ಬ್ರೇಕಿಂಗ್ ನ್ಯೂಸ್
08-11-24 09:43 pm HK News Desk ಕರ್ನಾಟಕ
ರಾಮನಗರ, ನ.8: ಚನ್ನಪಟ್ಟಣದಲ್ಲಿ ಕಾಂಗ್ರೆಸ್ ನಾಯಕರ ಜೊತೆಗೆ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಪ್ರಚಾರದಲ್ಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸವಾಲು ಹಾಕಿದ್ದಾರೆ. ಧೈರ್ಯ, ತಾಕತ್ ಇದ್ದರೆ ಸೋಮಶೇಖರ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಕಾಂಗ್ರೆಸ್ ನಿಂದ ಸ್ಪರ್ಧಿಸಿ ಗೆದ್ದು ತೋರಿಸಲಿ ಸವಾಲೆಸೆದಿದ್ದಾರೆ.
ಎಸ್.ಟಿ ಸೋಮಶೇಖರ್ ರನ್ನು ನಾವು ಪಾರ್ಟಿಗೆ ತಂದ್ವಿ. ಅವರಿಗೆ ಅತ್ಯಂತ ಪ್ರಮುಖ ಖಾತೆ ಕೊಟ್ಟು, ಮೈಸೂರಿನಂತ ಸಾಂಸ್ಕೃತಿಕ ಜಿಲ್ಲೆಗೆ ಉಸ್ತುವಾರಿ ಮಾಡಿದ್ವಿ. ಅವರ ನನ್ನ ಚುನಾವಣೆ ಮಾಡಿಲ್ಲ. ಆದರೆ ಯಶವಂತಪುರ ಜನತೆ ಒಂದು ಕಾಲು ಲಕ್ಷ ಮತವನ್ನು ಅಂತರವಾಗಿ ಕೊಟ್ಟರು. ಅವರು ಈವಾಗ ಎರಡು ದೋಣಿಗಳ ಮೇಲೆ ಕಾಲಿಟ್ಟಿದ್ದಾರೆ. ಅವರ ಶರೀರ ಒಂದು ಕಡೆ, ತಲೆ ಒಂದು ಕಡೆ. ಸೋಮಶೇಖರ್ ಪಾರ್ಟಿ ಯಾವುದಪ್ಪ..? ಅವರಿಗೆ ಅವ್ರು ಯಾವ ಪಾರ್ಟಿ ಅಂತನೂ ಹೇಳೋಕೆ ಆಗದ ಪರಿಸ್ಥಿತಿಯಲ್ಲಿದ್ದಾರೆ.
ಶಾಸಕರಾಗಿ ಆಯ್ಕೆ ಆಗಿದ್ದು ಬಿಜೆಪಿ, ಆದರೆ ಇರೋದು ಮಾತ್ರ ಕಾಂಗ್ರೆಸ್ನಲ್ಲಿ. ಅವರಿಗೆ ಧೈರ್ಯ, ಶಕ್ತಿ ಇದ್ದರೆ ರಾಜೀನಾಮೆ ಕೊಟ್ಟು, ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡಬೇಕಿತ್ತು. ಆವಾಗ ಅವರ ಶಕ್ತಿ ಏನು ಎಂದು ನೋಡಬಹುದಿತ್ತು. ಆದರೆ ಆ ಯಾವ ಶಕ್ತಿಯೂ ಅವರಲ್ಲಿ ಉಳಿದುಕೊಂಡಿಲ್ಲ. ಕಮಿಷನ್ ಗಾಗಿ, ದುಡ್ಡು ಹೊಡೆಯೋಕೆ ಕಾಂಗ್ರೆಸ್ ಗೆ ಹೋಗಿದ್ದಾರೆ. ಸರ್ಕಾರದ ಶೆಲ್ಟರ್ ಗಾಗಿ ಕಾಂಗ್ರೆಸ್ ಜೊತೆ ಇದ್ದಾರೆ. ಅವರದ್ದು ಹಾಗೂ ಬಿಜೆಪಿಯ ಸಂಬಂಧ ಉಳಿದುಕೊಂಡಿಲ್ಲ. ಅವ್ರು ತ್ರಿಶಂಕುವಾಗಿಯೇ ಇರಬೇಕೆಂದು ನಾವು ಬಯಸುತ್ತೇವೆ.
ಅವರು ತಮ್ಮ ಮರ್ಯಾದೆ ಉಳಿಸಿಕೊಳ್ಳಲು ಅವ್ರು ಎಲ್ಲಿ ಇರಬೇಕೆಂದು ತೀರ್ಮಾನ ಮಾಡಲಿ. ಅವರನ್ನು ನಾವು ಪಕ್ಷದಿಂದ ತೆಗೆದುಬಿಟ್ಟರೆ ಅವರು ಆರಾಮವಾಗಿ ಇದ್ದು ಬಿಡ್ತಾರೆ. ದೋಖಾ ಮಾಡಿರೋ ಯೋಗೇಶ್ವರ್ ಹಾಗೂ ಸೋಮಶೇಖರ್ ರನ್ನು ಪಕ್ಷದಲ್ಲಿ ಉಳಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ಮುಂದಿನ ದಿನಗಳಲ್ಲಿ ಅವರನ್ನು ಸೇರಿಸುವ ಪಕ್ಷಕ್ಕೆ ಪ್ರಶ್ನೆಯೇ ಬರಲ್ಲ. ಅವರ ವಿರುದ್ಧ ಯಶವಂತಪುರದಲ್ಲಿ ಪಕ್ಷದಲ್ಲೇ ಕಾರ್ಯಕರ್ತನನ್ನು ಬೆಳೆಸಿ ಸ್ಪರ್ಧಿಸಿ, ಅವರನ್ನು ಮನೆಗೆ ಕಳುಹಿಸುವ ಕೆಲಸವನ್ನು ನಾವು ಮಾಡುತ್ತೇವೆ ಎಂದ ಶೋಭಾ ಕರಂದ್ಲಾಜೆ ಹೇಳಿದರು.
Shobha Karandlaje slams MLA Somashekar. If Somashekar has guts let him resign from his post and contest from congress and win.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am