ಬ್ರೇಕಿಂಗ್ ನ್ಯೂಸ್
12-11-24 03:12 pm Bangalore Correspondent ಕರ್ನಾಟಕ
ಬೆಂಗಳೂರು, ನ.12: ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹನ್ನೊಂದು ಸರ್ಕಾರಿ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದು ಆಸ್ತಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು, ಬೆಳಗಾವಿ, ಹಾವೇರಿ, ದಾವಣಗೆರೆ, ಕಲಬುರಗಿ, ಮೈಸೂರು, ರಾಮನಗರ ಮತ್ತು ಧಾರವಾಡ ಸೇರಿದಂತೆ ಹಲವೆಡೆ ದಾಳಿ ನಡೆದಿದ್ದು, ಅಧಿಕಾರಿಗಳಿಗೆ ಸಂಬಂಧಿತ ದಾಖಲೆಗಳು, ಆಸ್ತಿ, ಬೆಲೆಬಾಳುವ ವಸ್ತುಗಳನ್ನು ಪರಿಶೀಲಿಸುತ್ತಿದ್ದಾರೆ. ದಾವಣಗೆರೆಯಲ್ಲಿ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಸಹಾಯಕ ನಿರ್ದೇಶಕ ಕಮಲ್ ರಾಜ್ ಮನೆಗೆ ದಾಳಿಯಾಗಿದೆ. ಅನುಕಂಪದ ಆಧಾರದಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ನೇಮಕಗೊಂಡಿದ್ದ ಕಮಲ್ ರಾಜ್ ಬಡ್ತಿ ಪಡೆದು ಸಹಾಯಕ ನಿರ್ದೇಶಕರಾಗಿದ್ದರು. ಚಿತ್ರದುರ್ಗ ಹಾಗೂ ದಾವಣೆಗೆರೆಯಲ್ಲಿ ಮನೆ, ಮೂರು ನಿವೇಶನ ಸೇರಿ ಇತರೆ ಆಸ್ತಿಗಳನ್ನು ಲೋಕಾಯುಕ್ತ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.


ಧಾರವಾಡದ ಕೆಐಎಡಿಬಿ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ಗೋವಿಂದಪ್ಪ ಭಜಂತ್ರಿ ಅವರ ಸಂಬಂಧಿಕರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಅಧಿಕಾರಿಯಾಗಿರುವ ವೆಂಕಟೇಶ್ ಎಂಬವರ ಬೆಳಗಾವಿ ನಿವಾಸದ ಮೇಲೆ ದಾಳಿ ನಡೆದಿದೆ. ವೆಂಕಟೇಶ್ ಈ ಹಿಂದೆ ಬೆಳಗಾವಿಯಲ್ಲಿ ಕಾರ್ಯ ನಿರ್ವಹಿಸಿದ್ದರು.
ಬೀದರ್ ಜಿಲ್ಲಾ ತರಬೇತಿ ಕೇಂದ್ರದ ಸಹಾಯಕ ನಿರ್ದೇಶಕ ರವೀಂದ್ರ ರೊಟ್ಟಿ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬೀದರ್, ಬೆಂಗಳೂರು ನಿವಾಸ, ಕಚೇರಿ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದ್ದು, ದಾಖಲೆ ಹಾಗೂ ಇನ್ನಿತರ ಮಾಹಿತಿ ಕಲೆ ಹಾಕಲಾಗಿದೆ.
ಹಾವೇರಿಯ ಬಸವೇಶ್ವರ ನಗರದಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಉಪ ವಿಭಾಗದ ಎಇ ಕಾಶೀನಾಥ್ ಭಜಂತ್ರಿ ಮನೆ ಮೇಲೆ ದಾಳಿ ನಡೆದಿದ್ದು, 14 ಲಕ್ಷ ರೂ. ನಗದು ವಶಪಡಿಸಿದ್ದಾರೆ. ಬೆಳಗ್ಗೆ ಮನೆಯಲ್ಲಿ ಮಲಗಿದ್ದ ಭಜಂತ್ರಿ, ಲೋಕಾಯುಕ್ತ ಅಧಿಕಾರಿಗಳ ದಾಳಿ ಸುಳಿವು ಸಿಗುತ್ತಿದ್ದಂತೆಯೇ ಸುಮಾರು 9 ಲಕ್ಷ ರೂ. ಹಣದ ಗಂಟನ್ನು ಕಿಟಿಕಿಯಿಂದ ಆಚೆ ಎಸೆದಿದ್ದಾರೆ. ಆದರೆ, ತಕ್ಷಣ ಗಮನಿಸಿದ ಲೋಕಾಯುಕ್ತ ಅಧಿಕಾರಿಗಳು ಅದನ್ನು ವಶಕ್ಕೆ ಪಡೆದಿದ್ದಾರೆ.
ರಾಣೆಬೆನ್ನೂರು ನಗರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿಯಾಗಿ ಕೆಲಸ ಮಾಡುತ್ತಿರುವ ಜ್ಯೋತಿ ಶಿಗ್ಲಿ ಅವರ ಮನೆಗೆ ದಾಳಿಯಾಗಿದ್ದು, ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ.
Karnataka Lokayukta on Tuesday morning launched surprise raids on nine government officials in different parts of the state. The simultaneous raids are underway in as many as 40 locations belonging to the suspects, officials said.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm