ಬ್ರೇಕಿಂಗ್ ನ್ಯೂಸ್
            
                        11-11-24 08:21 pm Bangalore Correspondent ಕರ್ನಾಟಕ
            ಬೆಂಗಳೂರು, ನ.11: ಕೋವಿಡ್ ಕಾಲದಲ್ಲಾದ ಭ್ರಷ್ಟಾಚಾರಗಳ ಕುರಿತು ನಿವೃತ್ತ ನ್ಯಾ. ಮೈಕಲ್ ಡಿಕುನ್ಹಾ ಅವರ ಆಯೋಗದ ವರದಿಯಲ್ಲಿ ಮಾಜಿ ಸಿಎಂ ಬಿಎಸ್ ವೈ ಹಾಗೂ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ ಗೆ ಶಿಫಾರಸ್ಸು ಮಾಡಿರುವ ವಿಚಾರದಲ್ಲಿ ಜಸ್ಟಿಸ್ ಡಿಕುನ್ಹಾ ಅವರನ್ನ ಕಾಂಗ್ರೆಸ್ ಏಜೆಂಟ್ ಎಂದು ಕರೆದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆಗೆ ಖಂಡನೆ ವ್ಯಕ್ತವಾಗಿದ್ದು ಪ್ರಲ್ಹಾದ್ ಜೋಶಿ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ರಾಜ್ಯ ಸರ್ಕಾರದ ಮುಖ್ಯ ವಕ್ತಾರ ದಿನೇಶ್ ಗುಂಡೂರಾವ್ ಹಾಗೂ ಕಂದಾಯ ಸಚಿವ ಕೃಷ್ಣ ಬೈರೇಗೌಡ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.
ದೂರು ಸಲ್ಲಿಕೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ನಿವೃತ್ತ ನ್ಯಾಯಮೂರ್ತಿಯಾಗಿ ಜಸ್ಟಿಸ್ ಕುನ್ಹಾ ಅವರು ಅತ್ಯಂತ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಿದವರು. ಗೌರವಾನ್ವಿತ ವ್ಯಕ್ತಿ ಬಗ್ಗೆ ಕೇಂದ್ರ ಸಚಿವರಾಗಿ ಪ್ರಲ್ಹಾದ್ ಜೋಶಿ ವೈಯಕ್ತಿಕ ನಿಂದನೆ ಮಾಡಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ತಮ್ಮ ಹೇಳಿಕೆಗೆ ಪ್ರಲ್ಹಾದ್ ಜೋಶಿ ಕ್ಷಮೆ ಕೇಳಬೇಕು ಎಂದು ಆಗ್ರಹಿದರು.
ಕೇಂದ್ರ ಸಚಿವರು ಎಂದಾಕ್ಷಣ ಏನು ಬೇಕಾದರು ಮಾತನಾಡಬಹುದು ಎಂಬ ಅಹಂಕಾರ ಪ್ರವೃತ್ತಿಯಲ್ಲಿ ಪ್ರಲ್ಹಾದ್ ಜೋಶಿಯವರಿದ್ದಾರೆ. ಇತ್ತೀಚೆಗೆ ಜೋಶಿ ಅವರ ಹೇಳಿಕೆಗಳು ಅಹಂಕಾರದಿಂದ ಕೂಡಿವೆ. ಜಸ್ಟೀಸ್ ಆಗಿದ್ದವರನ್ನ ಕಾಂಗ್ರೆಸ್ ಏಜೆಂಟ್ ಎಂದರೆ ಏನರ್ಥ.. ಜೋಶಿಯವರು ರಾಜಕಾರಣಿಗಳಾದ ನಮ್ಮ ಮೇಲೆ ಮಾತನಾಡಲಿ. ಅಥವಾ ಕಾನೂನು ಹೋರಾಟ ನಡೆಸಲಿ. ಆದರೆ ಗೌರವಾನ್ವಿತ ನ್ಯಾಯಮೂರ್ತಿಗಳ ವೈಯಕ್ತಿಕ ನಿಂದನೆ ಸರಿಯಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಕುನ್ಹಾ ಅವರ ಆಯೋಗ ಅಂತಿಮ ವರದಿ ಸಲ್ಲಿಸುವ ಮುನ್ನ ಅವರ ಮೇಲೆ ಒತ್ತಡ ತರುವ ಪ್ರಯತ್ನವನ್ನ ಪ್ರಲ್ಜಾದ್ ಜೋಶಿ ನಡೆಸುತ್ತಿದ್ದಾರೆ. ಕುನ್ಹಾ ಅವರನ್ನ ಕಾಂಗ್ರೆಸ್ ಏಜೆಂಟ್ ಎಂದಿರುವುದು ಒತ್ತಡ ತಂತ್ರದ ಒಂದು ಭಾಗ. ವರದಿಯನ್ನ ವಿಮರ್ಶಿಸಲಿ. ಆದರೆ ಕುನ್ಹಾ ಅವರ ವೈಯಕ್ತಿಕ ನಿಂದನೆ ಸರಿಯಲ್ಲ. ಪ್ರಲ್ಜಾದ್ ಜೋಶಿ ಒಬ್ಬ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರಾಗಿದ್ದವರು, ನಮ್ಮ ತನಿಖಾ ಆಯೋಗಗಳು, ವ್ಯವಸ್ಥೆಗಳ ವಿರುದ್ಧ ಮಾತನಾಡುತ್ತಿರುವುದು ದುರಂತ. ಈ ರೀತಿ ನಿಂದನೆಗಳನ್ನ ಮಾಡಿದರೆ ಮುಂದೆ ಯಾರು ಕೂಡ ತನಿಖೆ ನಡೆಸುವ ಜವಾಬ್ದಾರಿ ತೆಗೆದುಕೊಳ್ಳಲು ಮುಂದೆ ಬರದಿರುವ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಸಚಿವ ದಿನೇಶ್ ಗುಂಡೂರಾವ್ ಜೋಶಿ ವಿರುದ್ಧ ವಾಗ್ದಾಳಿ ನಡೆಸಿದರು.
ಕಮಿಷನ್ inquiry act 1952 ಪ್ರಕಾರ ಪ್ರಲ್ಹಾದ್ ಜೋಶಿ ಅವರ ಹೇಳಿಕೆ ಕಾನೂನು ಬಾಹಿರವಾಗಿದೆ. 6 ತಿಂಗಳ ವರೆಗೆ ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ. ಹೀಗಾಗಿ ಈ ವಿಚಾರವನ್ನ ರಾಷ್ಟ್ರಪತಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳಲು ರಾಜ್ಯಪಾಲರಿಗೆ ದೂರು ಸಲ್ಲಿಸಲಾಗಿದೆ. ರಾಜ್ಯಪಾಲರು ನಮ್ಮ ಅಹಾವಾಲುಗಳನ್ನ ತಾಳ್ಮೆಯಿಂದ ಆಲಿಸಿದ್ದು, ಈ ರೀತಿಯ ವೈಯಕ್ತಿಕ ಹೇಳಿಕೆಗಳನ್ನ ನೀಡುವುದು ಸರಿಯಲ್ಲ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು ಎಂದು ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
            
            
            Union Minister Pralhad Joshi accused Justice Michael D’Cunha of acting as an agent while investigating the procurement of PPE kits by the former BJP government during the 2020 Covid pandemic. Joshi questioned the timing of the interim report, which recommended prosecuting former Chief Minister BS Yediyurappa and Health Minister B Sriramulu. He suggested the report was released to distract voters during elections.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 06:15 pm
                        
            
                  
                Mangalore Correspondent    
            
                    
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm