಣ ರಾದರೆ ಅವರಿಗೆ ಅವರಿಗೆ ಮತ್ತೆ 25 ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನವನ್ನು ನೀಡಲಾಗುವುದು. ಶಿಕ್ಷಣವೇ ಸಮಾಜವನ್ನು ಬದಲಿಸುವ ಕೀಲಿಕೈ ಎಂಬ ಅಂಶವನ್ನು ಮನಗಂಡು ಈ ಒಂದು ಮಹತ್ವದ ಘೋಷಣೆಯನ್ನು ಸರ್ಕಾರವು ಮಾಡಿದ್ದು, ಇದರಿಂದ ಉನ್ನತ ಶಿಕ್ಷಣ ಮಾಡಬೇಕೆಂಬ ವಿದ್ಯಾರ್ಥಿಗಳ ಕನಸ್ಸು ನನಸಾಗಲಿದೆ.
ಇನ್ನು ಬಡತನದ ಬೇಗೆಗೆ ಸಿಲುಕಿ ಎಂಬಿಬಿಎಸ್ ಓದುವ ಬಯಕೆ ಇರುವಂತಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸರ್ಕಾರಿ ಕೋಟಾದಡಿ ಸೀಟು ಸಿಗದೇ ಅವರು ಖಾಸಗೀ ಸಂಸ್ಥೆಗಳಲ್ಲಿ ಓದುತ್ತಿದ್ದರೆ, ಅಂತಹ ಪ್ರತಿಭಾವಂತ ಮಕ್ಕಳ ಶುಲ್ಕವನ್ನು ಸರ್ಕಾರ ಭರಿಸಲಿದ್ದು, ಇದಕ್ಕಾಗಿ ಆರಂಭಿಕವಾಗಿ 25 ಲಕ್ಷ ರೂಪಾಯಿಗಳನ್ನು ನೀಡುವ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Increase in incentive fund for SC ST children studying in national educational institutions from 1 to 2 lakhs Minister HC Mahadevappa.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 01:01 pm
HK News Staffer
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm